Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಯಕರ್ತರಿಗೆ ಕಿರುಕುಳ ಕೊಟ್ಟರೇ ಸುಮ್ಮನೆ ಇರಲ್ಲ: ಬಳ್ಳಾರಿ ಕಾಂಗ್ರೆಸ್​ ಶಾಸಕನಿಗೆ ಜನಾರ್ದನ ರೆಡ್ಡಿ ಪರೋಕ್ಷ ಎಚ್ಚರಿಕೆ

ರಾಜಕೀಯ ಕುತಂತ್ರದಿಂದ ಬಳ್ಳಾರಿಯಿಂದ ಹೊರಗೆ ಕಳುಹಿಸಲಾಯ್ತು. ಯಾರನ್ನು ನಾನು ಬೆಳೆಸಿದ್ದೇನೆ ಅವರು ನನಗೆ ಮೋಸ ಮಾಡಿದರು. ಹೀಗಾಗಿ ಅವರನ್ನು ಕಳೆದ ಚುನಾವಣೆಯಲ್ಲಿ ಜನರು ಸೋಲಿಸಿದರು ಎಂದು ಪರೋಕ್ಷವಾಗಿ ಶ್ರೀರಾಮುಲು, ಸೋಮಶೇಖರ್ ರೆಡ್ಡಿ ವಿರುದ್ಧ ಜನಾರ್ದನ ರೆಡ್ಡಿ ವಾಗ್ದಾಳಿ ಮಾಡಿದರು.

ಕಾರ್ಯಕರ್ತರಿಗೆ ಕಿರುಕುಳ ಕೊಟ್ಟರೇ ಸುಮ್ಮನೆ ಇರಲ್ಲ: ಬಳ್ಳಾರಿ ಕಾಂಗ್ರೆಸ್​ ಶಾಸಕನಿಗೆ ಜನಾರ್ದನ ರೆಡ್ಡಿ ಪರೋಕ್ಷ ಎಚ್ಚರಿಕೆ
ಶಾಸಕ ಜನಾರ್ದನ ರೆಡ್ಡಿ
Follow us
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: ವಿವೇಕ ಬಿರಾದಾರ

Updated on:Aug 25, 2023 | 1:51 PM

ಬಳ್ಳಾರಿ: ನಮ್ಮ ಕೆಆರ್​ಪಿಪಿ (KRPP) ಪಕ್ಷದವರು ಸರ್ಕಾರಿ ಕಚೇರಿಗಳಿಗೆ ಬಂದರೇ ಕೆಲಸ ಮಾಡಬೇಡಿ ಎಂದು ಹೇಳುತ್ತಿದ್ದಾರೆ. ಇದು ಸರಿಯಲ್ಲ. ಬಳ್ಳಾರಿ (Ballari) ಅಭಿವೃದ್ಧಿ ಮಾಡಿಮಾಡಿಲ್ಲ ಅಂದರೇ ಕೆಆರ್​​ಪಿಪಿ ಪಕ್ಷದ ವತಿಯಿಂದ ಹೋರಾಟ ಮಾಡುತ್ತವೆ. ಕೆಆರ್​​​​​ಪಿಪಿ ಪಕ್ಷದ ಕಾರ್ಯಕರ್ತರಿಗೆ ಕಿರುಕುಳ ತೊಂದರೆ ಕೊಟ್ಟರೇ ಸುಮ್ಮನೆ ಇರುವ ಮಾತಿಲ್ಲ. ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೇ ವಿಧಾನಸೌಧದ ಒಳಗೆ ಹೊರಗೆ ಹೋರಾಟ ಮಾಡುತ್ತೇನೆ. ಎಂದು ಪರೋಕ್ಷವಾಗಿ ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ಮತ್ತು ಉಸ್ತುವಾರಿ ಸಚಿವರಿಗೆ,ಕೆಆರ್​ಪಿಪಿ ಶಾಸಕ ಜನಾರ್ದನ ರೆಡ್ಡಿ (Janardhan Reddy) ಎಚ್ಚರಿಕೆ ನೀಡಿದ್ದಾರೆ.

ವರಮಹಾಲಕ್ಷ್ಮೀ ಹಬ್ಬದ ಹಿನ್ನಲೆಯಲ್ಲಿ ಇಂದು (ಆ.25) ಬಳ್ಳಾರಿಯಲ್ಲಿ ಕೆಆರ್​​ಪಿಪಿ ಪಕ್ಷದ ವತಿಯಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಜನಾರ್ದನ ರೆಡ್ಡಿ ವರ್ಚ್ಯುಯಲ್ ಮೂಲಕ ಭಾಗವಹಿಸಿ ಮಾತನಾಡಿದ ಅವರು ರಾಜಕೀಯ ಕುತಂತ್ರದಿಂದ ಬಳ್ಳಾರಿಯಿಂದ ಹೊರಗೆ ಕಳುಹಿಸಲಾಯ್ತು. ಯಾರನ್ನು ನಾನು ಬೆಳೆಸಿದ್ದೇನೆ ಅವರು ನನಗೆ ಮೋಸ ಮಾಡಿದರು. ಹೀಗಾಗಿ ಅವರನ್ನು ಕಳೆದ ಚುನಾವಣೆಯಲ್ಲಿ ಜನರು ಸೋಲಿಸಿದರು ಎಂದು ಪರೋಕ್ಷವಾಗಿ ಶ್ರೀರಾಮುಲು, ಸೋಮಶೇಖರ್ ರೆಡ್ಡಿ ವಿರುದ್ಧ ವಾಗ್ದಾಳಿ ಮಾಡಿದರು.

ಇದನ್ನೂ ಓದಿ:  ಅಂಜನಾದ್ರಿ ಹೆಸರಿನಲ್ಲಿ ರಾಜಕೀಯ: ಬಿಜೆಪಿ ವಿರುದ್ಧ ಶಾಸಕ ಜನಾರ್ದನ ರೆಡ್ಡಿ ಅಸಮಾಧಾನ

ನನ್ನ ಪತ್ನಿ ಲಕ್ಷ್ಮೀ ಅರುಣಾ ಸೋಲಿಸಲು ಹೋಗಿ ಮನೆಯಲ್ಲಿ ಕುಳಿತಿದ್ದಾರೆ. ಲಕ್ಷ್ಮೀ ಅರುಣಾ ಮತ್ತು ಜನಾರ್ದನ ರೆಡ್ಡಿ ನಿಮ್ಮ ಜೊತೆಗೆ ಇರುತ್ತಾರೆ. ನಮ್ಮವರೇ ವಿರೋಧಿಗಳ ಜೊತೆಗೆ ಸೇರಿ ನಮ್ಮನ್ನು ಸೋಲಿಸಿದರು ಎಂದು ಅಸಮಾಧಾನ ಹೊರಹಾಕಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:50 pm, Fri, 25 August 23

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!