AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬಳ್ಳಾರಿಯಲ್ಲಿ ನೋಡ ನೋಡುತ್ತಿದ್ದಂತೆ ನದಿಗೆ ಬಿದ್ದ ಲಾರಿ

ಲಾರಿ ಸಿರುಗುಪ್ಪದಿಂದ ಅದೋನಿಗೆ ಹೋಗುತ್ತಿತ್ತು. ಈ ವೇಳೆ ಲಾರಿ ನದಿಗೆ ಬಿದ್ದಿದ್ದು, ಕೋಟ್ಯಾಂತರ ಮೌಲ್ಯದ ಸಕ್ಕರೆ ನೀರು ಪಾಲಾಗಿದೆ.

Karnataka Rains: ಬಳ್ಳಾರಿಯಲ್ಲಿ ನೋಡ ನೋಡುತ್ತಿದ್ದಂತೆ ನದಿಗೆ ಬಿದ್ದ ಲಾರಿ
ನದಿಗೆ ಬಿದ್ದ ಲಾರಿ
TV9 Web
| Edited By: |

Updated on:Nov 20, 2021 | 3:26 PM

Share

ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿರುವ ಸೇತುವೆ ಬಳಿ ಲಾರಿಯೊಂದು ನೋಡ ನೋಡುತ್ತಿದ್ದಂತೆ ನೀರಿಗೆ ಬಿದ್ದಿದೆ. ಲಾರಿಯಲ್ಲಿ ಇದ್ದ ನೂರಾರು ಸಕ್ಕರೆ ಚೀಲ ನದಿ ಪಾಲಾಗಿವೆ. ರಾಜ್ಯದ ವಿವಿಧೆಡೆ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ರಾರಾವಿ ಸೇತುವ ಸಂಪೂರ್ಣ ಬಂದ್ ಆಗಿದೆ. ಸೇತುವೆ ಮೇಲೆ ನೀರು ಹರಿಯುತ್ತಿದೆ. ವೇದಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ರಾರಾವಿ ಸೇತುವೆ ಬಳಿ ಬೆಳಗಿನ ಜಾವ ನೀರಿನ ರಭಸಕ್ಕೆ ಲಾರಿ ನದಿಗೆ ಬಿದ್ದಿದೆ.

ಲಾರಿ ಸಿರುಗುಪ್ಪದಿಂದ ಅದೋನಿಗೆ ಹೋಗುತ್ತಿತ್ತು. ಈ ವೇಳೆ ಲಾರಿ ನದಿಗೆ ಬಿದ್ದಿದ್ದು, ಕೋಟ್ಯಾಂತರ ಮೌಲ್ಯದ ಸಕ್ಕರೆ ನೀರು ಪಾಲಾಗಿದೆ. ಸದ್ಯ ನದಿಯಲ್ಲಿ ಲಾರಿಯ ಚಕ್ರಗಳು ಮಾತ್ರ ಕಾಣುತ್ತಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಾರಿ ಚಾಲಕ ಮತ್ತು ಕ್ಲೀನರ್​ನ ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ವ್ಯಕ್ತಿಯ ರಕ್ಷಣೆ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ. ಬಳ್ಳಾರಿ ತಾಲೂಕಿನ ರೂಪನಗುಡಿ ಹಳ್ಳದಲ್ಲಿ ವ್ಯಕ್ತಿ ಕೊಚ್ಚಿ ಹೋಗುತ್ತಿದ್ದರು. ಕಾರು ಸಮೇತ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ.

ರೈತನ ಕಣ್ಣೀರ ಕಥೆ ಕೃಷಿ ಇಲಾಖೆಯ ಅಧಿಕಾರಿಗಳ ಮಾಹಿತಿ ಪ್ರಕಾರ, ಸುಮಾರು 10 ಸಾವಿರ ಹೆಕ್ಟೇರ್ ಭತ್ತ ನೆಲಕಚ್ಚಿದೆ. ಎಕರೆಗೆ 25 ಸಾವಿರ ರೂಪಾಯಿ ಹಣ ಖರ್ಚು ಮಾಡಿದ ರೈತರಿಗೆ ಐದು ಸಾವಿರ ವಾಪಸ್ ಬರುವುದು ಕಷ್ಟವಾಗಿದೆ. ಎಕರೆಗೆ ಮೂವತ್ತು ಚೀಲ ಬರುವ ಭತ್ತ ಇದೀಗ ಕಾಳು ಉದುರಿದ ಹಿನ್ನೆಲೆ ಕೇವಲ ಐದು ಚೀಲ ಬರುತ್ತದೆ. ಕಳೆದ ವರ್ಷ ಮೆಣಸಿನಕಾಯಿ, ಹತ್ತಿ ನಷ್ಟ ಹೊಂದಿದ ರೈತರಿಗೆ ಈ ಬಾರಿ ಅಕಾಲಿಕ ಮಳೆಯಿಂದ ಭತ್ತ ಕೂಡ ನಷ್ಟವಾಗಿದೆ.

ಇದನ್ನೂ ಓದಿ

ಚಿಕ್ಕಬಳ್ಳಾಪುರ: 360 ಕೋಟಿ ರೂ. ಮೌಲ್ಯದ ಆಸ್ತಿ ಪಾಸ್ತಿ, ಬೆಳೆ ಹಾನಿ; 48 ಮನೆ ಸಂಪೂರ್ಣ ಕುಸಿತ

Viral Video: ಆನೆ ಮರಿಯ ಬಾಬ್ ಕಟ್ ಕೂದಲನ್ನು ಬಾಚಿದ ಮಾವುತನ ವಿಡಿಯೋ ವೈರಲ್

Published On - 3:24 pm, Sat, 20 November 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್