AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ ಶನಿವಾರ ಹೈಡ್ರಾಮಾ! ಬೆಂಗಳೂರು ರೆಸಾರ್ಟ್​ನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ಸದಸ್ಯರು, ಯಾರಾಗ್ತಾರೆ ಮೇಯರ್?

Bellary Mayor: ಬೆಂಗಳೂರಿನ ಖಾಸಗಿ ರೆರ್ಸಾಟ್ ನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ಸದಸ್ಯರಿಂದ ವೀಕ್ಷಕರು ಅಭಿಪ್ರಾಯ ಸಂಗ್ರಹಣೆ ಮಾಡಿದ್ದಾರೆ. ನಾಳೆ ಮುಂಜಾನೆ ಕಾಂಗ್ರೆಸ್ ನ ಎಲ್ಲ ಸದಸ್ಯರು ನೇರವಾಗಿ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ.

ಬಳ್ಳಾರಿಯಲ್ಲಿ ಶನಿವಾರ ಹೈಡ್ರಾಮಾ! ಬೆಂಗಳೂರು ರೆಸಾರ್ಟ್​ನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ಸದಸ್ಯರು, ಯಾರಾಗ್ತಾರೆ ಮೇಯರ್?
ಡಿಕೆ ಶಿವಕುಮಾರ್​
TV9 Web
| Edited By: |

Updated on:Mar 18, 2022 | 6:05 PM

Share

ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆ ಪ್ರಕ್ರಿಯೆ ನಾಳೆ ನಡೆಯಲಿದೆ. ಚುನಾವಣೆ ನಡೆದು 10 ತಿಂಗಳ ನಂತರ ನಡೆಯುತ್ತಿರುವ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ (Bellary Congress) ಬಹುಮತ ಇದ್ದರೂ, ಒಮ್ಮತ ಮೂಡದಿರುವುದು ಪಕ್ಷದ ನಾಯಕರ (DK Shivakumar) ಆತಂಕಕ್ಕೆ‌ ಕಾರಣವಾಗಿದೆ (Bellary Mayor).

ಬಳ್ಳಾರಿ ಮಹಾನಗರ ಪಾಲಿಕೆಯ 39 ಸದಸ್ಯರ ಪೈಕಿ 21 ಸ್ಥಾನಗಳಲ್ಲಿ ಕಾಂಗ್ರೆಸ್ ಸದಸ್ಯರು ಆಯ್ಕೆಯಾಗಿದ್ದು, ಪಕ್ಷೇತರರಾಗಿ ಆಯ್ಕೆಯಾಗಿರುವ ಐವರು ಸದಸ್ಯರು ಸಹ ಚುನಾವಣೆ ನಂತರ ಕಾಂಗ್ರೆಸ್ ಸೇರ್ಪಡೆಗೊಂಡ ಪರಿಣಾಮ‌ ಸದಸ್ಯರ ಬಲ ಈಗ 26 ಕ್ಕೆ ಎರಿದೆ. ಜೊತೆಗೆ ಒಬ್ಬರು ಶಾಸಕರು, ಒಬ್ಬ ರಾಜ್ಯಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರೊಬ್ಬರ ಮತ ಬೆಂಬಲದಿಂದ 29‌ ಸದಸ್ಯರ ಮತಗಳು ಕಾಂಗ್ರೆಸ್ ಪಕ್ಷದಲ್ಲಿವೆ.

ಮತ ಸದಸ್ಯರ ಸಂಖ್ಯೆ ಆಧರಿಸಿ ಕಾಂಗ್ರೆಸ್ ಮೇಯರ್ ಮತ್ತು ಉಪ ಮೇಯರ್ ಸ್ಥಾನವನ್ನು ಅಲಂಕರಿಸುವುದು ಖಚಿತವಾಗಿದೆ‌. ಈ ಹಿನ್ನೆಲೆಯಲ್ಲಿ ಮೇಯರ್ ಸ್ಥಾನಕ್ಕೆ ರಾಜೇಶ್ವರಿ ಸುಬ್ಬರಾಯಡು ಹಾಗೂ ಪದ್ಮಜಾ ಮಧ್ಯೆ ಪೈಪೋಟಿ ಶುರುವಾಗಿದೆ. ಉಪಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ನ ಹಿರಿಯ ಸದಸ್ಯ ಪಿ ಗಾದೆಪ್ಪ ಹಾಗೂ ಮುಲ್ಲಂಗಿ ನಂದೀಶ್ ಹೆಸರು ಪ್ರಸ್ತಾಪವಾಗಿದ್ದರೂ ಗಾದೆಪ್ಪ ಉಪಮೇಯರ್ ಆಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಳವಾಗಿದೆ.

ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ತಮ್ಮ ಆಪ್ತರಿಗೆ ಮೇಯರ್ ಸ್ಥಾನ ಕಲ್ಪಿಸಲು ಮುಂದಾಗಿದ್ದು ಪಕ್ಷದ ನಾಯಕರು ಮೇಯರ್ ಸ್ಥಾನಕ್ಕೆ ಯಾರನ್ನ ಆಯ್ಕೆ ಮಾಡುತ್ತಾರೆ ಅನ್ನೋದು ಕುತೂಹಲ ಮೂಡಿಸಿದೆ. ಈ ಮಧ್ಯೆ ಅಧಿಕಾರಕ್ಕಾಗಿ ಪರದಾಡುತ್ತಿರುವ ಬಿಜೆಪಿ ನಾಯಕರು ಕೊನೆ ಕ್ಷಣದವರೆಗೂ ಕಾಯ್ದು ನೋಡುವ ತಂತ್ರಕ್ಕೆ ಮುಂದಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹಣ, ಅಧಿಕಾರ ಮತ್ತು ವಾಹನದ ಆಸೆ ತೋರಿಸಿರುವುದು ಕಾಂಗ್ರೆಸ್ ಮುಖಂಡರಲ್ಲಿ ತೀವ್ರ ಆತಂಕ ಮೂಡಿದೆ.

ಕೆಪಿಸಿಸಿ ಡಿ.ಕೆ. ಶಿವಕುಮಾರ್ ಪಕ್ಷ ನಿಷ್ಠೆ ಮತ್ತು ವಾರ್ಡ್ ಮತ್ತು ನಗರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರತಿಯೊಬ್ಬ ಕಾಂಗ್ರೆಸ್ಸಿಗರು ಆದ್ಯತೆ ನೀಡಬೇಕು. ಈ ಹಿನ್ನಲೆಯಲ್ಲಿ ಹೈಕಮಾಂಡ್ ಕೈಗೊಳ್ಳುವ ನಿರ್ಧಾರವನ್ನು ಮೇಯರ್ ಮತ್ತು ಉಪ ಮೇಯರ್ ಹುದ್ದೆಯ ಆಕಾಂಕ್ಷಿಗಳು ಮುಕ್ತ ಮನಸ್ಸಿನಿಂದ ಒಪ್ಪಿಕೊಳ್ಳಬೇಕು ಎಂದು ಒಗ್ಗಟ್ಟಿನ ಮಂತ್ರವನ್ನು ಬೋಧಿಸಿದ್ದಾರೆ.

ಮೇಯರ್ ಉಪಮೇಯರ್ ಚುನಾವಣೆ ದಿನಾಂಕ‌ ಘೋಷಣೆಯಾದ ನಂತರ ಬೆಂಗಳೂರಿನ ಖಾಸಗಿ ರೆರ್ಸಾಟ್ ನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ಸದಸ್ಯರಿಂದ ವೀಕ್ಷಕರು ಅಭಿಪ್ರಾಯ ಸಂಗ್ರಹಣೆ ಮಾಡಿದ್ದಾರೆ. ಮಾಜಿ ಸಚಿವ ಯು ಟಿ ಖಾದರ್, ಮಾಜಿ ಸಂಸದ ಚಂದ್ರಪ್ಪ ಹಾಗೂ ಆರ್ ಮಂಜುನಾಥ್ ಮತ್ತು ಸದಸ್ಯರಿಂದ ಅಭಿಪ್ರಾಯ ಸಂಗ್ರಹಿಸಿದ್ದು, ನಾಳೆ ಮುಂಜಾನೆ ಕಾಂಗ್ರೆಸ್ ನ ಎಲ್ಲ ಸದಸ್ಯರು ನೇರವಾಗಿ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ.

Published On - 6:05 pm, Fri, 18 March 22

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!