AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಪೇಟೆ: ಖಾಸಗಿ ಆಸ್ಪತ್ರೆ ವೈದ್ಯೆಯ ಎಡವಟ್ಟು, 13 ಜನ ಬಾಣಂತಿಯರಿಗೆ ನರಕಯಾತನೆ

ವೈದ್ಯೋ ನಾರಾಯಣೋ ಹರಿಃ ಎಂಬ ಉಕ್ತಿ ಇದೆ. ಆದರೆ, ವಿಜಯನಗರ ಜಿಲ್ಲೆಯಲ್ಲಿನ ಖಾಸಗಿ ಆಸ್ಪತ್ರೆಯ ವೈದ್ಯೆ ಮಾಡಿದ ಎಡವಟ್ಟಿಗೆ ರೋಗಿಗಳು ನರಳಾಡುವಂತಾಗಿದೆ. ವೈದ್ಯ ಮಾಡಿದ ಸಿಜರಿಯನ್​ಗೆ ಬಾಣಂತಿಯರು ನರಕಯಾತನೆ ಅನುಭವಿಸುತ್ತಿದ್ದಾರೆ. ಹೀಗಾಗಿ, ಈ ಖಾಸಗಿ ಆಸ್ಪತ್ರೆಯ ಲೈಸೆನ್ಸ್ ರದ್ದಾಗಬೇಕು, ವೈದ್ಯೆಯ ವಿರುದ್ಧ ಕ್ರಮ ಆಗಬೇಕು ಅಂತ ನೋಂದವರು ಆಗ್ರಹಿಸಿದ್ದಾರೆ.

ಹೊಸಪೇಟೆ: ಖಾಸಗಿ ಆಸ್ಪತ್ರೆ ವೈದ್ಯೆಯ ಎಡವಟ್ಟು, 13 ಜನ ಬಾಣಂತಿಯರಿಗೆ ನರಕಯಾತನೆ
ಶ್ರೀಕರಿ ಆಸ್ಪತ್ರೆ
ವಿನಾಯಕ ಬಡಿಗೇರ್​
| Edited By: |

Updated on: Jun 22, 2025 | 9:22 PM

Share

ವಿಜಯನಗರ, ಜೂನ್​ 22: ಹೊಸಪೇಟೆಯ (Hospete) ಶ್ರೀಕರಿ ಖಾಸಗಿ ಆಸ್ಪತ್ರೆಗೆ ಬಳ್ಳಾರಿ (Ballari) ಸೇರಿದಂತೆ ವಿವಿಧಡೆಯಿಂದ ರೋಗಿಗಳು ಬರುತ್ತಾರೆ. ಕಳೆದ ಮೂರು ವರ್ಷಗಳಿಂದ ಈ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಂಡ ಬಾಣಂತಿಯರಿಗೆ (Maternal) ಸಿಜರಿಯನ್ ಆದ ಜಾಗದಲ್ಲಿ ಕೀವು ಬರುತ್ತಿದೆ. ಇದರಿಂದ ಹೊಟ್ಟೆಯ ಒಳ ಭಾಗದಲ್ಲಿ ಸಾಕಷ್ಟು ಇನ್ಫೆಕ್ಷನ್ ಆಗಿದೆ. ಜೊತೆಗೆ ಗರ್ಭಚೀಲವನ್ನೇ ತಗಿಸಿಕೊಳ್ಳುವಂತಹ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿಯರು ಪಡಬಾರದ ಕಷ್ಟ ಪಡುತ್ತಿದ್ದಾರೆ. ಈ ವೈದ್ಯಯ ವಿರುದ್ಧ ಕ್ರಮ ಆಗಬೇಕು ಅಂತ ನೊಂದವರು ಆಗ್ರಹಿಸಿದ್ದಾರೆ.

ಸಂಡೂರಿನ ಸೃಜನ್ ಎಂಬುವರು ತಮ್ಮ ಪತ್ನಿಯನ್ನು ಕಳೆದ ವರ್ಷ ಶ್ರೀಕರಿ ಆಸ್ಪತ್ರೆಯಲ್ಲಿ ಹೆರಿಗೆಗೆಂದು ದಾಖಲಿಸಿದ್ದರು. ಅವರ ಪತ್ನಿಗೆ ಆಸ್ಪತ್ರೆಯ ವ್ಯದ್ಯೆ ಡಾ.ಗಂಗೋತ್ರಿ ಸಿಜರಿಯನ್ ಮಾಡಿದ್ದರು. ನಾಲ್ಕು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಮನೆಗೆ ಬಂದಿದ್ದರು. ಆದರೆ, ವಾರ ಕಳೆದಂತೆ ಅವರ ಪತ್ನಿಗೆ ಸಿಜರಿಯನ್ ಮಾಡಿದ ಸ್ಥಳದಲ್ಲಿ ಕೀವು ಬರಲು ಆರಂಭವಾಗಿದೆ. ತಕ್ಷಣ ಆಸ್ಪತ್ರೆಗೆ ಬಂದು ಆಗಿರುವ ವಿಚಾರವನ್ನು ತಿಳಿಸಿದ್ದಾರೆ. ಆದರೆ, ವೈದ್ಯರು ಸರಿಯಾದ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಮಾಡಿದ್ದಾರೆ. ನೋವು ಉಲ್ಬಣವಾಗಿದೆ. ಹೀಗಾಗಿ, ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ತೆರಳಿದಾಗ ಅಸುರಕ್ಷಿತ ಸಿಜರಿಯನ್ ಹೆರಿಗೆಯಾಗಿದೆ, ಓಟಿ ಹೈಜಿನಿಕ್ ಇಲ್ಲ, ಇದರಿಂದ ಇನ್ಫೆಕ್ಷನ್ ಆಗಿದ್ದು, ತಕ್ಷಣ ಚಿಕಿತ್ಸೆ ನೀಡಬೇಕು ಅಂತ ವೈದ್ಯರು ಹೇಳಿದ್ದಾರೆ.

ಈ ವೇಳೆ ಶ್ರೀಕರಿ ಆಸ್ಪತ್ರೆ ವೈದ್ಯರು ಮಾಡಿದ ಎಡವಟ್ಟು ಬೆಳಕಿಗೆ ಬಂದಿದೆ. ಇವರ ಹಾಗೆ ಮೂರು ವರ್ಷದಲ್ಲಿ ಸುಮಾರು 13 ಬಾಣಂತಿಯರು ಇದೇ ತರಹದ ನರಕ ಅನುಭವಿಸಿದ್ದಾರೆ. ಹೀಗಾಗಿ, ಇಂತಹ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಾಣಂತಿಯರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ
Image
ಕಾಮುಕನ ಫೋನ್​​ನಲ್ಲಿ 13 ಸಾವಿರ ಮಹಿಳೆಯರ ಅಶ್ಲೀಲ ಫೋಟೋ, ವಿಡಿಯೋಗಳ ಪತ್ತೆ!
Image
ಮಗಳನ್ನೇ ದೇವದಾಸಿ ಮಾಡಲು ಹೋದ ತಾಯಿ: ರಕ್ಷಿಸಿ ಮದುವೆ ಮಾಡಿದ ಪೊಲೀಸ್​​
Image
ರನ್ಯಾ ಗೋಲ್ಡ್ ಸ್ಮಗ್ಲಿಂಗ್: ಬಳ್ಳಾರಿ ಜ್ಯುವೆಲ್ಲರಿ ಅಂಗಡಿ ಮಾಲೀಕ ಬಂಧನ
Image
ಬಿಮ್ಸ್​ನಲ್ಲಿ ನಿಲ್ಲದ ಬಾಣಂತಿಯರ ಮರಣ: ಎರಡು ದಿನಗಳ ಅಂತರದಲ್ಲಿ 2ನೇ ಸಾವು

ಶ್ರೀಕರಿ ಆಸ್ಪತ್ರೆ ವಿರುದ್ಧ ಜಿಲ್ಲಾ ವೈದ್ಯಾಧಿಕಾರಿ ಡಾ. ಶಂಕರ್ ನಾಯ್ಕ ಅವರಿಗೆ ನೊಂದವರು ದೂರು ನೀಡಿದ್ದು, ಈ ಬಗ್ಗೆ ನಾಲ್ಕು ವೈದ್ಯರ ತಂಡ ರಚಿಸಲಾಗುತ್ತದೆ. ವೈದ್ಯರ ತಂಡ ಶ್ರೀಕರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಾರೆ. ವರದಿ ಬಂದ ಬಳಿಕ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳುತ್ತವೆ ಎಂದು ಡಿಹೆಚ್​ಓ ಡಾ. ಶಂಕರ್ ನಾಯ್ಕ ಹೇಳಿದ್ದಾರೆ.

ಇದನ್ನೂ ಓದಿ: ಬಳ್ಳಾರಿಯಲ್ಲಿ ಹೃದಯವಿದ್ರಾವಕ ಘಟನೆ: ಮೂವರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

ಈ ಬಗ್ಗೆ ಡಾ. ಗಂಗೋತ್ರಿ ಅವರನ್ನ ಸಂಪರ್ಕ ಮಾಡಲು ಪ್ರಯತ್ನ ಮಾಡಿದರೇ, ಕೈಗೆ ಸಿಗದಂತೆ ನುಣಚಿಕೊಳ್ಳುತ್ತಿದ್ದಾರೆ. ಈ ಬಗ್ಗೆ ವೈದ್ಯಾಧಿಕಾರಿಗಳು, ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು, ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಆಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ