AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಜಾತ ಶಿಶುವನ್ನು 10 ಸಾವಿರ ರೂ.ಗೆ ಮಾರಾಟ! ಇಬ್ಬರು ಆಶಾ ಕಾರ್ಯಕರ್ತೆಯರು ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು

ಆಗತಾನೆ ಮಗುವಿಗೆ ಜನ್ಮಕೊಟ್ಟ ತಾಯಿಗೆ ದುಡ್ಡಿನ ಆಮಿಷವೊಡ್ಡಿ, ಪುಸಲಾಯಿಸಿ ಶಿಶುವನ್ನು 10 ಸಾವಿರ ರೂ.ಗೆ ಮಾರಾಟ ಮಾಡಿಸಿದ ಅಮಾನವೀಯ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಘಟನೆ ಸಂಬಂಧ ಇದೀಗ ಹೊಸಪೇಟೆ ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇಬ್ಬರು ಆಶಾ ಕಾರ್ಯಕರ್ತೆಯರು ಸೇರಿ ನಾಲ್ವರು ಮಹಿಳೆಯರ ವಿರುದ್ಧ ಪ್ರಕರಣ ದಾಖಲಾಗಿದೆ. ವಿವರಗಳು ಇಲ್ಲಿವೆ.

ನವಜಾತ ಶಿಶುವನ್ನು 10 ಸಾವಿರ ರೂ.ಗೆ ಮಾರಾಟ! ಇಬ್ಬರು ಆಶಾ ಕಾರ್ಯಕರ್ತೆಯರು ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Sep 13, 2025 | 2:44 PM

Share

ಹೊಸಪೇಟೆ, ಸೆಪ್ಟೆಂಬರ್ 13: ನವಜಾತ ಶಿಶುವೊಂದನ್ನು (Newborn Baby) 10 ಸಾವಿರ ರೂ.ಗೆ ಮಾರಾಟ ಮಾಡಿದ ಆಘಾತಕಾರಿ ಘಟನೆ ಹೊಸಪೇಟೆಯ (Hospete) 60 ಹಾಸಿಗೆಗಳ ಸರ್ಕಾರಿ ಆಸ್ಪತ್ರೆಯಲ್ಲಿ (Govt Hospital) ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ, ಘಟನೆ ಸಂಬಂಧ ಇಬ್ಬರು ಆಶಾ ಕಾರ್ಯಕರ್ತರು ಸೇರಿದಂತೆ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಘಟನೆ ಆಗಸ್ಟ್ 31 ರಂದು ನಡೆದಿತ್ತು. ಈ ವಿಚಾರವಾಗಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಇದೀಗ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಹೊಸಪೇಟೆ ತಾಲ್ಲೂಕಿನ ಕಮಲಾಪುರ ಗ್ರಾಮದ ಮಹಿಳೆಯೊಬ್ಬರು ಆಗಸ್ಟ್ 26 ರಂದು ಸರ್ಕಾರಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇದಾದ ಕೇವಲ ಐದು ದಿನಗಳ ನಂತರ, ಶಿಶುವನ್ನು ಹಗರಿಬೊಮ್ಮನಹಳ್ಳಿಯ ನಿವಾಸಿ ಕರಿಬಸಪ್ಪ ಎಂಬಾತನಿಗೆ ಮಾರಾಟ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮಕ್ಕಳ ಸಹಾಯವಾಣಿಗೆ ಬಂದ ಸುಳಿವಿನ ಮೇರೆಗೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ (ಡಿಸಿಪಿಯು) ಸಂಯೋಜಕರಾದ ಚಿದಾನಂದ್ ಪೊಲೀಸ್ ದೂರು ದಾಖಲಿಸಿದ್ದರು. ಆಸ್ಪತ್ರೆಯ ಮೂಲಗಳಲ್ಲಿ ಒಬ್ಬರು ಸುಳಿವು ನೀಡಿದ್ದರಿಂದ ಈ ವಿಚಾರ ತಮಗೆ ಗೊತ್ತಾಗಿದೆ ಎಂದು ಚಿದಾನಂದ್ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದರು.

ಇದನ್ನೂ ಓದಿ: Video: ತಾಯಿಯ ಅಂತ್ಯಕ್ರಿಯೆಗೆ ಹಣವಿಲ್ಲದೆ ಮೃತದೇಹದ ಮುಂದೆ ಕುಳಿತು ಭಿಕ್ಷೆ ಬೇಡಿದ ಬಾಲಕಿ

ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದ್ದು, ಈ ಪೈಕಿ ಇಬ್ಬರು ಆಶಾ ಕಾರ್ಯಕರ್ತೆಯರನ್ನು ಕವಿತಾ ಎಂ ಮತ್ತು ನಾಗರತ್ನ ಎಂದು ಗುರುತಿಸಲಾಗಿದೆ. ಇವರಿಬ್ಬರು ಬಾಣಂತಿಯನ್ನು ಮನವೊಲಿಸಿ ಮಗುವನ್ನು ಮಾರಾಟ ಮಾಡಲು ಹಣ ನೀಡಲು ಮುಂದಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವನ್ನು ರಕ್ಷಿಸಲಾಗಿದೆ. ಮಗುವನ್ನು ಸರ್ಕಾರ ನಡೆಸುವ ವಿಶೇಷ ದತ್ತು ಕೇಂದ್ರದ ಆರೈಕೆಯಲ್ಲಿ ಇರಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Sat, 13 September 25

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್