AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sandur: ಚಾಲುಕ್ಯರ ಕಾಲದ ಕುಮಾರಸ್ವಾಮಿ ದೇವಸ್ಥಾನದ ಸುತ್ತ ಗಣಿಗಾರಿಕೆ! ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್​

Sandur Kumaraswamy Temple: ಗಣಿ ಸ್ಪೋಟದಿಂದ ದೇವಸ್ಥಾನದ ಕಲ್ಲಿನ ಕಂಬಗಳಲ್ಲಿ ಬಿರುಕು ಮೂಡಿದ್ದು, ಗೋಪುರ ವಾಲಿದೆ. ಸ್ಥಳೀಯ ಗ್ರಾಮಗಳ ಕುಡಿಯುವ ನೀರಿನ ಮೂಲ ಕಲುಷಿತವಾಗಿದೆ. ಗಣಿ ಧೂಳಿನಿಂದ ದೇವಸ್ಥಾನ ಸಂಪೂರ್ಣವಾಗಿ ಮುಚ್ಚಿ ಹೋಗಿದೆ.

Sandur: ಚಾಲುಕ್ಯರ ಕಾಲದ ಕುಮಾರಸ್ವಾಮಿ ದೇವಸ್ಥಾನದ ಸುತ್ತ ಗಣಿಗಾರಿಕೆ! ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್​
ಕುಮಾರಸ್ವಾಮಿ ದೇವಸ್ಥಾನದ ಸುತ್ತ ಗಣಿಗಾರಿಕೆ!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 07, 2023 | 5:24 PM

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಪುರಾತನ ಕುಮಾರಸ್ವಾಮಿ ದೇವಸ್ಥಾನ (Sri Kumaraswamy Temple) ಸುತ್ತಲಿನ ಸ್ವಾಮಿಮಲೈ ಬೆಟ್ಟದಲ್ಲಿ (Swamimalai hills) ಅವ್ಯಾಹತವಾಗಿ ನಡೆಯುತ್ತಿರುವ ಗಣಿಗಾರಿಕೆ ತಡೆಯುವಂತೆ ಕೋರಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ರಾಜ್ಯ ಉಚ್ಛ ನ್ಯಾಯಾಲಯ (High Court) ನೋಟಿಸ್ ಜಾರಿಗೊಳಿಸಿದೆ. ಸಂಡೂರಿನ ಶ್ರೀಶೈಲ ಆಲದಹಳ್ಳಿ ಸೇರಿದಂತೆ ಐವರು ನಿವಾಸಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಮುಖ್ಯ ನ್ಯಾಯಮೂರ್ತಿಗಳಾದ ಪಿ ಬಿ ವರ್ಲೆ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ ಸರ್ಕಾರಕ್ಕೆ ನೋಟಿಸ್ (Notice) ಜಾರಿಗೊಳಿಸಿದೆ.

ಅರ್ಜಿದಾರರ ವಾದ ಆಲಿಸಿದ ಬಳಿಕ ನ್ಯಾಯಪೀಠವು ಕೇಂದ್ರ ಸಂಸ್ಕತಿ ಸಚಿವಾಲಯ, ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರು, ಭಾರತೀಯ ಸರ್ವೆಕ್ಷಣಾ ಇಲಾಖೆ ಹಾಗೂ ಐದು ಖಾಸಗಿ ಗಣಿ ಕಂಪನಿಗಳು ಸೇರಿ ಒಟ್ಟು 17 ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ನಾಲ್ಕು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಲಾಗಿದೆ.

Illegal Mining near Kumaraswamy temple in Sandur High Court issues Notice to Karnataka Government 1

ಅರ್ಜಿದಾರರ ಪರ ವಕೀಲರು 7ನೇ ಶತಮಾನದ ಬಾದಾಮಿ ಚಾಲುಕ್ಯರ ಅವಧಿಯಲ್ಲಿ ( 1200 year old Badami Chalukyan era temple) ಕುಮಾರಸ್ವಾಮಿ ದೇವಸ್ಥಾನ ನಿರ್ಮಾಣವಾಗಿದ್ದು, ದೇವಸ್ಥಾನದ ಸುತ್ತಲಿನ ಬೆಟ್ಟದಲ್ಲಿ ಜೀವ ವೈವಿಧ್ಯ ಮತ್ತು ಔಷಧೀಯ ಗುಣವುಳ್ಳ ಸಸ್ಯಗಳನ್ನ ಸ್ವಾಮಿಮಲೈ ಅರಣ್ಯ ಪ್ರದೇಶ ಹೊಂದಿದೆ. ಈ ಬೆಟ್ಟದಲ್ಲಿ 2.5 ಎಕರೆ ಜಾಗದಲ್ಲಿ ಕುಮಾರಸ್ವಾಮಿ ದೇವಸ್ಥಾನವನ್ನು ರಾಷ್ಟ್ರೀಯ ಸಂರಕ್ಷಿತ ಮತ್ತು ಪುರಾತನ ಸ್ಮಾರಕವಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ದಕ್ಷಿಣ ಪ್ರಸ್ಥಭೂಮಿಯ ಪಶ್ಚಿಮಘಟ್ಟವೆಂದೇ ಸ್ವಾಮಿಮಲೈ ಅರಣ್ಯ ಪ್ರದೇಶ ಬೆಟ್ಟ ಪ್ರಸಿದ್ದಿ ಪಡೆದಿದೆ ಎಂದು ವಾದ ಮಂಡಿಸಿದ್ದರು.

Illegal Mining near Kumaraswamy temple in Sandur High Court issues Notice to Karnataka Government 1

ಗಣಿ ಸ್ಪೋಟದಿಂದ ದೇವಸ್ಥಾನದ ಕಲ್ಲಿನ ಕಂಬಗಳಲ್ಲಿ ಬಿರುಕು ಮೂಡಿದ್ದು, ಗೋಪುರ ವಾಲಿದೆ. ಸ್ಥಳೀಯ ಗ್ರಾಮಗಳ ಕುಡಿಯುವ ನೀರಿನ ಮೂಲ ಕಲುಷಿತವಾಗಿದೆ. ಕಬ್ಬಿಣದ ಅದಿರು ಕಣಗಳಿಂದ ವಾಯುಮಾಲಿನ್ಯ ಪ್ರಮಾಣ ಹೆಚ್ಚುತ್ತಿದೆ. ಗಣಿ ಧೂಳಿನಿಂದ ದೇವಸ್ಥಾನ ಸಂಪೂರ್ಣವಾಗಿ ಮುಚ್ಚಿ ಹೋಗಿದೆ. ಹೀಗಾಗಿ ಸ್ವಾಮಿಮಲೈ ಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆ ನಿಲ್ಲಿಸಬೇಕು. ಐತಿಹಾಸಿಕ ಸ್ಮಾರಕವಾದ ದೇವಸ್ಥಾನ ಸಂರಕ್ಷಣೆ ಮಾಡುವಂತೆ ಸರ್ಕಾರಗಳಿಗೆ ಆದೇಶಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ.

ವರದಿ: ವೀರೇಶ್ ದಾನಿ, ಟಿವಿ 9, ಬಳ್ಳಾರಿ

Published On - 5:07 pm, Sat, 7 January 23

Daily Horoscope: ಚಂದ್ರನು ಮಕರ ರಾಶಿಯಿಂದ ಶ್ರವಣ ನಕ್ಷತ್ರದೆಡೆಗೆ ಸಂಚಾರ
Daily Horoscope: ಚಂದ್ರನು ಮಕರ ರಾಶಿಯಿಂದ ಶ್ರವಣ ನಕ್ಷತ್ರದೆಡೆಗೆ ಸಂಚಾರ
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ