Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ನಿರ್ಲಕ್ಷ್ಯ: ಬಳ್ಳಾರಿಯಲ್ಲಿನ ಒಂದು ಕಾಲದ ಚಿತ್ರಮಂದಿರ ಈಗ ಬಾಲಕಿಯರ ಸರ್ಕಾರಿ ವಸತಿ ಶಾಲೆ

ಬಳ್ಳಾರಿಯಲ್ಲಿ ಚಿತ್ರಮಂದಿರದಲ್ಲಿ ಬಾಲಕಿಯರ ವಸತಿ ಶಾಲೆ ನಡೆಯುತ್ತಿದೆ. ಸರಕಾರ ಈ ಚಿತ್ರಮಂದಿರ ಮಾಲೀಕರಿಗೆ ವರ್ಷಕ್ಕೆ 1.20 ಲಕ್ಷ ರೂ. ಬಾಡಿಗೆ ನೀಡುತ್ತಿದೆ. ಎರಡ್ಮೂರು ತರಗತಿಗಳು ಏಕಕಾಲಕ್ಕೆ ನಡೆಯುವುದರಿಂದ ವಿದ್ಯಾರ್ಥಿನಿಯರಲ್ಲಿ ಗೊಂದಲ ಉಂಟಾಗುತ್ತಿದೆ. ಆಟದ ಮೈದಾನವಿಲ್ಲದೆ, ವಿದ್ಯಾರ್ಥಿನಿಯರು ಮುಖ್ಯರಸ್ತೆಯ ಬಳಿ ಆಟವಾಡುತ್ತಿದ್ದಾರೆ.

ಸರ್ಕಾರದ ನಿರ್ಲಕ್ಷ್ಯ: ಬಳ್ಳಾರಿಯಲ್ಲಿನ ಒಂದು ಕಾಲದ ಚಿತ್ರಮಂದಿರ ಈಗ ಬಾಲಕಿಯರ ಸರ್ಕಾರಿ ವಸತಿ ಶಾಲೆ
ಚಿತ್ರಮಂದಿರದಲ್ಲಿ ಪಾಠ ಕೇಳುತ್ತಿರುವ ಮಕ್ಕಳು
Follow us
ವಿವೇಕ ಬಿರಾದಾರ
|

Updated on:Dec 08, 2023 | 8:11 AM

ಬಳ್ಳಾರಿ, ಡಿಸೆಂಬರ್​ 08: ಕುರುಗೋಡು ಪಟ್ಟಣದಲ್ಲಿನ ಒಂದು ಕಾಲದಲ್ಲಿ ಚಲನಚಿತ್ರ (Film theatre) ಮಂದಿರ ಈಗ ಬಾಲಕಿಯರ ಸರ್ಕಾರಿ ವಸತಿ ಶಾಲೆಯಾಗಿದೆ (Girls government residential school). ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (Backward Classes Welfare Department) ಮೂರು ವರ್ಷಗಳ ಹಿಂದೆ 6 ರಿಂದ 10 ನೇ ತರಗತಿಯ ವಸತಿ ಶಾಲೆಯನ್ನು ಪ್ರಾರಂಭಿಸಿದೆ. ವಸತಿ ಶಾಲೆಯಲ್ಲಿ 226 ಬಾಲಕಿಯರಿದ್ದಾರೆ. ಮೊದಲು ಚಿಕ್ಕ ಕಟ್ಟಡದಿಂದ ಶಾಲೆ ನಡೆಯುತ್ತಿತ್ತು. ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾದಾಗ ಶಾಲಾ ಆಡಳಿತ ಸಮಿತಿ ದೊಡ್ಡ ಕಟ್ಟಡಕ್ಕಾಗಿ ಸರ್ಕಾರಕ್ಕೆ ಅರ್ಜಿಸಲ್ಲಿಸಿತು.

ಸಮಿತಿಯು ಶಾಲಾ ಕಟ್ಟಡ ನಿರ್ಮಿಸಲು ನಿವೇಶನ ಗುರುತಿಸಿದ್ದರೂ ಸರಕಾರದಿಂದ ಯಾವುದೇ ನೆರವು ಬಂದಿಲ್ಲ ಎಂದು ಶಾಲೆಯ ಕೆಲ ಶಿಕ್ಷಕರು ಆರೋಪಿಸಿದ್ದಾರೆ. ಹೀಗಾಗಿ ಸಮಿತಿ ಸದಸ್ಯರು ಕಳೆದ ಐದು ವರ್ಷಗಳಿಂದ ಮುಚ್ಚಿದ್ದ ಚಿತ್ರಮಂದಿರದಲ್ಲೇ ಶಾಲೆ ನಡೆಸುತ್ತಿದ್ದಾರೆ.

ಸರ್ಕಾರದ ನಿರ್ಲಕ್ಷ್ಯದಿಂದ ಹಳೆ ಚಿತ್ರಮಂದಿರಲ್ಲೇ ವಾಸಿಸುವ ಮತ್ತು ಓದುವ ಅನಿವಾರ್ಯತೆ ಮಕ್ಕಳಿಗಿದೆ. ಈ ಹಿಂದೆ ಶಾಲೆಯನ್ನು ಚಿಕ್ಕ ಹಳೆಯ ಕಟ್ಟಡದಲ್ಲಿ ನಡೆಸಲಾಗುತ್ತಿತ್ತು. ವಿದ್ಯಾರ್ಥಿನಿಯರ ಪೋಷಕರು ಪ್ರತಿಭಟನೆ ನಡೆಸಿದಾಗ ಶಾಲೆಯನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಹೊಸ ಕಟ್ಟಡವಿಲ್ಲದ ಕಾರಣ ತೆರಳದೆ ಸಮಿತಿ ಸದಸ್ಯರು ಹಳೆಯ ಚಿತ್ರಮಂದಿರದಲ್ಲೇ ಶಾಲೆ ನಡೆಸುತ್ತಿದ್ದಾರೆ ಎಂದು ಕುರುಗೋಡು ನಿವಾಸಿಯಾದ ಸಾಮಾಜಿಕ ಕಾರ್ಯಕರ್ತ ಬಸವರಾಜ ಎಮ್​ ಹೇಳಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ 5 ವರ್ಷಗಳಲ್ಲಿ 92 ವಸತಿ ಶಾಲೆಯ ವಿದ್ಯಾರ್ಥಿಗಳು ಆತ್ಮಹತ್ಯೆ

ಚಿತ್ರಮಂದಿರದ ಮಾಲೀಕರಿಗೆ ಸರಕಾರ ವರ್ಷಕ್ಕೆ 1.20 ಲಕ್ಷ ರೂ. ಬಾಡಿಗೆ ನೀಡುತ್ತಿದೆ. ಎರಡ್ಮೂರು ತರಗತಿಗಳು ಏಕಕಾಲಕ್ಕೆ ನಡೆಯುವುದರಿಂದ ವಿದ್ಯಾರ್ಥಿನಿಯರಿಗೆ ಗೊಂದಲ ಉಂಟಾಗುತ್ತಿದೆ. ಆಟದ ಮೈದಾನವಿಲ್ಲ, ಮುಖ್ಯರಸ್ತೆಯ ಬಳಿ ವಿದ್ಯಾರ್ಥಿನಿಯರು ಆಟವಾಡುತ್ತಾರೆ ಎಂದರು.

ನಾವು ಹಲವು ಬಾರಿ ಜ್ಞಾಪಕ ಪತ್ರ ನೀಡಿದರೂ ಸಂಬಂಧಪಟ್ಟ ಅಧಿಕಾರಿಗಳು ಶಾಲೆಯನ್ನು ದೊಡ್ಡ ಕಟ್ಟಡಕ್ಕೆ ಸ್ಥಳಾಂತರಿಸಲು ಇನ್ನೂ ಕ್ರಮ ಕೈಗೊಂಡಿಲ್ಲ. ಇದರಿಂದ ಬೇಸತ್ತ ಪೋಷಕರು ತಮ್ಮ ಮಕ್ಕಳನ್ನು ಬೇರೆ ಶಾಲೆಗಳಿಗೆ ದಾಖಲು ಮಾಡಿದರು ಎಂದು ತಿಳಿಸಿದರು.

ಕುರುಗೋಡು ಪಟ್ಟಣದ ಹೊರವಲಯದಲ್ಲಿ ಶಾಲಾ ಕಟ್ಟಡ ನಿರ್ಮಿಸಲು ನಾಲ್ಕು ಎಕರೆ ಜಾಗ ಮಂಜೂರಾಗಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಶಾಲೆಯ ಕಟ್ಟಡವನ್ನು ಶೀಘ್ರದಲ್ಲೇ ನಿರ್ಮಿಸಲಾಗುವುದು ಎಂದು ಕರ್ನಾಟಕ ರೆಸಿಡೆನ್ಶಿಯಲ್ ಎಜುಕೇಶನಲ್ ಇನ್‌ಸ್ಟಿಟ್ಯೂಶನಲ್ ಸೊಸೈಟಿಯ (ಕೆಆರ್‌ಇಐಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Fri, 8 December 23

ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್