AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ: ವಾಕಿಂಗ್ ಮಾಡ್ತಿದ್ದ ಮೂವರ ಮೇಲೆ ಹರಿದ ಲಾರಿ; ಇಬ್ಬರು ಸಾವು

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಆಲೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬೆಂಗಳೂರಿನಿಂದ ರಾಜಸ್ಥಾನದತ್ತ ಹೊರಟಿದ್ದ ಲಾರಿಯೊಂದು ವಾಕಿಂಗ್ ಮಾಡುತ್ತಿದ್ದ ಮೂವರ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಕುರಿತು ಖಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯನಗರ: ವಾಕಿಂಗ್ ಮಾಡ್ತಿದ್ದ ಮೂವರ ಮೇಲೆ ಹರಿದ ಲಾರಿ; ಇಬ್ಬರು ಸಾವು
ಮೃತ ಸಿದ್ದಲಿಂಗಯ್ಯ, ಕೊಟ್ರಯ್ಯ
ವಿನಾಯಕ ಬಡಿಗೇರ್​
| Edited By: |

Updated on:Sep 20, 2024 | 2:39 PM

Share

ವಿಜಯನಗರ, ಸೆ.20: ಬೆಂಗಳೂರಿನಿಂದ ರಾಜಸ್ಥಾನದತ್ತ ಹೊರಟಿದ್ದ ಲಾರಿಯೊಂದು ವಾಕಿಂಗ್ ಮಾಡುತ್ತಿದ್ದ ಮೂವರ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಆಲೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಆಲೂರಿನ ಸಿದ್ದಲಿಂಗಯ್ಯ(39) ಹಾಗೂ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ದೇವಸಮುದ್ರ ಗ್ರಾಮದ ದೇವಸಮುದ್ರದ ಕೊಟ್ರಯ್ಯ(26) ಮೃತ ರ್ದುದೈವಿಗಳು. ಗಾಯಗೊಂಡ ಮತ್ತೊಬ್ಬ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಖಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

ಕೋಲಾರ: ಶ್ರೀನಿವಾಸಪುರ ತಾಲೂಕಿನ ಹಕ್ಕಿಪಿಕ್ಕಿ ಕ್ರಾಸ್​ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಕೊನೆಯುಸಿರೆಳೆದಿದ್ದಾರೆ. ಆಂಧ್ರಪ್ರದೇಶದ ಚೀಕಲಬೈಲು ಗ್ರಾಮದ ನಿವಾಸಿ ಗುಣಶೇಖರ್(28) ಮೃತರು. ಬೈಕ್ ಸವಾರ ರಾಯಲ್ಪಾಡುನಿಂದ ಆಂಧ್ರಕ್ಕೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ. ಭೀಕರ ಅಪಘಾತದಲ್ಲಿ ಸವಾರನ ರುಂಡ ಮುಂಡ ಬೇರೆಯಾಗಿದೆ. ಈ ಕುರಿತು ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ರಾಮನಗರ: ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ದುರ್ಮರಣ

ನಿಯಂತ್ರಣ ತಪ್ಪಿ ಮೆಟ್ರೋ ಕಾಮಗಾರಿ ಕಾಂಪೌಂಡ್​ಗೆ ಲಾರಿ ಡಿಕ್ಕಿ

ಬೆಂಗಳೂರು: ಅಪಘಾತ ಔಟರ್​ರಿಂಗ್ ರಸ್ತೆಯಲ್ಲಿ 10 ಚಕ್ರದ ಲಾರಿ ನಿಯಂತ್ರಣ ತಪ್ಪಿ ಮೆಟ್ರೋ ಕಾಮಗಾರಿ ಕಾಂಪೌಂಡ್​ಗೆ  ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕೆಲಕಾಲ ಕಿಲೋಮೀಟರ್​ವರೆಗೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕೂಡಲೇ ಸಂಚಾರಿ ಪೊಲೀಸರು ಜೆಸಿಬಿ ಮೂಲಕ ಲಾರಿ ತೆರವು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:27 pm, Fri, 20 September 24

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ