AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೂವಿನಹಡಗಲಿ ಭಾಗದ ರೈತರ ನೀರಿನ ಬವಣೆಯನ್ನು ನೀಗಿಸಲಾಗಿದೆ: ಬೊಮ್ಮಾಯಿ

ಹೂವಿನಹಡಗಲಿಯ 42 ಸಾವಿರ ಎಕರೆಗೆ ನೀರಾವರಿ ಮಾಡಲಾಗಿದೆ ಎಂದು ಹೂವಿನಹಡಗಲಿ ನಡೆದ ಜನ ಸಂಕಲ್ಪ ಯಾತ್ರೆಯಲ್ಲಿ ಬೊಮ್ಮಾಯಿ ಹೇಳಿದ್ದಾರೆ,

ಹೂವಿನಹಡಗಲಿ ಭಾಗದ ರೈತರ ನೀರಿನ ಬವಣೆಯನ್ನು ನೀಗಿಸಲಾಗಿದೆ:  ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Oct 13, 2022 | 10:10 PM

Share

ಬಳ್ಳಾರಿ: ಹೂವಿನಹಡಗಲಿಯ 42 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಮೂಲಕ ಈ ಭಾಗದ ರೈತರ ನೀರಿನ ಬವಣೆಯನ್ನು ನೀಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು(ಅಕ್ಟೋಬರ್.13) ಹೂವಿನಹಡಗಲಿ ಜನಸಂಕಲ್ಪ ಯಾತ್ರೆಯಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ನಾನು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಳೆದ ಸಾರಿ ಇಲ್ಲಿ ಭೇಟಿ ನೀಡಿದ ಸಂದರ್ಭದಲ್ಲಿ ಸಿಂಗಟಾಲೂರು ಏತ ನೀರಾವರಿ ಪೂರ್ಣ ಮಾಡಬೇಕು ಎಂದು ಜನ ಬೇಡಿಕೆ ಇಟ್ಟಿದ್ದರು‌. ನಾನು ಜಲ ಸಂಪನ್ಮೂಲ ಸಚಿವನಾಗಿದ್ದಾಗ ಹೂವಿನ ಹಡಗಲಿಯ 42 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸಲಾಯಿತು. ಹೂವಿನಹಡಗಲಿಯಲ್ಲಿ ಕೆರೆ ತುಂಬಿಸುವ ಕೆಲಸವನ್ನೂ ಮಾಡಲಾಗಿದೆ. ಹೂವಿನ ಹಡಗಲಿಯ ಅಂತರ್ಜಲ ಹೆಚ್ಚಿಸಲು ಕೆಲಸ ಮಾಡಲಾಗಿದೆ ಎಂದರು.

BDA, BBMP ಆಯುಕ್ತರು ಗೈರು, ವಿಧಾನಸಭೆ ಅರ್ಜಿಗಳ ಸಮಿತಿ ಗರಂ: ಮುಖ್ಯ ಕಾರ್ಯದರ್ಶಿಗೆ ದೂರು

ಈ ಭಾಗದ ರೈತರಿಗೆ ನೀರಿನ ಬರ ನಿವಾರಿಸಲು ಬಿಜೆಪಿ ಸರ್ಕಾರ ಮತ್ತು ಯಡಿಯೂರಪ್ಪ ಅವರು ಕಾರಣ. ಹುಲಿಗುಡ್ಡದ ಯೋಜನೆ ತಾವು ಮಾಡಿದ್ದೇವೆ ಅಂತ ಕೆಲವರು ಹೇಳಿಕೊಳ್ಳುತ್ತಿದ್ದರು. ಅದನ್ನು ರದ್ದು ಮಾಡಿ ಸಿಂಗಟಾಲೂರು ಯೋಜನೆಗೆ ಜೋಡಿಸಿ ರೂಪಿಸಲಾಯಿತು. ತಡಕಲ್ಲ ನೀರಾವರಿ ಯೊಜನೆಯನ್ನು ಪೂರ್ಣ ಮಾಡಿ ಲೋಕಾರ್ಪಣೆ ಮಾಡಲಾಗುವುದು ಭರವಸೆ ನೀಡಿದರು.

ಹೂವಿನಹಡಗಲಿಯ ಸಮಗ್ರ ಅಭಿವೃದ್ಧಿ ಮಾಡಿ, ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಏರ್ಪಡಿಸುವ ಈ ಭಾಗಕ್ಕೆ ನಾನು ನೀಡಿದ ಯೋಜನೆಗಳನ್ನು ನಿಮ್ಮ ಮುಂದೆ ರಿಪೋರ್ಟ್ ಕಾರ್ಡ್ ಇಟ್ಡು ಮತ್ತೆ ಅಧಿಕಾರಕ್ಕೆ ಬಂದು ಕನ್ನಡ ನಾಡಿನಲ್ಲಿ ಕಮಲ ಅರಳಿಸಿ ಕಾಂಗ್ರೆಸ್ ನ್ನು ಬೇರು ಸಮೇತ ಕಿತ್ತು ಹಾಕಬೇಕು. ನಮ್ಮ ನೆಚ್ಚಿನ ನಾಯಕರಾದ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ 150 ಸ್ಥಾನ ಗೆಲ್ಲಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಬಿ.ಶ್ರೀರಾಮುಲು, ಆನಂದಸಿಂಗ್ ಹಾಗೂ ಮತ್ತಿತರರು ಹಾಜರಿದ್ದರು.

Published On - 10:09 pm, Thu, 13 October 22

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​