AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raids: ಸಚಿವ ಶ್ರೀರಾಮುಲು, ಕೈಲಾಸ್ ವ್ಯಾಸ್ ಒಡೆತನದ ಫ್ಯಾಕ್ಟರಿ ಮೇಲೆ ಐಟಿ ದಾಳಿ

ಸಚಿವ ಶ್ರೀರಾಮುಲು ಪಾಲುದಾರನ ಮೇಲೆ ಐಟಿ ದಾಳಿಯಾಗಿದ್ದು, ಐಟಿ ಅಧಿಕಾರಿಗಳು ಶ್ರೀರಾಮುಲು ಪಾಲುದಾರಿಕೆಯ ಹರಿ ಇಸ್ಪಾತ್ ಫ್ಯಾಕ್ಟರಿ ಖರೀದಿ ಹಣದ ಮೂಲ ಕೆದಕುತ್ತಿದ್ದಾರೆ.

IT Raids: ಸಚಿವ ಶ್ರೀರಾಮುಲು, ಕೈಲಾಸ್ ವ್ಯಾಸ್ ಒಡೆತನದ ಫ್ಯಾಕ್ಟರಿ ಮೇಲೆ ಐಟಿ ದಾಳಿ
ಸಚಿವ ಶ್ರೀರಾಮುಲು
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Jan 14, 2023 | 5:19 PM

Share

ಬಳ್ಳಾರಿ: ಸಾರಿಗೆ ಸಚಿವ ಶ್ರೀರಾಮುಲು(Sriramulu) ಹಾಗೂ ಮಾಜಿ ಶಾಸಕ ಸುರೇಶ್ ಬಾಬು ಪಾಲುದಾರನ ಮೇಲೆ ಐಟಿ ದಾಳಿಯಾಗಿದೆ(IT Raids).  ಶ್ರೀರಾಮುಲು, ಸುರೇಶ್ ಬಾಬು ಒಡೆತನದ ಫ್ಯಾಕ್ಟರಿ ನಡೆಸುತ್ತಿದ್ದ ಆಪ್ತರ ಮನೆ ಹಾಗೂ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸಚಿವ ಶ್ರೀರಾಮುಲು ಹಾಗೂ ಕೈಲಾಸ್ ವ್ಯಾಸ್ ಸೇರಿ ಖರೀದಿಸಿರುವ ಹರಿ ಇಸ್ಪಾತ್ ಫ್ಯಾಕ್ಟರಿ ಮೇಲೂ ಸಹ ಐಟಿ ದಾಳಿಯಾಗಿದ್ದು, ಫ್ಯಾಕ್ಟರ್ ಖರೀದಿ ಹಣದ ಮೂಲ ಕೆದಕುತ್ತಿದ್ದಾರೆ.

ಬೆಂಗಳೂರು, ಬಳ್ಳಾರಿ, ಕೊಪ್ಪಳದಲ್ಲಿರುವ ಕೈಗಾರಿಕೋದ್ಯಮಿ ಕೈಲಾಸ್ ವ್ಯಾಸ್ ಪಾಲುದಾರಿಕೆಯ ಕಂಪನಿಗಳ ಮೇಲೆ ದಾಳಿಯಾಗಿದ್ದು, ಬಳ್ಳಾರಿಯ ವಿದ್ಯಾನಗರದ ರಾಗಾಸ್ ಪೋರ್ಟ್ ಅಪಾರ್ಟ್ಮೆಂಟ್ ಫ್ಲಾಟ್ ನಂಬರ್ 310 ಮತ್ತು 510ಪ್ಲಾಟ್ ನಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಸಚಿವ ಶ್ರೀರಾಮುಲು ಹಾಗೂ ಕೈಗಾರಿಕಾ ಉದ್ಯಮಿ ಕೈಲಾಸ್ ವ್ಯಾಸ್ ಸೇರಿ ಖರೀದಿಸಿರುವ ನೂರಾರು ಕೋಟಿ ಬೆಲೆ ಬಾಳುವ ಫ್ಯಾಕ್ಟರಿ ಖರೀದಿಯ ಹಣದ ಮೂಲದ ಬಗ್ಗೆ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಸಚಿವ ಶ್ರೀರಾಮುಲು ಮಾಜಿ ಶಾಸಕ ಸುರೇಶ್ ಬಾಬು ಹಾಗೂ ಲಾಡ್ ಕುಟುಂಬದ ಪ್ಲಾಂಟ್ ಗಳನ್ನು ಕೈಗಾರಿಕಾ ಉದ್ಯಮಿ ಕೈಲಾಸ್ ವ್ಯಾಸ್ ಬಾಡಿಗೆ ಹಾಗೂ ಲೀಜ್ ಮೇಲೆ ನಡೆಸುತ್ತಿದ್ದರು. ಈ ಕೈಗಾರಿಕೆಗಳು ತೆರಿಗೆ ವಂಚನೆ ಮಾಡಿದ ಆರೋಪದ ಐಟಿ ದಾಳಿಯಾಗಿದೆ.

ಯಾವ್ಯಾವ ಕಂಪನಿಗಳ ಮೇಲೆ ದಾಳಿಯಾಗಿದೆ ಎನ್ನುವುದನ್ನು ನೋಡುವುದಾದರೆ, ಮಾಜಿ ಶಾಸಕ ಸುರೇಶ್ ಬಾಬುಗೆ ಸೇರಿದ ಮಹಾ ಮನವ ವಾಷಿಂಗ್ ಪ್ಲಾಂಟ್ , ಕೊಪ್ಪಳದ ಸಿಮ್ಲಾ ಡಾಬ ಬಳಿಯ ವಾಷಿಂಗ್ ಪ್ಲಾಂಟ್ , ಬಳ್ಳಾರಿಯ ವೆಂಕಟೇಶ್ವರ, ಶ್ರೀಹರಿ ಮತ್ತು ಪಿಜಿಎಂ ಪ್ಲಾಂಟ್ ಮೇಲೆ ದಾಳಿಯಾಗಿದೆ.

Published On - 5:06 pm, Sat, 14 January 23

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್