AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ವರ್ಷಗಳ ಬಳಿಕ ಬಳ್ಳಾರಿಗೆ ಕಾಲಿಟ್ಟ ಜನಾರ್ದನ ರೆಡ್ಡಿ ಕುಟುಂಬದಿಂದ ವರಮಹಾಲಕ್ಷ್ಮಿ ಪೂಜೆ

ಬಳ್ಳಾರಿಗೆ ತೆರಳಲು ಸರ್ವೋಚ್ಛ ನ್ಯಾಯಾಲಯ​ ಷರತ್ತುಬದ್ಧ ಅನುಮತಿ ನೀಡಿರುವ ಹಿನ್ನೆಲೆ ಕುಟುಂಬಸ್ಥರ ಜತೆ ಬಳ್ಳಾರಿಗೆ ಬಂದಿರುವ ಜನಾರ್ದನ ರೆಡ್ಡಿ ಇಂದು ವರಮಹಾಲಕ್ಷ್ಮೀ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.

ಮೂರು ವರ್ಷಗಳ ಬಳಿಕ ಬಳ್ಳಾರಿಗೆ ಕಾಲಿಟ್ಟ ಜನಾರ್ದನ ರೆಡ್ಡಿ ಕುಟುಂಬದಿಂದ ವರಮಹಾಲಕ್ಷ್ಮಿ ಪೂಜೆ
ಕುಟುಂಬ ಸಮೇತರಾಗಿ ಪೂಜೆ ಮಾಡಿದ ಜನಾರ್ದನ ರೆಡ್ಡಿ
Follow us
TV9 Web
| Updated By: Skanda

Updated on: Aug 20, 2021 | 8:09 PM

ಬಳ್ಳಾರಿ: ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂದಿಸಿದಂತೆ ಆರೋಪಿಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ (Janardhan Reddy) ಸುಮಾರು 3 ವರ್ಷದ ಬಳಿಕ ತವರೂರು ಬಳ್ಳಾರಿಗೆ ಕಾಲಿಟ್ಟಿದ್ದಾರೆ. ಬಳ್ಳಾರಿಗೆ ತೆರಳಲು ಸರ್ವೋಚ್ಛ ನ್ಯಾಯಾಲಯ (Supreme Court)​ ಷರತ್ತುಬದ್ಧ ಅನುಮತಿ ನೀಡಿರುವ ಹಿನ್ನೆಲೆ ಕುಟುಂಬಸ್ಥರ ಜತೆ ಬಳ್ಳಾರಿಗೆ ಬಂದಿರುವ ಜನಾರ್ಧನ ರೆಡ್ಡಿ ಇಂದು ವರಮಹಾಲಕ್ಷ್ಮೀ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. 8 ವಾರ ಕಾಲ ಬಳ್ಳಾರಿಯಲ್ಲಿ ತಂಗಬಹುದು ಎಂದು ಸರ್ವೋಚ್ಛ ನ್ಯಾಯಾಲಯ ಅನುಮತಿ ನೀಡಿದ್ದು 3 ವರ್ಷಗಳ ಬಳಿಕ ಬಳ್ಳಾರಿಗೆ ಆಗಮಿಸಿದ್ದಾರೆ.

ಬೆಳಗ್ಗಿನ ಜಾವವೇ ಬಳ್ಳಾರಿಗೆ ಬಂದಿರುವ ಗಾಲಿ ಜನಾರ್ದನ ರೆಡ್ಡಿ, ಬಳ್ಳಾರಿಯ ಸಿರುಗುಪ್ಪ ರಸ್ತೆಯ ಮನೆಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಕುಟುಂಬಸ್ಥರ ಜತೆ ಪೂಜೆಯಲ್ಲಿ ಭಾಗಿಯಾದ ಜನಾರ್ದನ ರೆಡ್ಡಿ ಬಳ್ಳಾರಿಗೆ ಬಂದಿರುವ ಬಗ್ಗೆ ಎಸ್​ಪಿಗೆ ಮಾಹಿತಿ ನೀಡಿದ್ದಾರೆ ಎಂದು ಟಿವಿ9ಗೆ ಗಾಲಿ ಜನಾರ್ದನ ರೆಡ್ಡಿ ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಬಳ್ಳಾರಿಗೆ ತೆರಳಲು ನಿನ್ನೆ ಸುಪ್ರೀಂಕೋರ್ಟ್​ ಷರತ್ತುಬದ್ಧ ಅನುಮತಿ ನೀಡಿದ ಹಿನ್ನೆಲೆಯಲ್ಲೇ ಅವರು ಕುಟುಂಬ ಸಮೇತರಾಗಿ ಆಗಮಿಸಿದ್ದು, ಕುಟುಂಬಸ್ಥರ ಜತೆ ಭಕ್ತಿ ಭಾವದಿಂದ ಲಕ್ಷ್ಮಿಗೆ ಪೂಜೆ ಸಲ್ಲಿಸಿದ್ದಾರೆ.

ಬಳ್ಳಾರಿಗೆ ತೆರಳಲು 8 ವಾರಗಳ ಕಾಲ ಅನುಮತಿ ನೀಡುವಂತೆ ಜಾಮೀನು ಅರ್ಜಿ ಕೋರಿ ಮಾಜಿ ಸಚಿವ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಬಳ್ಳಾರಿಗೆ ತೆರಳಲು ಷರತ್ತುಬದ್ಧ ಅನುಮತಿ ನೀಡಿದೆ. ಬಳ್ಳಾರಿಗೆ ಭೇಟಿ ನೀಡಿದ ಪ್ರತಿಸಲವೂ ಎಸ್‌ಪಿಗೆ ಮಾಹಿತಿ ನೀಡಬೇಕು ಎಂದು ಕೋರ್ಟ್ ಷರತ್ತು ವಿಧಿಸಿದೆ. ಜನಾರ್ದನ ರೆಡ್ಡಿ ಜಾಮೀನು ಷರತ್ತಿನಲ್ಲಿಯೂ ಸುಪ್ರೀಂಕೋರ್ಟ್ ಮಾರ್ಪಾಟು ಮಾಡಿದ್ದು, ಜಾಮೀನು ಷರತ್ತು ಸಡಿಲಿಕೆ ಕೋರಿ ಜನಾರ್ದನ ರೆಡ್ಡಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ. ಆದರೆ ಜಾಮೀನಿನ ಷರತ್ತಿನಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂದು ಸಿಬಿಐ ಪ್ರತಿಪಾದಿಸಿತ್ತು. ಜನಾರ್ದನ ರೆಡ್ಡಿ ಬಳ್ಳಾರಿಗೆ ಭೇಟಿ ಕೊಟ್ಟಾಗ ಕಡಪ, ಅನಂತಪುರ ಜಿಲ್ಲಾ ಎಸ್ಪಿಗಳಿಗೂ ಮಾಹಿತಿ ನೀಡಬೇಕು ಎಂದು ತಿಳಿಸಿದ ಸುಪ್ರೀಂಕೋರ್ಟ್, ವಿಚಾರಣಾ ನ್ಯಾಯಾಲಯದಲ್ಲಿ ತ್ವರಿತ ಗತಿಯಲ್ಲಿ ವಿಚಾರಣೆ ನಡೆಸಲು ನಿರ್ದೇಶನ ನೀಡಿದೆ.

ಇದನ್ನೂ ಓದಿ: ಇಂದು ಜನಾರ್ದನ ರೆಡ್ಡಿಗೆ ಬೆಂಗಳೂರಿನಲ್ಲೇ ವರಮಹಾಲಕ್ಷ್ಮಿ ಹಬ್ಬ, ಸ್ವಾಮೀಜಿ ಸೂಚಿಸಿದ ದಿನ ಬಳ್ಳಾರಿಗೆ ಬರುವುದು: ಸೋಮಶೇಖರ ರೆಡ್ಡಿ 

Janardhan Reddy: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ತೆರಳಲು ಷರತ್ತುಬದ್ಧ ಅನುಮತಿ ನೀಡಿದ ಸುಪ್ರೀಂಕೋರ್ಟ್

ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ