AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಜೋಡೋ ಯಾತ್ರೆ ಬ್ಯಾನರ್ ತೆರವು ಮಾಡಿದ ಬಳ್ಳಾರಿ ಪಾಲಿಕೆ, ಕಾಂಗ್ರೆಸ್ ನಾಯಕರ ಆಕ್ರೋಶ

ನಿನ್ನೆ ಮೊನ್ನೆ ಚಿತ್ರದುರ್ಗದಲ್ಲಿ ಬಿಜೆಪಿಯವರು ಹಾಕಿದ್ದ ಬ್ಯಾನರ್ ತೆಗೆಯಲಿಲ್ಲ. ಆದ್ರೆ ಈಗ ‘ಕೈ’ ಕಾರ್ಯಕರ್ತರು ಹಾಕಿದ್ದ ಬ್ಯಾನರ್​​ ತೆಗೆಯುತ್ತಿದ್ದಾರೆ ಎಂದು ಜೆ.ಎಸ್.ಆಂಜನೇಯಲು ಆಕ್ರೋಶ ಹೊರ ಹಾಕಿದರು.

ಭಾರತ್ ಜೋಡೋ ಯಾತ್ರೆ ಬ್ಯಾನರ್ ತೆರವು ಮಾಡಿದ ಬಳ್ಳಾರಿ ಪಾಲಿಕೆ, ಕಾಂಗ್ರೆಸ್ ನಾಯಕರ ಆಕ್ರೋಶ
ಭಾರತ್ ಜೋಡೋ ಯಾತ್ರೆ ಬ್ಯಾನರ್ ತೆರವು ಮಾಡಿದ ಬಳ್ಳಾರಿ ಪಾಲಿಕೆ
TV9 Web
| Updated By: ಆಯೇಷಾ ಬಾನು|

Updated on:Oct 12, 2022 | 8:39 AM

Share

ಬಳ್ಳಾರಿ: ಕೋಟೆನಾಡು ಚಿತ್ರದುರ್ಗದಲ್ಲಿ ಚಳ್ಳಕೆರೆ ಪಟ್ಟಣದಿಂದ ಭಾರತ್ ಜೋಡೋ ಯಾತ್ರೆ ಮುಂದುವರೆದಿದೆ. ಆದ್ರೆ ಮತ್ತೊಂದು ಕಡೆ ರಾಹುಲ್ ಗಾಂಧಿ ಐಕ್ಯತಾ ಯಾತ್ರೆಯ ಸ್ವಾಗತಕ್ಕಾಗಿ ಬಳ್ಳಾರಿಯಲ್ಲಿ ಹಾಕಿದ್ದ ಬ್ಯಾನರ್​ಗಳನ್ನು ತೆರವು ಮಾಡಲಾಗಿದೆ. ಜಿಲ್ಲಾಡಳಿತದ ಸೂಚನೆ ಮೇರೆಗೆ ಪಾಲಿಕೆ ಸಿಬ್ಬಂದಿ ಬ್ಯಾನರ್ ತೆರವು ಮಾಡಿದ್ದಾರೆ.

ನಗರದ ತುಂಬೆಲ್ಲಾ ಅನಧಿಕೃತವಾಗಿ ಹಾಕಿದ ಬ್ಯಾನರ್ ತೆರವಿಗೆ ಪಾಲಿಕೆ ಮುಂದಾಗಿದ್ದು ಪಾಲಿಕೆಯ ವರ್ತನೆ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಸೌಂದರ್ಯಕರಣ‌ಕ್ಕೆ ಅಡ್ಡಿ ಹಾಗೂ ಪ್ಲಾಸ್ಟಿಕ್ ಬಳಕೆ ಹಿನ್ನಲೆಯಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದಿದ್ದು ಜೆಸಿಬಿ ಬಳಸಿ ಬ್ಯಾನರ್ ತೆರವು ಮಾಡುತ್ತಿದ್ದಾರೆ. ಪಾಲಿಕೆ ಸಿಬ್ಬಂದಿ ರಾಶಿ ರಾಶಿ ಬ್ಯಾನರ್ ಗಳನ್ನ ಟ್ಯಾಕ್ಟರ್ ನಲ್ಲಿ ತಗೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ‘ಅವರಿದ್ದರೆ ಉಸಿರುಗಟ್ಟಿದಂತಾಗುತ್ತೆ’; ಸಂಜುನ ನೋಡಿದ ಅನುಗೆ ನೆನಪಾಗುತ್ತಿದ್ದಾನೆ ಆರ್ಯವರ್ಧನ್​

ಪಾಲಿಕೆಯ ಕಮಿಷನರ್ ರುದ್ರೇಶ್ ನೇತೃತ್ವದಲ್ಲಿ ಸುಮಾರು 400 ಸಿಬ್ಬಂದಿಯಿಂದ ಬ್ಯಾನರ್​ಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ರಾತ್ರೋ ರಾತ್ರಿ ಸಿಬ್ಬಂದಿ ದೊಡ್ಡ ದೊಡ್ಡ ಬ್ಯಾನರ್​ಗಳನ್ನು ನೆಲಕ್ಕೆ ಉರುಳಿಸಿ ಅವುಗಳನ್ನು ಬೇರೆಡೆಗೆ ತೆಗೆದುಕೊಂಡು ಹೋಗಿದ್ದಾರೆ. ಪರ್ಮಿಷನ್ ಇಲ್ಲದೇ ಬ್ಯಾನರ್ ಹಾಕಿದ್ದಾರೆ, ಪಕ್ಷಾತೀತವಾಗಿ ಎಲ್ಲ ಬ್ಯಾನರ್ ತೆಗೆದಿದ್ದೇವೆ ಎಂದು ಪಾಲಿಕೆ ಕಮಿಷನರ್ ರುದ್ರೇಶ್ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಕಾಂಗ್ರೆಸ್​ ಬ್ಯಾನರ್​​ ತೆರವಿಗೆ ತೀವ್ರ ಆಕ್ರೋಶ

ಇನ್ನು ಬಳ್ಳಾರಿಯಲ್ಲಿ ಕಾಂಗ್ರೆಸ್​​ ಯಾತ್ರೆಯ ಬ್ಯಾನರ್ ತೆರವು ಮಾಡಿದಕ್ಕೆ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯದರ್ಶಿ ಜೆ.ಎಸ್.ಆಂಜನೇಯಲು ಆಕ್ರೋಶ ಹೊರ ಹಾಕಿದ್ದಾರೆ. ಸರ್ಕಾರ ಅಧಿಕಾರಿಗಳನ್ನ ಬಳಸಿಕೊಂಡು ಬ್ಯಾನರ್ ತೆರವು ಮಾಡಿದ್ದಾರೆ. ನಿನ್ನೆ ಮೊನ್ನೆ ಚಿತ್ರದುರ್ಗದಲ್ಲಿ ಬಿಜೆಪಿಯವರು ಹಾಕಿದ್ದ ಬ್ಯಾನರ್ ತೆಗೆಯಲಿಲ್ಲ. ಆದ್ರೆ ಈಗ ‘ಕೈ’ ಕಾರ್ಯಕರ್ತರು ಹಾಕಿದ್ದ ಬ್ಯಾನರ್​​ ತೆಗೆಯುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು. ಬಳ್ಳಾರಿಯನ್ನ ಮತ್ತೆ ರಿಪಬ್ಲಿಕ್ ಆಫ್ ಬಳ್ಳಾರಿ‌ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಭಾರತ್​ ಜೋಡೋ ಭಯ ಶುರುವಾಗಿದೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:01 am, Wed, 12 October 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​