Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಷ್ಕರ್ಮಿಗಳಿಂದ ಖಬರಸ್ತಾನದಲ್ಲಿನ ನೂರಾರು ಸಮಾಧಿಗಳು ನೆಲಸಮ : ಮುಸ್ಲಿಂ ಸಮುದಾಯದವರಿಂದ ಆಕ್ರೋಶ

ಖಬರಸ್ಥಾನ ನೆಲಸಮಗೊಳಿಸಿದ ಕೃತ್ಯದಿಂದ ಮುಸ್ಲಿಂ ಸಮಾಜದವರಿಗೆ ಮಾನಸಿಕ‌ ಹಿಂಸೆಯಾಗಿದ್ದು, ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು - ಮಹಮ್ಮದ್ ಗೌಸ್ ಗ್ರಾಮೀಣ ಪೊಲೀಸ್ ಠಾಣೆಗೆ ದೂರು

ದುಷ್ಕರ್ಮಿಗಳಿಂದ ಖಬರಸ್ತಾನದಲ್ಲಿನ ನೂರಾರು ಸಮಾಧಿಗಳು ನೆಲಸಮ : ಮುಸ್ಲಿಂ ಸಮುದಾಯದವರಿಂದ ಆಕ್ರೋಶ
ಖಬರಸ್ತಾನದಲ್ಲಿನ ನೂರಾರು ಸಮಾಧಿಗಳು ನೆಲಸಮ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 28, 2022 | 2:06 PM

ಬಳ್ಳಾರಿ: ವಿಜಯನಗರ (Vijayanagara) ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಕೊಂಡನಾಯಕನಹಳ್ಳಿಯಲ್ಲಿ ಮುಸ್ಲಿಂ ಸಮಾಜದ ಖಬರಸ್ತಾನದಲ್ಲಿನ (Kabrastan) ನೂರಕ್ಕೂ ಹೆಚ್ಚು ಸಮಾಧಿಗಳನ್ನು ಸಂಪೂರ್ಣ ನೆಲಸಮಗೊಳಿಸಿರುವ (Demolition) ಘಟನೆ ನಡೆದಿದೆ. ಸುಮಾರು ವರ್ಷಗಳಿಂದ ಮುಸ್ಲಿಮರು ಈ ಖಬರಸ್ತಾನದಲ್ಲಿ ಮೃತರ ಅಂತ್ಯಕ್ರಿಯೆ ಮಾಡುತ್ತ ಬಂದಿದ್ದು. ಅವರ ನೆನಪಲ್ಲಿ ಸಮಾಧಿ ನಿರ್ಮಿಸಿದ್ದಾರೆ. ಆದರೆ ಯಾರೋ ದುಷ್ಕರ್ಮಿಗಳು ಭಾನುವಾರ ತಡರಾತ್ರಿ ಜೆಸಿಬಿಯಿಂದ ಸಮಾಧಿಗಳನ್ನೆಲ್ಲ (Burial Ground) ನೆಲಸಮಗೊಳಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಖಬರಸ್ಥಾನ ನೆಲಸಮಗೊಳಿಸಿದ ಕೃತ್ಯದಿಂದ ಮುಸ್ಲಿಂ ಸಮಾಜದವರಿಗೆ ಮಾನಸಿಕ‌ ಹಿಂಸೆಯಾಗಿದ್ದು, ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ರಾಜ್ಯ ವಕ್ಫ್ ಬೋರ್ಡ್ ಅಡಿಯಲ್ಲಿ ಬರುವ ಮುಸ್ಲಿಂ ಖಬರಸ್ತಾನ (ಸುನ್ನಿ) ಆಡಿಷನಲ್‌ ಪ್ರಾಪರ್ಟಿ ಆಫ್ ಮಸೀದಿ-ಇ-ಫಿರ್ದೋಸ್ ನ ಅಧ್ಯಕ್ಷ ಮಹಮ್ಮದ್ ಗೌಸ್ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಸಂಬಂಧ ಸೋಮವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದುಷ್ಕಮಿಗಳಿಗಾಗಿ ಬಲೆ ಬೀಸಿದ್ದಾರೆ.

ನೂರಲ್ಲ, ನಾಲ್ಕೈದು ಸಮಾಧಿಗಳು ನೆಲಸಮ- ಎಸ್ ಪಿ ಸ್ಪಷ್ಟನೆ

Kabrastan Demolished in Hospet taluk in Vijayanagara SP clarification

ಕೊಂಡನಾಯಕನಹಳ್ಳಿಯಲ್ಲಿ ಮುಸ್ಲಿಂ ಸಮಾಜದ ಖಬರಸ್ತಾನದಲ್ಲಿನ ನೂರು ಅಲ್ಲ, ನಾಲ್ಕೈದು ಸಮಾಧಿಗಳನ್ನು ನೆಲ ಸಮಗೊಳಿಸಲಾಗಿದೆ. ಅಮರೇಶ ಎಂಬುವರಿಗೆ ಸೇರಿದ ಎಂಟು ಸೇಂಟ್ಸ್ ಖಾಸಗಿ ಜಾಗದಲ್ಲಿ ಮುಸ್ಲಿಮರ ಸಮಾಧಿಗಳನ್ನು ನಿರ್ಮಿಸಲಾಗಿತ್ತು. ಅವರು ಅದಕ್ಕೆ ಹಣ ಕೇಳಿದರೆ ಕೊಟ್ಟಿರಲಿಲ್ಲ. ಅದಕ್ಕಾಗಿ ಅವರು ಬೇರೆಯವರ ಮೂಲಕ ಅದನ್ನು ತೆರವುಗೊಳಿಸಿದ್ದಾರೆ. ಇದು ಸಿವಿಲ್ ವಿಷಯ. ಈ ಕುರಿತು ಸಂಬಂಧಿಸಿದ ಇಲಾಖೆಯ ಗಮನಕ್ಕೆ ಈ ವಿಷಯ ತರಲಾಗಿದೆ. ಅವರು ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಜರುಗಿಸುವರು ಎಂದು ಎಸ್ಪಿ ಶ್ರೀಹರಿಬಾಬು ತಿಳಿಸಿದ್ದಾರೆ.

ಈ ವಿವಾದಿತ ಜಾಗ ವಕ್ಫ್ ಬೋರ್ಡ್ ಗೆ ಸೇರಿದ್ದಲ್ಲ. ಅದರ ಸಮೀಪದ ಜಾಗ ವಕ್ಫ್ ಬೋರ್ಡಿನದ್ದಾಗಿದೆ‌. ಒಟ್ಟಿನಲ್ಲಿ ಖಬರಸ್ತಾನದಲ್ಲಿನ ಸಮಾಧಿಗಳನ್ನ ನೆಲಸಮಗೊಳಿಸಿರುವುದು ಮುಸ್ಲಿಂ ಸಮದಾಯದ ಆಕ್ರೋಶ ಕಾರಣವಾಗಿದ್ದು. ಹೊಸಪೇಟೆ ಪಟ್ಟಣದ ಮುಸ್ಲಿಂ ಸಮುದಾಯದ ಮುಖಂಡರು ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವರದಿ: ವೀರೇಶ ದಾನಿ, ಟಿವಿ 9, ವಿಜಯನಗರ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:54 pm, Wed, 28 December 22

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ