AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಒಪ್ಪಿಗೆ ನಂತರವೂ ಬಳ್ಳಾರಿ ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ರಾಜ್ಯ ತಡೆ, ಹೆಚ್​​​ಡಿಕೆಗೆ ಹಿನ್ನಡೆ

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸ್ವಾಮಿಮಲೈ ಬ್ಲಾಕಿನ ದೇವದಾರಿ ಹಿಲ್​ 401.57 ಹೆಕ್ಟರ್​​ ಅರಣ್ಯ ಭೂಮಿಯಲ್ಲಿ ಗಣಿಗಾರಿಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ ರಾಜ್ಯ ಸರ್ಕಾರ ತಡೆ ಹಿಡಿದಿದೆ. ಇದರಿಂದ ಕೇಂದ್ರ ಉಕ್ಕು ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಹಿನ್ನಡೆಯಾಗಿದೆ.

ಕೇಂದ್ರದ ಒಪ್ಪಿಗೆ ನಂತರವೂ ಬಳ್ಳಾರಿ ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ರಾಜ್ಯ ತಡೆ, ಹೆಚ್​​​ಡಿಕೆಗೆ ಹಿನ್ನಡೆ
ಈಶ್ವರ್​ ಖಂಡ್ರೆ, ಹೆಚ್​ಡಿ ಕುಮಾರಸ್ವಾಮಿ
ಪ್ರಸನ್ನ ಗಾಂವ್ಕರ್​
| Edited By: |

Updated on:Jun 23, 2024 | 12:17 PM

Share

ಬೆಂಗಳೂರು, ಜೂನ್​ 23: ಬಳ್ಳಾರಿ (Ballari) ಜಿಲ್ಲೆಯ ಸಂಡೂರು (Sandur) ತಾಲೂಕಿನ ಸ್ವಾಮಿಮಲೈ ಬ್ಲಾಕಿನ ದೇವದಾರಿ ಬೆಟ್ಟ 401.57 ಹೆಕ್ಟರ್​​ ಅರಣ್ಯ ಭೂಮಿಯಲ್ಲಿ (Forest Aria) ಕಬ್ಬಿಣದ ಅದಿರು ಗಣಿಗಾರಿಕೆ (Mining) ನಡೆಸದಂತೆ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (ಕೆಐಒಸಿಎಲ್​)ಗೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ತಡೆಗೆ ಕಾರಣ

ಕೆಐಒಸಿಎಲ್ ಈ ಹಿಂದೆ ಕುದುರೆಮುಖ ರಾಷ್ಟ್ರೀಯ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಿದ ಸಂದರ್ಭದಲ್ಲಿ ಹಲವು ಲೋಪಗಳನ್ನು ಎಸಗಿದೆ. ಅಲ್ಲದೆ, ಅರಣ್ಯ ಕಾಯ್ದೆಯನ್ನು ಉಲ್ಲಂಘಿಸಿದೆ. ಈ ಕಾರಣಕ್ಕಾಗಿ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ನಿಗದಿತ ಕಾಲಮಿತಿಯೊಳಗೆ ಅರಣ್ಯ ಅಭಿವೃದ್ಧಿ ಸೇರಿದಂತೆ ಇನ್ನಿತರ ಕ್ರಮಗಳನ್ನು ಕೈಗೊಳ್ಳುವಂತೆ ಕೆಐಒಸಿಎಲ್‌ಗೆ ನಿರ್ದೇಶಿಸಿತ್ತು.

ಆದರೆ, ಕೆಐಒಸಿಎಲ್ ನಿರ್ದೇಶನಗಳನ್ನು ಜಾರಿ ಮಾಡುವಲ್ಲಿ ವಿಫಲವಾಗಿದೆ. ಹೀಗಾಗಿ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವವರಿಗೆ ದೇವದಾರಿ ಬೆಟ್ಟ ಪ್ರದೇಶದಲ್ಲಿ ಗಣಿಗಾರಿಕೆಗಾಗಿ ನೀಡಲಿರುವ ಅರಣ್ಯ ಭೂಮಿಯನ್ನು ಕೆಐಒಸಿಎಲ್‌ಗೆ ಹಸ್ತಾಂತರಿಸಬಾರದು ಹಾಗೂ ಅರಣ್ಯ ತೀರುವಳಿಗುತ್ತಿ ಗೆ ಪತ್ರಕ್ಕೆ ಅಧಿಕಾರಿಗಳು ಸಹಿ ಹಾಕದಿರುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ನಿರ್ದೇಶಿಸಿದ್ದಾರೆ.

ಈ ಸಂಬಂಧ ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ ಮಾತನಾಡಿ, ದೇವದಾರಿ ಬೆಟ್ಟ ಪ್ರದೇಶದಲ್ಲಿ ಗಣಿಗಾರಿಕೆಗಾಗಿ 2018 ನಲ್ಲಿ ಕೆಐಓಸಿಎಲ್ ಅವರು ಅರ್ಜಿ ಸಲ್ಲಿಸಿದ್ದರು. ಆದರೆ ಅರಣ್ಯಕ್ಕೆ ಮತ್ತು ಜಲಮೂಲಗಳಿಗೆ ಹಾನಿ ಆಗುತ್ತದೆ ಎಂದು ಕೇಂದ್ರ ಸರ್ಕಾರ ಅನುಮತಿ ನೀಡಲು ನಿರಾಕರಿಸಿತು. ಆದರೆ 2023 ಏಪ್ರಿಲ್​ನಲ್ಲಿ ಕೆಲ ಷರತ್ತುಗಳ ಮೇರೆಗೆ ಮೊದಲ ಹಂತಕ್ಕೆ ಒಪ್ಪಿಗೆ ಸಿಕ್ಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: ದೇವದಾರಿ ಹಿಲ್ಸ್​ನಲ್ಲಿ ಗಣಿಗಾರಿಕೆಗೆ ಸರ್ಕಾರ ಅನುಮತಿ ನಿರಾಕರಣೆ; ಗುತ್ತಿಗೆಗೆ ಸಹಿ ಹಾಕದಂತೆ ಈಶ್ವರ ಖಂಡ್ರೆ ಸೂಚನೆ

ಒಪ್ಪಿಗೆ ಸಿಕ್ಕ ಬಳಿಕ ಗಣಿಗಾರಿಕೆ ಕೆಐಓಸಿಎಲ್ ಆರಂಭಿಸಲು ಮುಂದಾಗಿದ್ದತ್ತು. ಆದರೆ, ಕೆಐಓಸಿಎಲ್ ಈ ಹಿಂದೆ ನಡೆಸಿದ ಹಿಂದೆ ಗಣಿಗಾರಿಕೆ ಮಾಡುವ ಸಂದರ್ಭದಲ್ಲಿ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪಗಳಿವೆ ಹೀಗಾಗಿ ತಡೆದಿದ್ದೇವೆ ಎಂದು ಹೇಳಿದರು.

ಇದು ರಾಜ್ಯ ಸರ್ಕಾರದ ಸ್ವತ್ತು. ನಮ್ಮ ಅನುಮತಿಯಿಲ್ಲದೆ ಗಣಿಗಾರಿಕೆ ಮಾಡಲು ಬರಲ್ಲ. ಮತ್ತು ನಮ್ಮ ಇಲಾಖೆಯ ಷರತ್ತು ಪೂರೈಸುವವರೆಗೂ ಜಮೀನು‌ ಹಸ್ತಾಂತರಿಸಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದ್ದೇನೆ. ಗಣಿಗಾರಿಕೆಗೆ ಅರಣ್ಯ ಭೂಮಿಯನ್ನು ಹಸ್ತಾಂತರ ಮಾಡಿದ ಮೇಲೆ ಏನು ಮಾಡಲು ಬರುವುದಿಲ್ಲ. ಹೀಗಾಗಿ, ತಡೆ ಹಿಡಿದ್ದೇವೆ ಎಂದು ಮಾಹಿತಿ ನೀಡಿದರು.

ದೇವದಾರಿ ಬೆಟ್ಟ ಪ್ರದೇಶದ ವರ್ಜಿನ್ ಕಾಡಿನಲ್ಲಿ 99 ಸಾವಿರ ಮರಗಳಿವೆ. ಜೀವವೈವಿಧ್ಯಕ್ಕೆ ಧಕ್ಕೆ ಆಗಲಿದೆ ಎಂಬ ಪರಿಸರವಾದಿಗಳ ಅಭಿಪ್ರಾಯವಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:16 pm, Sun, 23 June 24

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ