AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಒಪ್ಪಿಗೆ ನಂತರವೂ ಬಳ್ಳಾರಿ ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ರಾಜ್ಯ ತಡೆ, ಹೆಚ್​​​ಡಿಕೆಗೆ ಹಿನ್ನಡೆ

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸ್ವಾಮಿಮಲೈ ಬ್ಲಾಕಿನ ದೇವದಾರಿ ಹಿಲ್​ 401.57 ಹೆಕ್ಟರ್​​ ಅರಣ್ಯ ಭೂಮಿಯಲ್ಲಿ ಗಣಿಗಾರಿಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ ರಾಜ್ಯ ಸರ್ಕಾರ ತಡೆ ಹಿಡಿದಿದೆ. ಇದರಿಂದ ಕೇಂದ್ರ ಉಕ್ಕು ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಹಿನ್ನಡೆಯಾಗಿದೆ.

ಕೇಂದ್ರದ ಒಪ್ಪಿಗೆ ನಂತರವೂ ಬಳ್ಳಾರಿ ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ರಾಜ್ಯ ತಡೆ, ಹೆಚ್​​​ಡಿಕೆಗೆ ಹಿನ್ನಡೆ
ಈಶ್ವರ್​ ಖಂಡ್ರೆ, ಹೆಚ್​ಡಿ ಕುಮಾರಸ್ವಾಮಿ
ಪ್ರಸನ್ನ ಗಾಂವ್ಕರ್​
| Edited By: |

Updated on:Jun 23, 2024 | 12:17 PM

Share

ಬೆಂಗಳೂರು, ಜೂನ್​ 23: ಬಳ್ಳಾರಿ (Ballari) ಜಿಲ್ಲೆಯ ಸಂಡೂರು (Sandur) ತಾಲೂಕಿನ ಸ್ವಾಮಿಮಲೈ ಬ್ಲಾಕಿನ ದೇವದಾರಿ ಬೆಟ್ಟ 401.57 ಹೆಕ್ಟರ್​​ ಅರಣ್ಯ ಭೂಮಿಯಲ್ಲಿ (Forest Aria) ಕಬ್ಬಿಣದ ಅದಿರು ಗಣಿಗಾರಿಕೆ (Mining) ನಡೆಸದಂತೆ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (ಕೆಐಒಸಿಎಲ್​)ಗೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ತಡೆಗೆ ಕಾರಣ

ಕೆಐಒಸಿಎಲ್ ಈ ಹಿಂದೆ ಕುದುರೆಮುಖ ರಾಷ್ಟ್ರೀಯ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಿದ ಸಂದರ್ಭದಲ್ಲಿ ಹಲವು ಲೋಪಗಳನ್ನು ಎಸಗಿದೆ. ಅಲ್ಲದೆ, ಅರಣ್ಯ ಕಾಯ್ದೆಯನ್ನು ಉಲ್ಲಂಘಿಸಿದೆ. ಈ ಕಾರಣಕ್ಕಾಗಿ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ನಿಗದಿತ ಕಾಲಮಿತಿಯೊಳಗೆ ಅರಣ್ಯ ಅಭಿವೃದ್ಧಿ ಸೇರಿದಂತೆ ಇನ್ನಿತರ ಕ್ರಮಗಳನ್ನು ಕೈಗೊಳ್ಳುವಂತೆ ಕೆಐಒಸಿಎಲ್‌ಗೆ ನಿರ್ದೇಶಿಸಿತ್ತು.

ಆದರೆ, ಕೆಐಒಸಿಎಲ್ ನಿರ್ದೇಶನಗಳನ್ನು ಜಾರಿ ಮಾಡುವಲ್ಲಿ ವಿಫಲವಾಗಿದೆ. ಹೀಗಾಗಿ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವವರಿಗೆ ದೇವದಾರಿ ಬೆಟ್ಟ ಪ್ರದೇಶದಲ್ಲಿ ಗಣಿಗಾರಿಕೆಗಾಗಿ ನೀಡಲಿರುವ ಅರಣ್ಯ ಭೂಮಿಯನ್ನು ಕೆಐಒಸಿಎಲ್‌ಗೆ ಹಸ್ತಾಂತರಿಸಬಾರದು ಹಾಗೂ ಅರಣ್ಯ ತೀರುವಳಿಗುತ್ತಿ ಗೆ ಪತ್ರಕ್ಕೆ ಅಧಿಕಾರಿಗಳು ಸಹಿ ಹಾಕದಿರುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ನಿರ್ದೇಶಿಸಿದ್ದಾರೆ.

ಈ ಸಂಬಂಧ ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ ಮಾತನಾಡಿ, ದೇವದಾರಿ ಬೆಟ್ಟ ಪ್ರದೇಶದಲ್ಲಿ ಗಣಿಗಾರಿಕೆಗಾಗಿ 2018 ನಲ್ಲಿ ಕೆಐಓಸಿಎಲ್ ಅವರು ಅರ್ಜಿ ಸಲ್ಲಿಸಿದ್ದರು. ಆದರೆ ಅರಣ್ಯಕ್ಕೆ ಮತ್ತು ಜಲಮೂಲಗಳಿಗೆ ಹಾನಿ ಆಗುತ್ತದೆ ಎಂದು ಕೇಂದ್ರ ಸರ್ಕಾರ ಅನುಮತಿ ನೀಡಲು ನಿರಾಕರಿಸಿತು. ಆದರೆ 2023 ಏಪ್ರಿಲ್​ನಲ್ಲಿ ಕೆಲ ಷರತ್ತುಗಳ ಮೇರೆಗೆ ಮೊದಲ ಹಂತಕ್ಕೆ ಒಪ್ಪಿಗೆ ಸಿಕ್ಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: ದೇವದಾರಿ ಹಿಲ್ಸ್​ನಲ್ಲಿ ಗಣಿಗಾರಿಕೆಗೆ ಸರ್ಕಾರ ಅನುಮತಿ ನಿರಾಕರಣೆ; ಗುತ್ತಿಗೆಗೆ ಸಹಿ ಹಾಕದಂತೆ ಈಶ್ವರ ಖಂಡ್ರೆ ಸೂಚನೆ

ಒಪ್ಪಿಗೆ ಸಿಕ್ಕ ಬಳಿಕ ಗಣಿಗಾರಿಕೆ ಕೆಐಓಸಿಎಲ್ ಆರಂಭಿಸಲು ಮುಂದಾಗಿದ್ದತ್ತು. ಆದರೆ, ಕೆಐಓಸಿಎಲ್ ಈ ಹಿಂದೆ ನಡೆಸಿದ ಹಿಂದೆ ಗಣಿಗಾರಿಕೆ ಮಾಡುವ ಸಂದರ್ಭದಲ್ಲಿ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪಗಳಿವೆ ಹೀಗಾಗಿ ತಡೆದಿದ್ದೇವೆ ಎಂದು ಹೇಳಿದರು.

ಇದು ರಾಜ್ಯ ಸರ್ಕಾರದ ಸ್ವತ್ತು. ನಮ್ಮ ಅನುಮತಿಯಿಲ್ಲದೆ ಗಣಿಗಾರಿಕೆ ಮಾಡಲು ಬರಲ್ಲ. ಮತ್ತು ನಮ್ಮ ಇಲಾಖೆಯ ಷರತ್ತು ಪೂರೈಸುವವರೆಗೂ ಜಮೀನು‌ ಹಸ್ತಾಂತರಿಸಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದ್ದೇನೆ. ಗಣಿಗಾರಿಕೆಗೆ ಅರಣ್ಯ ಭೂಮಿಯನ್ನು ಹಸ್ತಾಂತರ ಮಾಡಿದ ಮೇಲೆ ಏನು ಮಾಡಲು ಬರುವುದಿಲ್ಲ. ಹೀಗಾಗಿ, ತಡೆ ಹಿಡಿದ್ದೇವೆ ಎಂದು ಮಾಹಿತಿ ನೀಡಿದರು.

ದೇವದಾರಿ ಬೆಟ್ಟ ಪ್ರದೇಶದ ವರ್ಜಿನ್ ಕಾಡಿನಲ್ಲಿ 99 ಸಾವಿರ ಮರಗಳಿವೆ. ಜೀವವೈವಿಧ್ಯಕ್ಕೆ ಧಕ್ಕೆ ಆಗಲಿದೆ ಎಂಬ ಪರಿಸರವಾದಿಗಳ ಅಭಿಪ್ರಾಯವಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:16 pm, Sun, 23 June 24

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ