AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಸ್ಪರ ಪ್ರೀತಿ: ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಎಸ್ಕೇಪ್

ಲವ್​ ಜಿಹಾದ್​ಯಿಂದ ಹಿಂದೂ ಹೆಣ್ಣುಮಕ್ಕಳನ್ನು ರಕ್ಷಿಸಲು ಇತ್ತ ಶ್ರೀರಾಮ ಸೇನೆ ಸಹಾಯವಾಣಿಯನ್ನು ಇಂದು(ಮೇ.29) ಆರಂಭಿಸಿದೆ. ಇದರ ಬೆನ್ನಲ್ಲೇ ಇದೀಗ ಬಳ್ಳಾರಿ(Ballari) ಜಿಲ್ಲೆಯ ಸಿರಗುಪ್ಪ ಪಟ್ಟಣ ವ್ಯಾಪ್ತಿಯಲ್ಲಿ ಪರಸ್ಪರ ಪ್ರೀತಿಸಿ ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಓಡಿಹೋದ ಘಟನೆ ಬೆಳಕಿಗೆ ಬಂದಿದೆ.

ಪರಸ್ಪರ ಪ್ರೀತಿ: ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಎಸ್ಕೇಪ್
ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಎಸ್ಕೇಪ್
ವಿನಾಯಕ ಬಡಿಗೇರ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on:May 29, 2024 | 4:08 PM

Share

ಬಳ್ಳಾರಿ, ಮೇ.29: ಅಪ್ರಾಪ್ತ ಹಿಂದೂ(Hindu) ಯುವಕ, ಮುಸ್ಲಿಂ(Muslim) ಯುವತಿ ಪ್ರೀತಿಸಿ ಓಡಿಹೋದ ಘಟನೆ ಬಳ್ಳಾರಿ(Ballari) ಜಿಲ್ಲೆಯ ಸಿರಗುಪ್ಪ ಪಟ್ಟಣ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರು ಅಪ್ರಾಪ್ತರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದು ಬಂದಿದೆ. ಇಬ್ಬರ ಪ್ರೀತಿ ವಿಷಯ ಇಬ್ಬರು ಮನೆಯಲ್ಲಿ ಗೊತ್ತಾಗುತ್ತಿದಂತೆ 16 ವರ್ಷದ ಮುಸ್ಲಿಂ ಯುವತಿ ಮತ್ತು 20 ವರ್ಷದ ಹಿಂದೂ ಯುವಕ ಹದಿನೈದು ದಿನಗಳ ಹಿಂದೆಯೇ ಮನೆಯಿಂದ ಎಸ್ಕೇಪ್ ಆಗಿದ್ದಾರೆ.

ಯುವಕನ ವಿರುದ್ಧ ಪ್ರಕರಣ ದಾಖಲು

ಹಿಂದೂ ಯುವಕ ಪರಮೇಶ ಹಾಗೂ ಮುಸ್ಲಿಂ ಯುವತಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿ ವಿಚಾರ ಮನೆಯಲ್ಲಿ ಗೊತ್ತಾಗುತ್ತಿದಂತೆ ನಾಪತ್ತೆ ಆಗಿದ್ದಾರೆ. ಈ ಕುರಿತು ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಯುವಕ ಪರಮೇಶ ವಿರುದ್ಧ ಯುವತಿ ಕಡೆಯವರು ಪ್ರಕರಣ ದಾಖಲಿಸಿದ್ದು, ಯುವತಿಯನ್ನ ಹುಡುಕಿಕೊಡುವಂತೆ ಪೋಷಕರ ಒತ್ತಾಯ ಮಾಡುತ್ತಿದ್ದಾರೆ.

ಇದನ್ನೂ ಓದಿ:ಹಿಂದೂ ಬಾಲಕಿ ಜೊತೆ ಅನ್ಯ ಧರ್ಮಿಯ ಯುವಕ ಪರಾರಿ: ಲವ್​ ಜಿಹಾದ್​​ ಆರೋಪ

ಲವ್ ಜಿಹಾದ್ ಸದ್ದಿನ ಮಧ್ಯೆಯೇ ಶ್ರೀರಾಮ ಸೇನೆ ಸಹಾಯವಾಣಿ ಆರಂಭ

ಮಂಗಳೂರು: ಕಾಸರಗೋಡಿನಲ್ಲಿ ಲವ್ ಜಿಹಾದ್ ಸದ್ದಿನ ಮಧ್ಯೆಯೇ ಶ್ರೀರಾಮ ಸೇನೆ ಸಹಾಯವಾಣಿ ಆರಂಭಿಸಿದೆ. ಲವ್ ಜಿಹಾದ್ ಮಟ್ಟ ಹಾಕಲು ಶ್ರೀರಾಮಸೇನೆ ಸಂಘಟನೆ ಹೊಸದೊಂದು ಹೆಜ್ಜೆ ಇಟ್ಟಿದೆ. ಇದು ಮಂಗಳೂರು ಸೇರಿದಂತೆ ಬೆಂಗಳೂರು, ಹುಬ್ಬಳ್ಳಿ, ಬಾಗಲಕೋಟೆ, ಕಲಬುರಗಿ ಮತ್ತು ದಾವಣಗೆರೆ ಸೇರಿ ರಾಜ್ಯದ ಆರು ಕಡೆ ಕೇಂದ್ರ ವಾಗಿರಿಸಿ ಕಾರ್ಯಾಚರಣೆ ನಡೆಸಲಿದ್ದು, ಸಹಾಯವಾಣಿಗೆ ಕರೆ ಮಾಡಿದವರ ಹೆಸರನ್ನು ಗೌಪ್ಯವಾಗಿರಿಸಲು ನಿರ್ಧರಿಸಿದೆ.

ಲವ್‌ ಜಿಹಾದ್‌ ಜಾಲದಲ್ಲಿ ಸಿಕ್ಕಿ ಬೀಳುವ ಯುವತಿಯರನ್ನು ಜಾಲದಿಂದ ಹೊರತರಲು ಈ ಮೂಲಕ ಪ್ರಯತ್ನಿಸಲಾಗುತ್ತಿದೆ. ಆಯಾ ಜಿಲ್ಲೆಗಳಲ್ಲಿ ವಕೀಲರು, ಕೌನ್ಸೆಲಿಂಗ್ ತಜ್ಞರು,ನಿವೃತ್ತ ಪೊಲೀಸ್ ಅಧಿಕಾರಿಗಳಿರುವ ತಂಡದಿಂದ ಕಾರ್ಯ ನಿರ್ವಹಣೆ ಮಾಡಲಿದ್ದು, ಕಾನೂನು ಬದ್ದವಾಗಿ, ಸುವ್ಯವಸ್ಥಿತವಾಗಿ ಮಾಡಲು ಯೋಜನೆ ರೂಪಿಸಲಾಗಿದೆ. ಹೆಲ್ಪ್ ಲೈನ್ ನಂಬರ್ ಹೀಗಿದ್ದು, 9090443444 ಸಂಖ್ಯೆಯ ಸಹಾಯವಾಣಿಗೆ ಶ್ರೀರಾಮ ಸೇನೆ ಅಧಿಕೃತ ಚಾಲನೆ ನೀಡಿದೆ. ದಿನದ 24 ಗಂಟೆಯೂ ಲವ್ ಜಿಹಾದ್ ಹೆಲ್ಪ್ ಲೈನ್ ಕಾರ್ಯ ನಿರ್ವಹಿಸಲಿದೆ.

ರಾಜ್ಯದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Wed, 29 May 24

Follow Us
ವಿನಾಯಕ ಬಡಿಗೇರ್​
ವಿನಾಯಕ ಬಡಿಗೇರ್​
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ