AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಹಿಂದೂ ವಾದಿಗಳು, ಆದ್ರೆ ಯಾವ ಜಾತಿಗೂ ಅನ್ಯಾಯ ಮಾಡಲ್ಲ; ಸಚಿವ ಕೆ.ಎಸ್.ಈಶ್ವರಪ್ಪ

ರಾಜ್ಯದಲ್ಲಿ 28 ಸಾವಿರ ಕೆರೆಗಳಿವೆ. ಆ ಎಲ್ಲಾ ಕೆರೆಗಳನ್ನೂ ಅಭಿವೃದ್ಧಿ ಮಾಡುತ್ತೇವೆ. ಒಂದೂವರೆ ವರ್ಷದ ಒಳಗೆ ರಾಜ್ಯದ ಎಲ್ಲ ಕೆರೆಗಳ ಅಭಿವೃದ್ಧಿ ಮಾಡುತ್ತೇವೆ. ಕೆಲವೆಡೆ ಒತ್ತುವರಿಯಾಗಿದೆ.

ನಾವು ಹಿಂದೂ ವಾದಿಗಳು, ಆದ್ರೆ ಯಾವ ಜಾತಿಗೂ ಅನ್ಯಾಯ ಮಾಡಲ್ಲ; ಸಚಿವ ಕೆ.ಎಸ್.ಈಶ್ವರಪ್ಪ
ಸಚಿವ ಕೆ.ಎಸ್.ಈಶ್ವರಪ್ಪ
TV9 Web
| Edited By: sandhya thejappa|

Updated on: Sep 12, 2021 | 3:05 PM

Share

ಬಳ್ಳಾರಿ: ನರೇಗಾ ಕಾಮಗಾರಿಯ ಎಲ್ಲಾ ಹಣವನ್ನೂ ಕೇಂದ್ರ ಸರ್ಕಾರ (Central Government) ಬಿಡುಗಡೆ ಮಾಡಿದೆ. ಇದು ಸಂತಸದ ವಿಷಯ ಎಂದು ಬಳ್ಳಾರಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa), ಸೆ.7ಕ್ಕೆ ಕೇಂದ್ರದ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಅವರನ್ನು ಭೇಟಿ ಮಾಡಿದ್ದೆ. ಅವರ ಬಳಿ ನರೇಗಾ ಬಾಕಿ ಬಿಡುಗಡೆಗೆ ಮನವಿ ಮಾಡಿದ್ದೆ. ಎಲ್ಲಾ ಬಾಕಿ ಹಣ ಕೊಟ್ಟು 117 ಕೋಟಿ ಹೆಚ್ಚುವರಿ ಹಣ ಬಿಡುಗಡೆ ಮಾಡಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ 28 ಸಾವಿರ ಕೆರೆಗಳಿವೆ. ಆ ಎಲ್ಲಾ ಕೆರೆಗಳನ್ನೂ ಅಭಿವೃದ್ಧಿ ಮಾಡುತ್ತೇವೆ. ಒಂದೂವರೆ ವರ್ಷದ ಒಳಗೆ ರಾಜ್ಯದ ಎಲ್ಲ ಕೆರೆಗಳ ಅಭಿವೃದ್ಧಿ ಮಾಡುತ್ತೇವೆ. ಕೆಲವೆಡೆ ಒತ್ತುವರಿಯಾಗಿದೆ. ಒತ್ತುವರಿಯನ್ನು ಬಿಡಿ ಅಂತ ಮನವಿ ಮಾಡುತ್ತೇವೆ. ಎಷ್ಟೇ ಪ್ರಭಾವಿ ವ್ಯಕ್ತಿಗಳಾಗಿದರೂ ಒತ್ತುವರಿ ಬಿಡಿಸಿಕೊಳ್ಳುತ್ತೇವೆ. ಕಲ್ಯಾಣಿಗಳು ಗೋಕಟ್ಟೆಗಳ ಅಭಿವೃದ್ಧಿ ಮಾಡುತ್ತೇವೆ. ಅಂತರ್ಜಲ ಹೆಚ್ಚು ಮಾಡಬೇಕು ಅಂತ ರವಿಶಂಕರ್ ಗುರೂಜಿ ಸಹಕಾರ ನೀಡುತ್ತಿದ್ದಾರೆ. ಅವರ ಮೂಲಕವೂ ಅಭಿವೃದ್ಧಿ ಮಾಡುತ್ತೇವೆ ಎಂದು ಈಶ್ವರಪ್ಪ ಭರವಸೆ ನೀಡಿದ್ದಾರೆ.

ಇನ್ನು ಜಾತಿ ಗಣತಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವ ಈಶ್ವರಪ್ಪ, ನಾನು ಸತ್ಯ ಹೇಳಿದರೆ ಸಿಟ್ಟು ಬರಬಹುದು. ಯಾವುದೇ ಕಾರಣಕ್ಕೂ ರಾಜಕಾರಣ ಮಾಡುವುದಕ್ಕೆ ಇಷ್ಟ ಪಡುವುದಿಲ್ಲ. ನಾನು ವಿರೋಧ ಪಕ್ಷದ ನಾಯಕರಾಗಿದ್ದಾಗ ಸಿದ್ದರಾಮಯ್ಯ ಸಿಎಂ ಆಗಿದ್ದರು. ಆಗ ಜಾತಿಗಣತಿ ವರದಿ ಯಾವಾಗ ಮಂಡಿಸ್ತೀರಿ ಎಂದು ಪ್ರಶ್ನೆ ಮಾಡಿದ್ದೆ. ಚುನಾವಣೆ ಬರುವುದರೊಳಗೆ ಜಾತಿ ಗಣತಿ ವರದಿ ಮಂಡಿಸ್ತೀನಿ ಅಂದಿದ್ದರು. ನಾವೂ ನಂಬಿದ್ದೆವು. ಈಗ ಅವರೇ ನಮ್ಮ ಸರ್ಕಾರ ಇದ್ದಾಗ ಕಾಂತರಾಜು ಅವರು ರಿಪೋರ್ಟ್ ಕೊಡಲಿಲ್ಲ ಅಂತ ಹೇಳುತ್ತಿದ್ದಾರೆ. ಇದನ್ನು ನಂಬಬೇಕೋ, ಬಿಡಬೇಕೋ ಗೊತ್ತಿಲ್ಲ ಎಂದು ಸಚಿವ ಈಶ್ವರಪ್ಪ ಅಭಿಪ್ರಾಯಪಟ್ಟರು.

ಮುಂದೆ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಬಂತು. ಸಿದ್ದರಾಮಯ್ಯ, ಚುನಾವಣೆ ಬರುವುದರೊಳಗೆ ವರದಿ ಮಂಡನೆ ಮಾಡುತ್ತೇವೆ ಅಂದಿದ್ದರು. ಆದರೆ ಈಗ ಸರಿಯಾದ ಸಮಯಕ್ಕೆ ಕಾಂತರಾಜ್ ರಿಪೋರ್ಟ್ ಕೊಡಲಿಲ್ಲ ಅಂತಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿಯೂ ಬಿಡುಗಡೆ ಮಾಡಲಿಲ್ಲ. ಕೇಳಿದರೆ ಕುಮಾರಸ್ವಾಮಿ ಬೇಡ ಅಂದ್ರು ಅಂತಾರೆ. ಕುಮಾರಸ್ವಾಮಿನ ಕೇಳಿದರೆ ಸಿದ್ದರಾಮಯ್ಯ ನನ್ನನ್ನು ಕೇಳಿಯೇ ಇಲ್ಲ ಅಂತಾರೆ. ಕಾಂಗ್ರೆಸ್​ಗೆ ವರದಿ ಮೇಲೆ ನಂಬಿಕೆ ಇದ್ದಿದ್ದರೆ ಅನ್ಯಾಯ ಮಾಡುತ್ತಿರಲಿಲ್ಲ ಎಂದು ಈಶ್ವರಪ್ಪ ಹೇಳಿದರು.

ಅಧಿಕಾರಕ್ಕಾಗಿ ಜಾತಿಗಳ ಹೆಸರು ಬಳಸುತ್ತಿದ್ದಾರೆ. ಆದರೆ ಸೋಲಿನ ಭೀತಿಯಿಂದ ವರದಿ ಬಿಡುಗಡೆ ಮಾಡಲಿಲ್ಲ. ಈಗ ಬಿಜೆಪಿ ದಲಿತ ವಿರೋಧಿ ಎನ್ನುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಯಾರು ಜಾತಿ ಗಣತಿ ಬಗ್ಗೆ ಮಾತನಾಡಬಾರದು ಎಂದು ಹೇಳಿದ್ದಾರೆ. ನಾವು ಹಿಂದೂ ವಾದಿಗಳು, ಆದರೆ ಯಾವ ಜಾತಿಗೂ ಅನ್ಯಾಯ ಮಾಡಲ್ಲ. 180 ಕೋಟಿ ವೆಚ್ಚ ಮಾಡಿದ್ದಾರೆ. ಆದರೆ ಈವರೆಗೂ ವರದಿ ಸಿದ್ಧವಾಗಿಲ್ಲ. ಅದಕ್ಕೆ ಸಿದ್ದರಾಮಯ್ಯ ಕಾರಣ. ವರದಿಯನ್ನು ಸಿದ್ದರಾಮಯ್ಯ ಸಾಯಿಸಿದ್ದಾರೆ, ಡಿ.ಕೆ.ಶಿವಕುಮಾರ್ ಹೂತಾಕಿದ್ದಾರೆ ಎಂದರು.

ಇದನ್ನೂ ಓದಿ

Gujarat Politics: ಗುಜರಾತ್​ ಮುಂದಿನ ಸಿಎಂ ಆಯ್ಕೆಗೆ ಶಾಸಕಾಂಗ ಪಕ್ಷದ ಸಭೆ; ಹೆಚ್ಚಿದ ಕುತೂಹಲ

Viral Photo: ಮಳೆಯಲ್ಲಿ ಛತ್ರಿ ಹಿಡಿದು ಗಿಡಕ್ಕೆ ನೀರು, ಕೆಳಗೆ ಮಾರ್ಬಲ್​ ಕಲ್ಲು; ವಿಪರೀತ ಟ್ರೋಲ್​ ಆದ ಮಧ್ಯಪ್ರದೇಶ ಸಿಎಂ

(KS Eshwarappa said that we Hindus are not doing injustice to any caste in bellary)

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ