AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡುತಿನಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಗೂಂಡಾವರ್ತನೆ;ಮೂಲಭೂತ ಸೌಕರ್ಯ ಕೇಳಿದಕ್ಕೆ ವ್ಯಕ್ತಿ ಮೇಲೆ ಹಲ್ಲೆ

ಸರ್ಕಾರಿ ಕೆಲಸ ಅಂದ್ರೆ‌ ದೇವರ ಕೆಲಸ ಅಂತಾರೇ, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕಾದ ಅಧಿಕಾರಿಯೇ ಜನರ ಮೇಲೆ ದರ್ಪ ಮಾಡಿದ್ರೆ ಹೇಗೆ?, ಇಲ್ಲೊಬ್ಬ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಮೂಲಸೌಲಭ್ಯ ಕೇಳಿದಕ್ಕೆ ಅವಾಚ್ಯ ಪದಗಳನ್ನ ಬಳಸುವುದಲ್ಲದೇ ವ್ಯಕ್ತಿ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ.

ಕುಡುತಿನಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಗೂಂಡಾವರ್ತನೆ;ಮೂಲಭೂತ ಸೌಕರ್ಯ ಕೇಳಿದಕ್ಕೆ ವ್ಯಕ್ತಿ ಮೇಲೆ ಹಲ್ಲೆ
ಕುಡುತಿನಿ ಪಟ್ಟಣ ಪಂಚಾಯತಿ ಅಧಿಕಾರಿ ದರ್ಪ
ವಿನಾಯಕ ಬಡಿಗೇರ್​
| Edited By: |

Updated on:Nov 21, 2023 | 7:54 PM

Share

ಬಳ್ಳಾರಿ, ನ.21: ಜಿಲ್ಲೆಯ ಬಳ್ಳಾರಿ(Ballari) ತಾಲೂಕಿನ ಕುಡುತಿನಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ತೀರ್ಥಪ್ರಸಾದ್​, ಜನರ ಸೇವೆ ಮಾಡಬೇಕಾದ ಈ ಅಧಿಕಾರಿಯೇ ರೌಡಿ ಆಗಿ ಬಿಟ್ಟಿದಾನೆ. ‘ಸರ್ ನಮ್ಮನೆಗೆ ನೀರು ಬರುತ್ತಿಲ್ಲ ಎಂದು ಕೇಳಿದರೆ, ಇತ ದರ್ಪದ ಮಾತುಗಳನ್ನಾಡಿದ್ದಾನೆ. ಕುಡಿತಿನಿಯ ಮಂಜುನಾಥ ಎಂಬುವರ ಮೇಲೂ ಗೂಂಡಾ ವರ್ತನೆ ತೋರಿಸಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ. ಜೊತೆಗೆ ನಾನು ನಿಮ್ಮ ಕೆಲಸ ಮಾಡೋದಿಲ್ಲ ಎನ್ನುತ್ತಲೇ ಮಂಜುನಾಥ್​ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ ಮಂಜುನಾಥ್​ನ ಮುಖಕ್ಕೆ ತೀವ್ರ ಗಾಯವಾಗಿದೆ. ಬಳ್ಳಾರಿ ವಿಮ್ಸ್‌ನಲ್ಲಿ ಟ್ರೀಟ್ಮೇಂಟ್ ಪಡೆದುಕೊಂಡು ಮನೆಗೆ ಹೋಗಿದ್ದಾರೆ. ಈ ದರ್ಪ ಹಲ್ಲೆ ಮಾಡುವ ಅಧಿಕಾರಿಯನ್ನು ಕೂಡಲೇ ಸಸ್ಪೆಂಡ್ ಮಾಡುವಂತೆ ಮಂಜುನಾಥ್​ ಆಗ್ರಹಿಸಿದ್ದಾರೆ.

ಇನ್ನು ಈ ತೀರ್ಥ ಪ್ರಸಾದ್​ ಗೂಂಡಾಗಿರಿ ಇದೆ ಮೊದಲಲ್ಲ, ಜನರ ಕಷ್ಟದಲ್ಲಿ ತೀರ್ಥ ಹಾಗೂ ಪ್ರಸಾದಂತಿರಬೇಕಾದ ಈ ಅಧಿಕಾರಿ, ಕುಡಿತಿನಿ ಪಟ್ಟಣದಲ್ಲಿ ಇವನು ಆಡಿದ್ದೇ ಆಟ, ಮಾಡಿದ್ದೇ ರೂಲ್ಸ್ ಆಗಿದೆ. ಕಳೆದ ಅಕ್ಟೋಬರ್ 03 ರಂದು ಇದೆ ಊರಿನ ಗಿರೀಶ್ ಎಂಬ ವ್ಯಕ್ತಿ, ಮನೆ ಮುಂದಿನ ಕಸ ವಿಲೇವಾರಿ ಮಾಡಿ ಸರ್ ಎಂದು ಹೇಳಿದಕ್ಕೆ, ಆತನ ಮೇಲೂ ದರ್ಪ ತೋರಿ ಹಲ್ಲೆಗೆ ಯತ್ನಸಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ಮಹಾಶಯ ಅಧಿಕಾರಿಯ ಗೂಂಡಾಗಿರಿ ಕುಡುತಿನ ಜನರಿಗೆ ಬೇಸರ ತರಿಸಿದೆ.

ಇದನ್ನೂ ಓದಿ:ಟೋಲ್ ಶುಲ್ಕ ಕಟ್ಟದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಪಿ ಮೂರ್ತಿಯ ಗೂಂಡಾವರ್ತನೆ, ಟೋಲ್ ಗೇಟ್ ಮುರಿದು ಪರಾರಿ

ಇವನ ಆಟಾಟೋಪಕ್ಕೆ ಕಡಿವಾಣ ಹಾಕಬೇಕಾದ ಅಧಿಕಾರಿಗಳೇ ಮೌನ ವಹಿಸುತ್ತಿರುವುದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿದೆ. ಅಭಿವೃದ್ಧಿ ಮಾಡಿ ಎಂದು ಹೇಳಿದರೆ, ಸಾಕು ಕಚ್ಚೋ ಪ್ರಾಣಿಯಂತೆ ತೀರ್ಥ ಪ್ರಸಾದನ ವರ್ತನೆ ಇರುತ್ತದೆ. ಇತ್ತ ಕೂಡಲೇ ರೌಡಿ ಅಧಿಕಾರಿ ವರ್ತನೆಯಿಂದ ಕಛೇರಿಗೆ ಹೋಗೋಕೆ ಜನರು ಭಯ ಪಡಬೇಕಾಗಿದೆ. ಕೂಡಲೇ ಅಧಿಕಾರಿಯನ್ನು ಸೇವೆಯಿಂದ ವಜಾ ಮಾಡಿ ಶಿಕ್ಷೆ ನೀಡುವಂತೆ ಘಟನೆ ಪ್ರತ್ಯಕ್ಷದರ್ಶಿ ಯೋಗೇಶ್ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ. ಒಟ್ಟಿನಲ್ಲಿ ಪ್ರಜೆಗಳ ಯೋಗಕ್ಷೇಮ ಕಾಳಜಿ ತೋರ್ಬಾಕಾದ ಅಧಿಕಾರಿಗಳೇ ಹೀಗೆ ರಾಕ್ಷಸರಂತೆ ಸರ್ವಾಧಿಕಾರಿಗಳಾದ್ರೆ ಹೇಗೆ? ಇನ್ನಾದ್ರೂ ಮೇಲಾಧಿಕಾರಿಗಳು ಕುಡಿತಿನಿ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ತೀರ್ಥ ಪ್ರಸಾದ್ ಮೇಲೆ ಕ್ರಮ ವಹಿಸುತ್ತಾ ಕಾದು ನೋಡಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:54 pm, Tue, 21 November 23

Follow Us
Vinayak Badiger
Vinayak Badiger
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ