AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಪೇಟೆ: ಕಬ್ಬು ನುರಿಯುವ ಗಾಣಕ್ಕೆ ಸಿಲುಕಿ ಕಾರ್ಮಿಕ ಛಿದ್ರ ಛಿದ್ರ

ಉತ್ತರ ಪ್ರದೇಶ ಮೂಲದ ಸುಶೀಲ್( 40) ಮೃತ ಕಾರ್ಮಿಕ. ನಾಗನಗೌಡ ಎನ್ನುವವರ ಗಾಣವನ್ನು ಗುತ್ತಿಗೆ ಪಡೆದು ಕಾರ್ಮಿಕ ಸುಶೀಲ್ ಕೆಲಸ ಮಾಡುತ್ತಿದ್ದ. ಹೊಸಪೇಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಸಪೇಟೆ: ಕಬ್ಬು ನುರಿಯುವ ಗಾಣಕ್ಕೆ ಸಿಲುಕಿ ಕಾರ್ಮಿಕ ಛಿದ್ರ ಛಿದ್ರ
ವಿಜಯನಗರ: ಕಬ್ಬು ನುರಿಯುವ ಗಾಣಕ್ಕೆ ಸಿಲುಕಿ ಕಾರ್ಮಿಕ ಸಾವು
TV9 Web
| Edited By: |

Updated on:Mar 25, 2022 | 6:28 PM

Share

ವಿಜಯನಗರ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ‌ ಕಬ್ಬು ನುರಿಯುವ ಗಾಣಕ್ಕೆ (sugarcane juice extracting machine) ಸಿಲುಕಿ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ (alemane in nagenahalli). ಕಬ್ಬು ನುರಿಯುವ ಯಂತ್ರಕ್ಕೆ ಗ್ರೀಸ್ ಹಚ್ಚುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಯಂತ್ರದಲ್ಲಿ ಸಿಲುಕಿದ ಕಾರ್ಮಿಕನ ರುಂಡ- ಮುಂಡ ಬೇರ್ಪಟ್ಟಿದೆ. ಉತ್ತರ ಪ್ರದೇಶ ಮೂಲದ ಸುಶೀಲ್( 40) ಮೃತ ಕಾರ್ಮಿಕ (labourer). ನಾಗನಗೌಡ ಎನ್ನುವವರ ಗಾಣವನ್ನು ಗುತ್ತಿಗೆ ಪಡೆದು ಕಾರ್ಮಿಕ ಸುಶೀಲ್ ಕೆಲಸ ಮಾಡುತ್ತಿದ್ದ. ಹೊಸಪೇಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಚ್ಛೇದನ ಕೋರಿದ್ದ ಹೆಂಡತಿಯನ್ನು ಜನಜಂಗುಳಿಯ ಮಧ್ಯೆಯೇ ಹತ್ಯೆ ಮಾಡಿದ ಪತಿ ಮಂಜೂರ್ ಬೆಳಗಾವಿ: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಪತ್ನಿಯನ್ನು ಪತಿಯೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಕೋಟೆ ಕೆರೆ ಬಳಿ ನಡೆದಿದೆ. ಹೀನಾ ಕೌಸರ್(24) ಕೊಲೆಯಾದ ದುರ್ದೈವಿ. 4 ವರ್ಷಗಳ ಹಿಂದೆ ಮಂಜೂರ್ (34) ಜೊತೆ ಹೀನಾ ಕೌಸರ್ ವಿವಾಹವಾಗಿದ್ದರು. ಆದರೆ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ 8 ತಿಂಗಳ ಹಿಂದೆ ವಿಚ್ಛೇದನ ಕೋರಿ ಹೀನಾ ಕೌಸರ್ ಅರ್ಜಿ ಸಲ್ಲಿಸಿದ್ದರು. ಆದರೆ ವಿಚ್ಛೇದನ ನೀಡದಂತೆ ಮಂಜೂರ್ ಇಲಾಹಿ ಕೇಳಿಕೊಂಡಿದ್ದ. ಇದಕ್ಕೆ ಒಪ್ಪದಿದ್ದಕ್ಕೆ ಜನನಿಬಿಡ ಪ್ರದೇಶದಲ್ಲೇ ಹೆಂಡತಿಯನ್ನು ಹತ್ಯೆ ಮಾಡಿದ್ದಾನೆ.

ಕೋರ್ಟ್‌ನಿಂದ ವಾಪಸಾಗುತ್ತಿದ್ದಾಗ ಮಾರಕಾಸ್ತ್ರಗಳಿಂದ ಹೀನಾ ಕೌಸರ್ ಮೇಲೆ ಪತಿ ಮಂಜೂರ್ ಇಲಾಹಿ ಹಲ್ಲೆ ಮಾಡಿದ್ದಾನೆ. ಗಾಯಗೊಂಡ ಕೌಸರ್ ಬಿಮ್ಸ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಸೇರಿ ಪೊಲೀಸರ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಸದ್ಯ ಆರೋಪಿ ಪತಿ ಮಂಜೂರ್ ಇಲಾಹಿಯನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಕೆಲಸದಿಂದ ತೆಗೆದು ಹಾಕಿದ ಕೋಪಕ್ಕೆ ಹೆಚ್​ಆರ್​ ಕೊಲೆಗೆ ಯತ್ನ ಕೆಲಸದಿಂದ ತೆಗೆದುಹಾಕಿದ ಕೋಪಕ್ಕೆ ಹೆಚ್‌ಆರ್ ಕೊಲೆಗೆ ಮುಂದಾಗಿದ್ದ ಆರೋಪಿ ಹಾಗೂ ಆತನ ಗ್ಯಾಂಗ್​ನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಧು, ಅಲೆಗ್ಸಾಂಡರ್, ಚಿನ್ನರಾಜು, ಇಮ್ರಾನ್ ಪಾಷಾ ಬಂಧಿತ ಆರೋಪಿಗಳು. ಇದೇ ತಿಂಗಳು ಎಂಟನೆ ತಾರೀಖು ರಾಜಶೇಖರ್​ನ್ನ ಕೊಲೆ ಮಾಡಲು ಯತ್ನಿಸಿದ್ದ ಆರೋಪಿಗಳು, ಸಾಸ್ ಮೋಸ್ ಹೆಚ್. ಇ. ಟಿ ಟೆಕ್ನಾಲಜೀಸ್ ಎಂಬ ರಕ್ಷಣಾ ಸಾಮಾಗ್ರಿ ತಯಾರಿಕಾ ಕಂಪನಿಯಲ್ಲಿ ರಾಜಶೇಖರ್ ಎಚ್​.ಆರ್​ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅದೇ ಕಂಪನಿಯ ವೈಟ್ ಫೀಲ್ಡ್ ವಿಭಾಗದಲ್ಲಿ ಮಧು ಕೆಲಸ ಮಾಡುತ್ತಿದ್ದ. ಆದರೆ ಕಂಪನಿಯ ನಿಯಮಗಳ ಉಲ್ಲಂಘನೆ ಮಾಡಿದ್ದಕ್ಕೆ ಮಧುನನ್ನ ಕೆಲಸದಿಂದ ತೆಗೆದು ಹಾಕಲಾಗಿತ್ತು. ಇದೇ ಕಾರಣಕ್ಕೆ ಸ್ನೇಹಿತರೊಟ್ಟಿಗೆ ಸೇರಿ ರಾಜಶೇಖರ್ ಕೊಲೆ ಮಾಡಲು ಯತ್ನಿಸಲಾಗಿದೆ.

ಕಾರು ಅಡ್ಡಗಟ್ಟಿ ಕೊಲೆ ಮಾಡಲು ಆರೋಪಿಗಳು ಯತ್ನಿಸಿದ್ದು, ಆದರೆ ಚಾಲಕನ ಜಾಗೃತೆಯಿಂದ ತಪ್ಪಿಸಿಕೊಂಡು ರಾಜಶೇಖರ್ ನೇರವಾಗಿ ಬಾಗಲೂರು ಠಾಣೆ ತಲುಪಿದ್ದಾರೆ. ನಂತರ ರಾಜಶೇಖರ್ ಮನೆ ಬಳಿಯು ಆರೋಪಿಗಳು ಕಾಯುತಿದ್ದು, ಆದರೆ ಅಷ್ಟರಲ್ಲಿ ರಾಜಶೇಖರ್ ಪೊಲೀಸರಿಗೆ ದೂರು ನೀಡಿದ್ದಾರೆ.

Published On - 6:13 pm, Fri, 25 March 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ