AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಬಳಿ ಚಿರತೆ ದಾಳಿಗೆ 13 ಕುರಿಗಳು ಬಲಿ; ಚಿರತೆ ಸೆರೆಗೆ ಗ್ರಾಮಸ್ಥರ ಆಗ್ರಹ

ಬಳ್ಳಾರಿ ತಾಲೂಕಿನ ಸಂಜೀವರಾಯನಕೋಟೆ ಗ್ರಾಮದಲ್ಲಿ ಚಿರತೆ ದಾಳಿಗೆ 13 ಕುರಿಗಳು ಬಲಿಯಾಗಿವೆ. ಸದ್ಯ ಚಿರತೆ ಸೆರೆ ಹಿಡಿಯುವಂತೆ ಸಂಜೀವರಾಯನಕೋಟೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಬಳ್ಳಾರಿ ಬಳಿ ಚಿರತೆ ದಾಳಿಗೆ 13 ಕುರಿಗಳು ಬಲಿ; ಚಿರತೆ ಸೆರೆಗೆ ಗ್ರಾಮಸ್ಥರ ಆಗ್ರಹ
Leopard Attack
TV9 Web
| Updated By: ಆಯೇಷಾ ಬಾನು|

Updated on:Feb 22, 2023 | 1:02 PM

Share

ಬಳ್ಳಾರಿ: ಮೈಸೂರು, ಬೆಂಗಳೂರು ಆದ್ಮೇಲೆ ಇದೀಗ ಬಳ್ಳಾರಿಯಲ್ಲೂ ಚಿರತೆ ಕಾಟ ಹೆಚ್ಚಾಗಿದೆ. ಬಳ್ಳಾರಿ ತಾಲೂಕಿನ ಸಂಜೀವರಾಯನಕೋಟೆ ಗ್ರಾಮದಲ್ಲಿ ಚಿರತೆ ದಾಳಿಗೆ 13 ಕುರಿಗಳು ಬಲಿಯಾಗಿವೆ. ನಿನ್ನೆ(ಫೆ.21) ರಾತ್ರಿ ಮಾರುತಿ ಎಂಬುವರಿಗೆ ಸೇರಿದ ಕುರಿ‌ಗಳ ಮೇಲೆ ಚಿರತೆ ದಾಳಿ ನಡೆಸಿದೆ. ಸದ್ಯ ಚಿರತೆ ಸೆರೆ ಹಿಡಿಯುವಂತೆ ಸಂಜೀವರಾಯನಕೋಟೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಯಲಹಂಕ ವ್ಯಾಪ್ತಿಯ ದಾಸನಪುರದಲ್ಲಿ ಚಿರತೆ ದಾಳಿಗೆ ಕರು ಬಲಿ

ಬೆಂಗಳೂರು: ನಗರದಲ್ಲಿ ಕಳೆದು ನಾಲ್ಕೈದು ತಿಂಗಳಿಂದ ನಗರದ ಒಂದಲ್ಲ, ಒಂದು ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗುತ್ತಿದೆ. ಜ್ಞಾನಭಾರತಿ, ಯಶವಂತಪುರ, ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸಿದೆ. ಇದೀಗ, ಮತ್ತೆ ಯಲಹಂಕ ವಿಧಾನಸಭಾ ಕ್ಷೇತ್ರದ ದಾಸನಪುರ ಪಂಚಾಯಿತಿ ವ್ಯಾಪ್ತಿಯಲ್ಲಿ ಚಿರತೆ (Leopard), ಕರು ಒಂದನ್ನು ತಿಂದಿರುವ ಘಟನೆ ಭಾನುವಾರ (ಫೆ.19)ರ ರಾತ್ರಿ ನಡೆದಿದೆ. ಐದು ದಿನಗಳ ಹಿಂದಷ್ಟೇ ಇದೇ ಊರಿನ ಪಕ್ಕದ ರಾಮಾಂಜನೇಯ ಲೇಔಟ್​ನಲ್ಲಿ ಎರಡು ಚಿರತೆಗಳು ಕಾಣಿಸಿಕೊಂಡಿದ್ದವು. ಇದಾದ ನಂತರ ಈಗ ಚಿರತೆ ಕರು ಒಂದನ್ನು ಅರ್ಧ ತಿಂದಿದೆ. ಇದು ಸ್ಥಳೀಯರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದ್ದು, ಹೊರಗಡೆ ಓಡಾಡಲು ಭಯ ಪಡುತ್ತಿದ್ದಾರೆ. ಸದ್ಯ ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಇಟ್ಟಿದ್ದು, ಬೋನ್ ಒಳಗೆ ಮೇಕೆ ಮರಿ ಇಟ್ಟು ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ: ಮಂಡ್ಯ: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ; ಖಾಸಗಿ ಆಸ್ಪತ್ರೆಗೆ ದಾಖಲು

ನಾಯಿ ಕೊಂದ ಚಿರತೆ, ಆಚೆ ಹೆಜ್ಜೆ ಇಡಲೂ ಜನರಿಗೆ ಆತಂಕ

ಕಲೆ ದಿನಗಳ ಹಿಂದೆ ಚಿರತೆ ಹನುಮಂತಪ್ಪ ಅನ್ನೋರ ಜಮೀನಿನ ಬಳಿ ನಾಯಿ ತಿಂದು ಕೆಲ ದೇಹದ ಭಾಗವನ್ನು ಬಿಟ್ಟುಹೋಗಿರುವ ಘಟನೆ ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಗೊಂಗಡಿಪುರದಲ್ಲಿ ನಡೆದಿದೆ. ನಾಯಿ ಸತ್ತಿರುವ ಜಾಗದಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿತ್ತು. ಚಿರತೆ ಜೊತೆ ಎರಡು ಮರಿಗಳನ್ನೂ ಸ್ಥಳೀಯರು ನೋಡಿದ್ದು, ಆತಂಕಕ್ಕೆ ತುತ್ತಾಗಿದ್ದರು. ಇದರಿಂದ ಸಂಜೆ ಜನರು ಮನೆಯಿಂದ ಹೊರ ಬರಲು ಭಯ ಪಡುತ್ತಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:57 pm, Wed, 22 February 23

ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್