AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಬಳಿ ಚಿರತೆ ದಾಳಿಗೆ 13 ಕುರಿಗಳು ಬಲಿ; ಚಿರತೆ ಸೆರೆಗೆ ಗ್ರಾಮಸ್ಥರ ಆಗ್ರಹ

ಬಳ್ಳಾರಿ ತಾಲೂಕಿನ ಸಂಜೀವರಾಯನಕೋಟೆ ಗ್ರಾಮದಲ್ಲಿ ಚಿರತೆ ದಾಳಿಗೆ 13 ಕುರಿಗಳು ಬಲಿಯಾಗಿವೆ. ಸದ್ಯ ಚಿರತೆ ಸೆರೆ ಹಿಡಿಯುವಂತೆ ಸಂಜೀವರಾಯನಕೋಟೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಬಳ್ಳಾರಿ ಬಳಿ ಚಿರತೆ ದಾಳಿಗೆ 13 ಕುರಿಗಳು ಬಲಿ; ಚಿರತೆ ಸೆರೆಗೆ ಗ್ರಾಮಸ್ಥರ ಆಗ್ರಹ
Leopard Attack
TV9 Web
| Edited By: ಆಯೇಷಾ ಬಾನು|

Updated on:Feb 22, 2023 | 1:02 PM

Share

ಬಳ್ಳಾರಿ: ಮೈಸೂರು, ಬೆಂಗಳೂರು ಆದ್ಮೇಲೆ ಇದೀಗ ಬಳ್ಳಾರಿಯಲ್ಲೂ ಚಿರತೆ ಕಾಟ ಹೆಚ್ಚಾಗಿದೆ. ಬಳ್ಳಾರಿ ತಾಲೂಕಿನ ಸಂಜೀವರಾಯನಕೋಟೆ ಗ್ರಾಮದಲ್ಲಿ ಚಿರತೆ ದಾಳಿಗೆ 13 ಕುರಿಗಳು ಬಲಿಯಾಗಿವೆ. ನಿನ್ನೆ(ಫೆ.21) ರಾತ್ರಿ ಮಾರುತಿ ಎಂಬುವರಿಗೆ ಸೇರಿದ ಕುರಿ‌ಗಳ ಮೇಲೆ ಚಿರತೆ ದಾಳಿ ನಡೆಸಿದೆ. ಸದ್ಯ ಚಿರತೆ ಸೆರೆ ಹಿಡಿಯುವಂತೆ ಸಂಜೀವರಾಯನಕೋಟೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಯಲಹಂಕ ವ್ಯಾಪ್ತಿಯ ದಾಸನಪುರದಲ್ಲಿ ಚಿರತೆ ದಾಳಿಗೆ ಕರು ಬಲಿ

ಬೆಂಗಳೂರು: ನಗರದಲ್ಲಿ ಕಳೆದು ನಾಲ್ಕೈದು ತಿಂಗಳಿಂದ ನಗರದ ಒಂದಲ್ಲ, ಒಂದು ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗುತ್ತಿದೆ. ಜ್ಞಾನಭಾರತಿ, ಯಶವಂತಪುರ, ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸಿದೆ. ಇದೀಗ, ಮತ್ತೆ ಯಲಹಂಕ ವಿಧಾನಸಭಾ ಕ್ಷೇತ್ರದ ದಾಸನಪುರ ಪಂಚಾಯಿತಿ ವ್ಯಾಪ್ತಿಯಲ್ಲಿ ಚಿರತೆ (Leopard), ಕರು ಒಂದನ್ನು ತಿಂದಿರುವ ಘಟನೆ ಭಾನುವಾರ (ಫೆ.19)ರ ರಾತ್ರಿ ನಡೆದಿದೆ. ಐದು ದಿನಗಳ ಹಿಂದಷ್ಟೇ ಇದೇ ಊರಿನ ಪಕ್ಕದ ರಾಮಾಂಜನೇಯ ಲೇಔಟ್​ನಲ್ಲಿ ಎರಡು ಚಿರತೆಗಳು ಕಾಣಿಸಿಕೊಂಡಿದ್ದವು. ಇದಾದ ನಂತರ ಈಗ ಚಿರತೆ ಕರು ಒಂದನ್ನು ಅರ್ಧ ತಿಂದಿದೆ. ಇದು ಸ್ಥಳೀಯರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದ್ದು, ಹೊರಗಡೆ ಓಡಾಡಲು ಭಯ ಪಡುತ್ತಿದ್ದಾರೆ. ಸದ್ಯ ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಇಟ್ಟಿದ್ದು, ಬೋನ್ ಒಳಗೆ ಮೇಕೆ ಮರಿ ಇಟ್ಟು ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ: ಮಂಡ್ಯ: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ; ಖಾಸಗಿ ಆಸ್ಪತ್ರೆಗೆ ದಾಖಲು

ನಾಯಿ ಕೊಂದ ಚಿರತೆ, ಆಚೆ ಹೆಜ್ಜೆ ಇಡಲೂ ಜನರಿಗೆ ಆತಂಕ

ಕಲೆ ದಿನಗಳ ಹಿಂದೆ ಚಿರತೆ ಹನುಮಂತಪ್ಪ ಅನ್ನೋರ ಜಮೀನಿನ ಬಳಿ ನಾಯಿ ತಿಂದು ಕೆಲ ದೇಹದ ಭಾಗವನ್ನು ಬಿಟ್ಟುಹೋಗಿರುವ ಘಟನೆ ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಗೊಂಗಡಿಪುರದಲ್ಲಿ ನಡೆದಿದೆ. ನಾಯಿ ಸತ್ತಿರುವ ಜಾಗದಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿತ್ತು. ಚಿರತೆ ಜೊತೆ ಎರಡು ಮರಿಗಳನ್ನೂ ಸ್ಥಳೀಯರು ನೋಡಿದ್ದು, ಆತಂಕಕ್ಕೆ ತುತ್ತಾಗಿದ್ದರು. ಇದರಿಂದ ಸಂಜೆ ಜನರು ಮನೆಯಿಂದ ಹೊರ ಬರಲು ಭಯ ಪಡುತ್ತಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:57 pm, Wed, 22 February 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು