ಬಳ್ಳಾರಿ ಬಳಿ ಚಿರತೆ ದಾಳಿಗೆ 13 ಕುರಿಗಳು ಬಲಿ; ಚಿರತೆ ಸೆರೆಗೆ ಗ್ರಾಮಸ್ಥರ ಆಗ್ರಹ

ಬಳ್ಳಾರಿ ತಾಲೂಕಿನ ಸಂಜೀವರಾಯನಕೋಟೆ ಗ್ರಾಮದಲ್ಲಿ ಚಿರತೆ ದಾಳಿಗೆ 13 ಕುರಿಗಳು ಬಲಿಯಾಗಿವೆ. ಸದ್ಯ ಚಿರತೆ ಸೆರೆ ಹಿಡಿಯುವಂತೆ ಸಂಜೀವರಾಯನಕೋಟೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಬಳ್ಳಾರಿ ಬಳಿ ಚಿರತೆ ದಾಳಿಗೆ 13 ಕುರಿಗಳು ಬಲಿ; ಚಿರತೆ ಸೆರೆಗೆ ಗ್ರಾಮಸ್ಥರ ಆಗ್ರಹ
Leopard Attack
Follow us
| Updated By: ಆಯೇಷಾ ಬಾನು

Updated on:Feb 22, 2023 | 1:02 PM

ಬಳ್ಳಾರಿ: ಮೈಸೂರು, ಬೆಂಗಳೂರು ಆದ್ಮೇಲೆ ಇದೀಗ ಬಳ್ಳಾರಿಯಲ್ಲೂ ಚಿರತೆ ಕಾಟ ಹೆಚ್ಚಾಗಿದೆ. ಬಳ್ಳಾರಿ ತಾಲೂಕಿನ ಸಂಜೀವರಾಯನಕೋಟೆ ಗ್ರಾಮದಲ್ಲಿ ಚಿರತೆ ದಾಳಿಗೆ 13 ಕುರಿಗಳು ಬಲಿಯಾಗಿವೆ. ನಿನ್ನೆ(ಫೆ.21) ರಾತ್ರಿ ಮಾರುತಿ ಎಂಬುವರಿಗೆ ಸೇರಿದ ಕುರಿ‌ಗಳ ಮೇಲೆ ಚಿರತೆ ದಾಳಿ ನಡೆಸಿದೆ. ಸದ್ಯ ಚಿರತೆ ಸೆರೆ ಹಿಡಿಯುವಂತೆ ಸಂಜೀವರಾಯನಕೋಟೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಯಲಹಂಕ ವ್ಯಾಪ್ತಿಯ ದಾಸನಪುರದಲ್ಲಿ ಚಿರತೆ ದಾಳಿಗೆ ಕರು ಬಲಿ

ಬೆಂಗಳೂರು: ನಗರದಲ್ಲಿ ಕಳೆದು ನಾಲ್ಕೈದು ತಿಂಗಳಿಂದ ನಗರದ ಒಂದಲ್ಲ, ಒಂದು ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗುತ್ತಿದೆ. ಜ್ಞಾನಭಾರತಿ, ಯಶವಂತಪುರ, ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸಿದೆ. ಇದೀಗ, ಮತ್ತೆ ಯಲಹಂಕ ವಿಧಾನಸಭಾ ಕ್ಷೇತ್ರದ ದಾಸನಪುರ ಪಂಚಾಯಿತಿ ವ್ಯಾಪ್ತಿಯಲ್ಲಿ ಚಿರತೆ (Leopard), ಕರು ಒಂದನ್ನು ತಿಂದಿರುವ ಘಟನೆ ಭಾನುವಾರ (ಫೆ.19)ರ ರಾತ್ರಿ ನಡೆದಿದೆ. ಐದು ದಿನಗಳ ಹಿಂದಷ್ಟೇ ಇದೇ ಊರಿನ ಪಕ್ಕದ ರಾಮಾಂಜನೇಯ ಲೇಔಟ್​ನಲ್ಲಿ ಎರಡು ಚಿರತೆಗಳು ಕಾಣಿಸಿಕೊಂಡಿದ್ದವು. ಇದಾದ ನಂತರ ಈಗ ಚಿರತೆ ಕರು ಒಂದನ್ನು ಅರ್ಧ ತಿಂದಿದೆ. ಇದು ಸ್ಥಳೀಯರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದ್ದು, ಹೊರಗಡೆ ಓಡಾಡಲು ಭಯ ಪಡುತ್ತಿದ್ದಾರೆ. ಸದ್ಯ ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಇಟ್ಟಿದ್ದು, ಬೋನ್ ಒಳಗೆ ಮೇಕೆ ಮರಿ ಇಟ್ಟು ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ: ಮಂಡ್ಯ: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ; ಖಾಸಗಿ ಆಸ್ಪತ್ರೆಗೆ ದಾಖಲು

ನಾಯಿ ಕೊಂದ ಚಿರತೆ, ಆಚೆ ಹೆಜ್ಜೆ ಇಡಲೂ ಜನರಿಗೆ ಆತಂಕ

ಕಲೆ ದಿನಗಳ ಹಿಂದೆ ಚಿರತೆ ಹನುಮಂತಪ್ಪ ಅನ್ನೋರ ಜಮೀನಿನ ಬಳಿ ನಾಯಿ ತಿಂದು ಕೆಲ ದೇಹದ ಭಾಗವನ್ನು ಬಿಟ್ಟುಹೋಗಿರುವ ಘಟನೆ ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಗೊಂಗಡಿಪುರದಲ್ಲಿ ನಡೆದಿದೆ. ನಾಯಿ ಸತ್ತಿರುವ ಜಾಗದಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿತ್ತು. ಚಿರತೆ ಜೊತೆ ಎರಡು ಮರಿಗಳನ್ನೂ ಸ್ಥಳೀಯರು ನೋಡಿದ್ದು, ಆತಂಕಕ್ಕೆ ತುತ್ತಾಗಿದ್ದರು. ಇದರಿಂದ ಸಂಜೆ ಜನರು ಮನೆಯಿಂದ ಹೊರ ಬರಲು ಭಯ ಪಡುತ್ತಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:57 pm, Wed, 22 February 23

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!