Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿ ಹಳ್ಳಿ -ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ಬಳ್ಳಾರಿಯಲ್ಲಿಯೂ ಅಶಾಂತಿ ಸೃಷ್ಟಿಸುವ ವಿಫಲ ಯತ್ನ ನಡೆದಿತ್ತು- NIA

ನವೆಂಬರ್ 22 ರ ಸಂಜೆ ಅನ್ಯಕೋಮಿನ ಯುವಕರ ದಂಡು ಕಟ್ಟಿಕೊಂಡು ಹೋಗಿ ಠಾಣೆಗೆ ಮುತ್ತಿಗೆ ಹಾಕಲು ಶಂಕಿತ ಐಸಿಸ್ ಉಗ್ರ ಸೈಯದ್ ಯತ್ನಿಸಿದ್ದ. ಬಳ್ಳಾರಿಯಲ್ಲಿ ಸಾವಿರಾರು ಜನ್ರನ್ನ ಸೇರಿಸಿ ಪೊಲೀಸ್​ ಠಾಣೆಗೆ ಮುತ್ತಿಗೆ ಹಾಕಿಸಿ ಭಯದ ವಾತಾವರಣ ಸೃಷ್ಟಿ ಮಾಡಿದ್ದ.

ಕೆಜಿ ಹಳ್ಳಿ -ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ಬಳ್ಳಾರಿಯಲ್ಲಿಯೂ ಅಶಾಂತಿ ಸೃಷ್ಟಿಸುವ ವಿಫಲ ಯತ್ನ ನಡೆದಿತ್ತು- NIA
ಬಳ್ಳಾರಿ: ಶಂಕಿತ ಐಸಿಸ್ ಉಗ್ರನಿಂದ ಕಾಲೇಜು ಯುವಕರನ್ನ ಸೆಳೆಯುವ ಯತ್ನ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಸಾಧು ಶ್ರೀನಾಥ್​

Updated on:Dec 20, 2023 | 12:44 PM

ಬಳ್ಳಾರಿ, ಡಿಸೆಂಬರ್​ 20: ಬಳ್ಳಾರಿಯಲ್ಲಿ ಶಂಕಿತ ಐಸಿಸ್ (ISIS) ಉಗ್ರನಿಂದ ಕಾಲೇಜು ಯುವಕರನ್ನ ತನ್ನ ಸಂಘಟನೆಗೆ ಸೆಳೆದುಕೊಳ್ಳುವ ಯತ್ನಗಳು ನಡೆದಿದ್ದವು ಎಂದು ತಿಳಿದುಬಂದಿದೆ. ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ (KG Halli DJ Halli Violence) ಬಳ್ಳಾರಿಯ ಕೌಲ್ ಬಜಾರ್​ ಪೊಲೀಸ್​ ಠಾಣೆ ಎದುರೂ (Bellary) ದೊಡ್ಡ ಪ್ಲಾನ್ ನಡೆದಿತ್ತು. ಸ್ವಲ್ಪದರಲ್ಲೆ ಆ ಯತ್ನವನ್ನು ವಿಫಲಗೊಳಿಸಲಾಗಿತ್ತು. ಗಣಿನಾಡಿನಲ್ಲಿ ಶಂಕಿತ ಉಗ್ರರ ಇಂತಹ ಕರಾಳ ಕೃತ್ಯಗಳ ಬಗ್ಗೆ ತಿಳಿದು ಜನ ಈಗ ಆತಂಕಗೊಂಡಿದ್ದಾರೆ.

ನವೆಂಬರ್​ 22 ರಂದು ಬಳ್ಳಾರಿ ಖಾಸಗಿ ಕಾಲೇಜು ಒಂದರಲ್ಲಿ ಯುವಕರನ್ನ ಐಸಿಸ್‌ಗೆ ಸೆಳೆಯುವ ಯತ್ನ ನಡೆದಿತ್ತು. ಮೊಹಮ್ಮದ್ ಪೈಗಂಬರ್‌ಗೆ ಅಪಮಾನದ ನಡೆದಿದೆ ಎಂದು ನೆಪವಾಗಿಸಿಕೊಂಡು ಈ ಐಸಿಸ್ ಸೆಳೆತಕ್ಕೆ ಮೆಗಾ ಪ್ಲಾನ್ ನಡೆದಿತ್ತಾ ಎಂಬ ಅನುಮಾನ ಕಾಡುತ್ತಿದೆ. ರಾಷ್ಟ್ರೀಯ ತನಿಖಾ ದಳದಿಂದ (ಎನ್‌ಐಎ -NIA) ಬಂಧಿತನಾಗಿರುವ ಶಂಕಿತ ಉಗ್ರ ಸೈಯದ್‌ ಸಮೀರ್ ಪ್ಲಾನ್ ಸೂತ್ರಧಾರ ಎಂಬುದು ಬಯಲಾಗಿದೆ. ಬಳ್ಳಾರಿ ಮಾಡ್ಯೂಲ್ ಮಾಸ್ಟರ್ ಮೈಂಡ್ ಮಿನಾಸ್‌ನ ಸಹಚರ ಈ ಸೈಯದ್ (20).

ಅಂದಹಾಗೆ, ಸೈಯದ್ ಖಾಸಗಿ ಕಾಲೇಜ್‌ನಲ್ಲಿ ಬಿಸಿಎ ಸೆಕೆಂಡ್ ಇಯರ್ ಓದುತ್ತಿದ್ದ. ಎನ್.ಐ.ಎ ಪ್ರೆಸ್ ರಿಲೀಸ್​​ನಲ್ಲಿ ಸೈಯದ್ ನ ಈ ಕರಾಳ ಕೃತ್ಯವನ್ನು ಎಳೆ ಎಳೆಯಾಗಿ ಉಲ್ಲೇಖಿಸಲಾಗಿದೆ. ನವೆಂಬರ್​ 22 ರಂದು ತಾನು ಓದುವ ಕಾಲೇಜ್‌ನಲ್ಲಿ ಪೈಗಂಬರ್‌ಗೆ ಅಪಮಾನ ಮಾಡಲಾಗಿದೆ ಎಂದು ಸೈಯದ್ ಯುವಕರನ್ನು ಗುಂಪು ಕಟ್ಟಿದ್ದ. ಯುವಕ ಗುಂಪು ಕಟ್ಟಿ ಗಲಾಟೆಯನ್ನೂ ಮಾಡಿದ್ದ ಸೈಯದ್. ಬಳಿಕ ಬಳ್ಳಾರಿ ಜಿಲ್ಲಾ ಪೊಲೀಸ್​​ ಅಧೀಕ್ಷಕರ ಕಚೇರಿಗೆ ಬಂದು ದೂರು ನೀಡಿದ್ದ.

ಇದನ್ನೂ ಓದಿ: 4 ರಾಜ್ಯದ 19 ಸ್ಥಳಗಳಲ್ಲಿ ಎನ್​ಐಎ ದಾಳಿ: ಮುಖ್ಯಸ್ಥ ಸೇರಿದಂತೆ 8 ಜನರ ಬಂಧನ

ನವೆಂಬರ್ 22 ರ ಸಂಜೆ ಅನ್ಯಕೋಮಿನ ಯುವಕರ ದಂಡು ಕಟ್ಟಿಕೊಂಡು ಹೋಗಿ ಕೌಲ್ ಬಜಾರ್​ ಠಾಣೆಗೆ ಮುತ್ತಿಗೆ ಹಾಕಲು ಶಂಕಿತ ಐಸಿಸ್ ಉಗ್ರ ಸೈಯದ್ ಯತ್ನಿಸಿದ್ದ. ಸಾವಿರಾರು ಜನ್ರನ್ನ ಸೇರಿಸಿ ಠಾಣೆಗೆ ಮುತ್ತಿಗೆ ಹಾಕಿಸಿ ಭಯದ ವಾತಾವರಣ ಸೃಷ್ಟಿ ಮಾಡಿದ್ದ. ಮುಸ್ಲಿಂ ಸಮುದಾಯದ ಯುವಕರ ಮೈಂಡ್ ವಾಷ್​ ಮಾಡಿ ಗಲಭೆ ಎಬ್ಬಿಸಲು ಅಂದು ನಡೆದಿತ್ತು. ಅದು ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ದೊಡ್ಡ ಪ್ಲಾನ್ ಹಾಕಿಕೊಂಡಿದ್ದನಂತೆ. ಸ್ವಲ್ಪದರಲ್ಲೆ ಆ ಯತ್ನ ವಿಫಲವಾಗಿತ್ತು. ಇದೀಗ, ಗಣಿನಾಡಿನಲ್ಲಿ ಶಂಕಿತ ಉಗ್ರರ ಕರಾಳ ಕೃತ್ಯಗಳ ಬಗ್ಗೆ ಜನ ಆತಂಕಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:13 pm, Wed, 20 December 23

ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ