AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿ ಹಳ್ಳಿ -ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ಬಳ್ಳಾರಿಯಲ್ಲಿಯೂ ಅಶಾಂತಿ ಸೃಷ್ಟಿಸುವ ವಿಫಲ ಯತ್ನ ನಡೆದಿತ್ತು- NIA

ನವೆಂಬರ್ 22 ರ ಸಂಜೆ ಅನ್ಯಕೋಮಿನ ಯುವಕರ ದಂಡು ಕಟ್ಟಿಕೊಂಡು ಹೋಗಿ ಠಾಣೆಗೆ ಮುತ್ತಿಗೆ ಹಾಕಲು ಶಂಕಿತ ಐಸಿಸ್ ಉಗ್ರ ಸೈಯದ್ ಯತ್ನಿಸಿದ್ದ. ಬಳ್ಳಾರಿಯಲ್ಲಿ ಸಾವಿರಾರು ಜನ್ರನ್ನ ಸೇರಿಸಿ ಪೊಲೀಸ್​ ಠಾಣೆಗೆ ಮುತ್ತಿಗೆ ಹಾಕಿಸಿ ಭಯದ ವಾತಾವರಣ ಸೃಷ್ಟಿ ಮಾಡಿದ್ದ.

ಕೆಜಿ ಹಳ್ಳಿ -ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ಬಳ್ಳಾರಿಯಲ್ಲಿಯೂ ಅಶಾಂತಿ ಸೃಷ್ಟಿಸುವ ವಿಫಲ ಯತ್ನ ನಡೆದಿತ್ತು- NIA
ಬಳ್ಳಾರಿ: ಶಂಕಿತ ಐಸಿಸ್ ಉಗ್ರನಿಂದ ಕಾಲೇಜು ಯುವಕರನ್ನ ಸೆಳೆಯುವ ಯತ್ನ
ವಿನಾಯಕ ಬಡಿಗೇರ್​
| Edited By: |

Updated on:Dec 20, 2023 | 12:44 PM

Share

ಬಳ್ಳಾರಿ, ಡಿಸೆಂಬರ್​ 20: ಬಳ್ಳಾರಿಯಲ್ಲಿ ಶಂಕಿತ ಐಸಿಸ್ (ISIS) ಉಗ್ರನಿಂದ ಕಾಲೇಜು ಯುವಕರನ್ನ ತನ್ನ ಸಂಘಟನೆಗೆ ಸೆಳೆದುಕೊಳ್ಳುವ ಯತ್ನಗಳು ನಡೆದಿದ್ದವು ಎಂದು ತಿಳಿದುಬಂದಿದೆ. ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ (KG Halli DJ Halli Violence) ಬಳ್ಳಾರಿಯ ಕೌಲ್ ಬಜಾರ್​ ಪೊಲೀಸ್​ ಠಾಣೆ ಎದುರೂ (Bellary) ದೊಡ್ಡ ಪ್ಲಾನ್ ನಡೆದಿತ್ತು. ಸ್ವಲ್ಪದರಲ್ಲೆ ಆ ಯತ್ನವನ್ನು ವಿಫಲಗೊಳಿಸಲಾಗಿತ್ತು. ಗಣಿನಾಡಿನಲ್ಲಿ ಶಂಕಿತ ಉಗ್ರರ ಇಂತಹ ಕರಾಳ ಕೃತ್ಯಗಳ ಬಗ್ಗೆ ತಿಳಿದು ಜನ ಈಗ ಆತಂಕಗೊಂಡಿದ್ದಾರೆ.

ನವೆಂಬರ್​ 22 ರಂದು ಬಳ್ಳಾರಿ ಖಾಸಗಿ ಕಾಲೇಜು ಒಂದರಲ್ಲಿ ಯುವಕರನ್ನ ಐಸಿಸ್‌ಗೆ ಸೆಳೆಯುವ ಯತ್ನ ನಡೆದಿತ್ತು. ಮೊಹಮ್ಮದ್ ಪೈಗಂಬರ್‌ಗೆ ಅಪಮಾನದ ನಡೆದಿದೆ ಎಂದು ನೆಪವಾಗಿಸಿಕೊಂಡು ಈ ಐಸಿಸ್ ಸೆಳೆತಕ್ಕೆ ಮೆಗಾ ಪ್ಲಾನ್ ನಡೆದಿತ್ತಾ ಎಂಬ ಅನುಮಾನ ಕಾಡುತ್ತಿದೆ. ರಾಷ್ಟ್ರೀಯ ತನಿಖಾ ದಳದಿಂದ (ಎನ್‌ಐಎ -NIA) ಬಂಧಿತನಾಗಿರುವ ಶಂಕಿತ ಉಗ್ರ ಸೈಯದ್‌ ಸಮೀರ್ ಪ್ಲಾನ್ ಸೂತ್ರಧಾರ ಎಂಬುದು ಬಯಲಾಗಿದೆ. ಬಳ್ಳಾರಿ ಮಾಡ್ಯೂಲ್ ಮಾಸ್ಟರ್ ಮೈಂಡ್ ಮಿನಾಸ್‌ನ ಸಹಚರ ಈ ಸೈಯದ್ (20).

ಅಂದಹಾಗೆ, ಸೈಯದ್ ಖಾಸಗಿ ಕಾಲೇಜ್‌ನಲ್ಲಿ ಬಿಸಿಎ ಸೆಕೆಂಡ್ ಇಯರ್ ಓದುತ್ತಿದ್ದ. ಎನ್.ಐ.ಎ ಪ್ರೆಸ್ ರಿಲೀಸ್​​ನಲ್ಲಿ ಸೈಯದ್ ನ ಈ ಕರಾಳ ಕೃತ್ಯವನ್ನು ಎಳೆ ಎಳೆಯಾಗಿ ಉಲ್ಲೇಖಿಸಲಾಗಿದೆ. ನವೆಂಬರ್​ 22 ರಂದು ತಾನು ಓದುವ ಕಾಲೇಜ್‌ನಲ್ಲಿ ಪೈಗಂಬರ್‌ಗೆ ಅಪಮಾನ ಮಾಡಲಾಗಿದೆ ಎಂದು ಸೈಯದ್ ಯುವಕರನ್ನು ಗುಂಪು ಕಟ್ಟಿದ್ದ. ಯುವಕ ಗುಂಪು ಕಟ್ಟಿ ಗಲಾಟೆಯನ್ನೂ ಮಾಡಿದ್ದ ಸೈಯದ್. ಬಳಿಕ ಬಳ್ಳಾರಿ ಜಿಲ್ಲಾ ಪೊಲೀಸ್​​ ಅಧೀಕ್ಷಕರ ಕಚೇರಿಗೆ ಬಂದು ದೂರು ನೀಡಿದ್ದ.

ಇದನ್ನೂ ಓದಿ: 4 ರಾಜ್ಯದ 19 ಸ್ಥಳಗಳಲ್ಲಿ ಎನ್​ಐಎ ದಾಳಿ: ಮುಖ್ಯಸ್ಥ ಸೇರಿದಂತೆ 8 ಜನರ ಬಂಧನ

ನವೆಂಬರ್ 22 ರ ಸಂಜೆ ಅನ್ಯಕೋಮಿನ ಯುವಕರ ದಂಡು ಕಟ್ಟಿಕೊಂಡು ಹೋಗಿ ಕೌಲ್ ಬಜಾರ್​ ಠಾಣೆಗೆ ಮುತ್ತಿಗೆ ಹಾಕಲು ಶಂಕಿತ ಐಸಿಸ್ ಉಗ್ರ ಸೈಯದ್ ಯತ್ನಿಸಿದ್ದ. ಸಾವಿರಾರು ಜನ್ರನ್ನ ಸೇರಿಸಿ ಠಾಣೆಗೆ ಮುತ್ತಿಗೆ ಹಾಕಿಸಿ ಭಯದ ವಾತಾವರಣ ಸೃಷ್ಟಿ ಮಾಡಿದ್ದ. ಮುಸ್ಲಿಂ ಸಮುದಾಯದ ಯುವಕರ ಮೈಂಡ್ ವಾಷ್​ ಮಾಡಿ ಗಲಭೆ ಎಬ್ಬಿಸಲು ಅಂದು ನಡೆದಿತ್ತು. ಅದು ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ದೊಡ್ಡ ಪ್ಲಾನ್ ಹಾಕಿಕೊಂಡಿದ್ದನಂತೆ. ಸ್ವಲ್ಪದರಲ್ಲೆ ಆ ಯತ್ನ ವಿಫಲವಾಗಿತ್ತು. ಇದೀಗ, ಗಣಿನಾಡಿನಲ್ಲಿ ಶಂಕಿತ ಉಗ್ರರ ಕರಾಳ ಕೃತ್ಯಗಳ ಬಗ್ಗೆ ಜನ ಆತಂಕಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:13 pm, Wed, 20 December 23

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ