AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿ ಹಳ್ಳಿ -ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ಬಳ್ಳಾರಿಯಲ್ಲಿಯೂ ಅಶಾಂತಿ ಸೃಷ್ಟಿಸುವ ವಿಫಲ ಯತ್ನ ನಡೆದಿತ್ತು- NIA

ನವೆಂಬರ್ 22 ರ ಸಂಜೆ ಅನ್ಯಕೋಮಿನ ಯುವಕರ ದಂಡು ಕಟ್ಟಿಕೊಂಡು ಹೋಗಿ ಠಾಣೆಗೆ ಮುತ್ತಿಗೆ ಹಾಕಲು ಶಂಕಿತ ಐಸಿಸ್ ಉಗ್ರ ಸೈಯದ್ ಯತ್ನಿಸಿದ್ದ. ಬಳ್ಳಾರಿಯಲ್ಲಿ ಸಾವಿರಾರು ಜನ್ರನ್ನ ಸೇರಿಸಿ ಪೊಲೀಸ್​ ಠಾಣೆಗೆ ಮುತ್ತಿಗೆ ಹಾಕಿಸಿ ಭಯದ ವಾತಾವರಣ ಸೃಷ್ಟಿ ಮಾಡಿದ್ದ.

ಕೆಜಿ ಹಳ್ಳಿ -ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ಬಳ್ಳಾರಿಯಲ್ಲಿಯೂ ಅಶಾಂತಿ ಸೃಷ್ಟಿಸುವ ವಿಫಲ ಯತ್ನ ನಡೆದಿತ್ತು- NIA
ಬಳ್ಳಾರಿ: ಶಂಕಿತ ಐಸಿಸ್ ಉಗ್ರನಿಂದ ಕಾಲೇಜು ಯುವಕರನ್ನ ಸೆಳೆಯುವ ಯತ್ನ
ವಿನಾಯಕ ಬಡಿಗೇರ್​
| Edited By: ಸಾಧು ಶ್ರೀನಾಥ್​|

Updated on:Dec 20, 2023 | 12:44 PM

Share

ಬಳ್ಳಾರಿ, ಡಿಸೆಂಬರ್​ 20: ಬಳ್ಳಾರಿಯಲ್ಲಿ ಶಂಕಿತ ಐಸಿಸ್ (ISIS) ಉಗ್ರನಿಂದ ಕಾಲೇಜು ಯುವಕರನ್ನ ತನ್ನ ಸಂಘಟನೆಗೆ ಸೆಳೆದುಕೊಳ್ಳುವ ಯತ್ನಗಳು ನಡೆದಿದ್ದವು ಎಂದು ತಿಳಿದುಬಂದಿದೆ. ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ (KG Halli DJ Halli Violence) ಬಳ್ಳಾರಿಯ ಕೌಲ್ ಬಜಾರ್​ ಪೊಲೀಸ್​ ಠಾಣೆ ಎದುರೂ (Bellary) ದೊಡ್ಡ ಪ್ಲಾನ್ ನಡೆದಿತ್ತು. ಸ್ವಲ್ಪದರಲ್ಲೆ ಆ ಯತ್ನವನ್ನು ವಿಫಲಗೊಳಿಸಲಾಗಿತ್ತು. ಗಣಿನಾಡಿನಲ್ಲಿ ಶಂಕಿತ ಉಗ್ರರ ಇಂತಹ ಕರಾಳ ಕೃತ್ಯಗಳ ಬಗ್ಗೆ ತಿಳಿದು ಜನ ಈಗ ಆತಂಕಗೊಂಡಿದ್ದಾರೆ.

ನವೆಂಬರ್​ 22 ರಂದು ಬಳ್ಳಾರಿ ಖಾಸಗಿ ಕಾಲೇಜು ಒಂದರಲ್ಲಿ ಯುವಕರನ್ನ ಐಸಿಸ್‌ಗೆ ಸೆಳೆಯುವ ಯತ್ನ ನಡೆದಿತ್ತು. ಮೊಹಮ್ಮದ್ ಪೈಗಂಬರ್‌ಗೆ ಅಪಮಾನದ ನಡೆದಿದೆ ಎಂದು ನೆಪವಾಗಿಸಿಕೊಂಡು ಈ ಐಸಿಸ್ ಸೆಳೆತಕ್ಕೆ ಮೆಗಾ ಪ್ಲಾನ್ ನಡೆದಿತ್ತಾ ಎಂಬ ಅನುಮಾನ ಕಾಡುತ್ತಿದೆ. ರಾಷ್ಟ್ರೀಯ ತನಿಖಾ ದಳದಿಂದ (ಎನ್‌ಐಎ -NIA) ಬಂಧಿತನಾಗಿರುವ ಶಂಕಿತ ಉಗ್ರ ಸೈಯದ್‌ ಸಮೀರ್ ಪ್ಲಾನ್ ಸೂತ್ರಧಾರ ಎಂಬುದು ಬಯಲಾಗಿದೆ. ಬಳ್ಳಾರಿ ಮಾಡ್ಯೂಲ್ ಮಾಸ್ಟರ್ ಮೈಂಡ್ ಮಿನಾಸ್‌ನ ಸಹಚರ ಈ ಸೈಯದ್ (20).

ಅಂದಹಾಗೆ, ಸೈಯದ್ ಖಾಸಗಿ ಕಾಲೇಜ್‌ನಲ್ಲಿ ಬಿಸಿಎ ಸೆಕೆಂಡ್ ಇಯರ್ ಓದುತ್ತಿದ್ದ. ಎನ್.ಐ.ಎ ಪ್ರೆಸ್ ರಿಲೀಸ್​​ನಲ್ಲಿ ಸೈಯದ್ ನ ಈ ಕರಾಳ ಕೃತ್ಯವನ್ನು ಎಳೆ ಎಳೆಯಾಗಿ ಉಲ್ಲೇಖಿಸಲಾಗಿದೆ. ನವೆಂಬರ್​ 22 ರಂದು ತಾನು ಓದುವ ಕಾಲೇಜ್‌ನಲ್ಲಿ ಪೈಗಂಬರ್‌ಗೆ ಅಪಮಾನ ಮಾಡಲಾಗಿದೆ ಎಂದು ಸೈಯದ್ ಯುವಕರನ್ನು ಗುಂಪು ಕಟ್ಟಿದ್ದ. ಯುವಕ ಗುಂಪು ಕಟ್ಟಿ ಗಲಾಟೆಯನ್ನೂ ಮಾಡಿದ್ದ ಸೈಯದ್. ಬಳಿಕ ಬಳ್ಳಾರಿ ಜಿಲ್ಲಾ ಪೊಲೀಸ್​​ ಅಧೀಕ್ಷಕರ ಕಚೇರಿಗೆ ಬಂದು ದೂರು ನೀಡಿದ್ದ.

ಇದನ್ನೂ ಓದಿ: 4 ರಾಜ್ಯದ 19 ಸ್ಥಳಗಳಲ್ಲಿ ಎನ್​ಐಎ ದಾಳಿ: ಮುಖ್ಯಸ್ಥ ಸೇರಿದಂತೆ 8 ಜನರ ಬಂಧನ

ನವೆಂಬರ್ 22 ರ ಸಂಜೆ ಅನ್ಯಕೋಮಿನ ಯುವಕರ ದಂಡು ಕಟ್ಟಿಕೊಂಡು ಹೋಗಿ ಕೌಲ್ ಬಜಾರ್​ ಠಾಣೆಗೆ ಮುತ್ತಿಗೆ ಹಾಕಲು ಶಂಕಿತ ಐಸಿಸ್ ಉಗ್ರ ಸೈಯದ್ ಯತ್ನಿಸಿದ್ದ. ಸಾವಿರಾರು ಜನ್ರನ್ನ ಸೇರಿಸಿ ಠಾಣೆಗೆ ಮುತ್ತಿಗೆ ಹಾಕಿಸಿ ಭಯದ ವಾತಾವರಣ ಸೃಷ್ಟಿ ಮಾಡಿದ್ದ. ಮುಸ್ಲಿಂ ಸಮುದಾಯದ ಯುವಕರ ಮೈಂಡ್ ವಾಷ್​ ಮಾಡಿ ಗಲಭೆ ಎಬ್ಬಿಸಲು ಅಂದು ನಡೆದಿತ್ತು. ಅದು ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ದೊಡ್ಡ ಪ್ಲಾನ್ ಹಾಕಿಕೊಂಡಿದ್ದನಂತೆ. ಸ್ವಲ್ಪದರಲ್ಲೆ ಆ ಯತ್ನ ವಿಫಲವಾಗಿತ್ತು. ಇದೀಗ, ಗಣಿನಾಡಿನಲ್ಲಿ ಶಂಕಿತ ಉಗ್ರರ ಕರಾಳ ಕೃತ್ಯಗಳ ಬಗ್ಗೆ ಜನ ಆತಂಕಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:13 pm, Wed, 20 December 23

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ