AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ನಾಡಿನಲ್ಲಿ ಕೊರೊನಾ ಭೀತಿ: ಗಡಿ ಭಾಗದಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್

ಬಳ್ಳಾರಿ: ನೆರೆಯ ಆಂಧ್ರದ ಕರ್ನೂಲ್ ಹಾಗೂ ಅನಂತಪುರಂ ಜಿಲ್ಲೆಗಳಲ್ಲಿ ಕೊರೊನಾ ಹೆಮ್ಮಾರಿ ಅಟ್ಟಹಾಸ ಮೆರೆಯುತ್ತಿದೆ. ಜಿಲ್ಲೆಗಳ ಪೈಕಿ ದೇಶದಲ್ಲಿ ಅತಿಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿರುವುದು ಕರ್ನೂಲ್​ನಲ್ಲಿ. ಈ ಎರಡು ಜಿಲ್ಲೆಗಳು ಬಳ್ಳಾರಿ ಜಿಲ್ಲೆ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳು. ಸರ್ಕಾರ ಮದ್ಯ ಮಾರಾಟಕ್ಕೆ ಅನುಮತಿ ನೀಡಿದ್ದೇ ತಡ ಆಂಧ್ರದ ಗಡಿ ಗ್ರಾಮಗಳ ಜನರು ಮದ್ಯ ಖರೀದಿಗಾಗಿ ನಿತ್ಯ ಬಳ್ಳಾರಿ ಗಡಿ ಗ್ರಾಮಗಳಿಗೆ ಲಗ್ಗೆಯಿಟ್ಟಿದ್ದರು. ಇದು ಗಣಿ ಜಿಲ್ಲೆಗೆ ಮತ್ತಷ್ಟು ಕೊರೊನಾ ವೈರಸ್ ಭೀತಿ ಶುರುವಾಯ್ತು. ಕಳ್ಳಮಾರ್ಗ ಮೂಲಕ ಎಂಟ್ರಿ: […]

ಗಣಿ ನಾಡಿನಲ್ಲಿ ಕೊರೊನಾ ಭೀತಿ: ಗಡಿ ಭಾಗದಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್
ಸಾಧು ಶ್ರೀನಾಥ್​
| Edited By: |

Updated on: May 24, 2020 | 5:43 PM

Share

ಬಳ್ಳಾರಿ: ನೆರೆಯ ಆಂಧ್ರದ ಕರ್ನೂಲ್ ಹಾಗೂ ಅನಂತಪುರಂ ಜಿಲ್ಲೆಗಳಲ್ಲಿ ಕೊರೊನಾ ಹೆಮ್ಮಾರಿ ಅಟ್ಟಹಾಸ ಮೆರೆಯುತ್ತಿದೆ. ಜಿಲ್ಲೆಗಳ ಪೈಕಿ ದೇಶದಲ್ಲಿ ಅತಿಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿರುವುದು ಕರ್ನೂಲ್​ನಲ್ಲಿ. ಈ ಎರಡು ಜಿಲ್ಲೆಗಳು ಬಳ್ಳಾರಿ ಜಿಲ್ಲೆ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳು. ಸರ್ಕಾರ ಮದ್ಯ ಮಾರಾಟಕ್ಕೆ ಅನುಮತಿ ನೀಡಿದ್ದೇ ತಡ ಆಂಧ್ರದ ಗಡಿ ಗ್ರಾಮಗಳ ಜನರು ಮದ್ಯ ಖರೀದಿಗಾಗಿ ನಿತ್ಯ ಬಳ್ಳಾರಿ ಗಡಿ ಗ್ರಾಮಗಳಿಗೆ ಲಗ್ಗೆಯಿಟ್ಟಿದ್ದರು. ಇದು ಗಣಿ ಜಿಲ್ಲೆಗೆ ಮತ್ತಷ್ಟು ಕೊರೊನಾ ವೈರಸ್ ಭೀತಿ ಶುರುವಾಯ್ತು.

ಕಳ್ಳಮಾರ್ಗ ಮೂಲಕ ಎಂಟ್ರಿ: ಗಡಿ ಭಾಗದಲ್ಲಿ ಎಷ್ಟೇ ಕಟ್ಟುನಿಟ್ಟಿನ ಚೆಕ್ ಪೋಸ್ಟ್​ಗಳನ್ನ ನಿರ್ಮಾಣ ಮಾಡಿದ್ರೂ ಕಾಲು ದಾರಿಗಳ ಮೂಲ ರೆಡ್ ಝೋನ್ ಜಿಲ್ಲೆಗಳಿಂದ ಬಳ್ಳಾರಿಗೆ ಬರುತ್ತಲೇ ಇದ್ದಾರೆ. ಯಾಕಂದ್ರೆ ಆಂಧ್ರದಲ್ಲಿ ಮದ್ಯದ ಅಬಕಾರಿ ತೆರಿಗೆ ಶುಲ್ಕ ಹೆಚ್ಚಾಗಿದ್ದರಿಂದ ಬಳ್ಳಾರಿ ಗಡಿ ಗ್ರಾಮಗಳಿಗೆ ಬಂದು ಮದ್ಯ ಖರೀದಿ ಮಾಡಿಕೊಂಡು ಆಂಧ್ರದ ಗಡಿ ಗ್ರಾಮಗಳ ಜನರು ಹೋಗುತ್ತಿದ್ದಾರೆ. ಹೀಗಾಗಿ ಬಳ್ಳಾರಿ ಜಿಲ್ಲೆಗೆ ಕೊರೊನಾ ಭೀತಿ ಹೆಚ್ಚಾಗಿತ್ತು. ಇದರಿಂದಾಗಿ ಅಲ್ಲಿನ ಜನರು ಬಳ್ಳಾರಿ ಗಡಿ ಗ್ರಾಮಗಳಿಗೆ ನಿತ್ಯ ಬಂದು ಹೋಗುವುದರಿಂದ ಈ ಭಾಗದ ಜನರಿಗೆ ಕೊರೊನಾ ಬರಬಹುದು ಅನ್ನೋ ಲೆಕ್ಕಚಾರದಿಂದ ಬಳ್ಳಾರಿ ಜಿಲ್ಲಾಡಳಿತ ಮದ್ಯ ಮಾರಾಟ ಬಂದ್ ಮಾಡಿ ಆದೇಶಗೊಳಿಸಿದೆ.

ಮದ್ಯ ಮಾರಾಟ ಬಂದ್: ಬಳ್ಳಾರಿ ತಾಲೂಕಿನ 29 ಗ್ರಾಮಗಳು ಸಿರುಗುಪ್ಪ ತಾಲೂಕಿನ 27 ಗ್ರಾಮಗಳು ಹಾಗೂ ಸಂಡೂರು ತಾಲೂಕಿನ 10 ಗ್ರಾಮಗಳು ಆಂಧ್ರದ ಗಡಿಭಾಗದಲ್ಲಿರುವ ಗ್ರಾಮಗಳಾಗಿವೆ. ಆಂಧ್ರದ ಗಡಿ ಭಾಗದಲ್ಲಿರುವ ಗ್ರಾಮಗಳಲ್ಲಿ 5 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಆ ಮೂಲಕ ಆಂಧ್ರದ ಗಡಿ ಗ್ರಾಮಗಳಿಂದ ಮದ್ಯ ಖರೀದಿಗಾಗಿ ಬಳ್ಳಾರಿ ಗಡಿ ಗ್ರಾಮಗಳಿಗೆ ಬರುತ್ತಿದ್ದ ಜನರಿಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಇನ್ನೂ ಚೆಕ್ ಪೋಸ್ಟ್ ಗಳನ್ನ ಕಣ್ಣು ತಪ್ಪಿಸಿ ಬರುತ್ತಿದ್ದ ಜನರಿಗೂ ಪೊಲೀಸ್ ಇಲಾಖೆ ಹದ್ದಿನ ಕಣ್ಣು ಇಟ್ಟಿದೆ.

ಅಕ್ರಮವಾಗಿ ಮದ್ಯ ಸಾಗಾಟ: ಬಳ್ಳಾರಿ ಗಡಿ ಗ್ರಾಮಗಳಲ್ಲಿ ಮದ್ಯ ಖರೀದಿ ಮಾಡಿ ಆಂಧ್ರದ ಗಡಿ ಗ್ರಾಮಗಳಲ್ಲಿ ದುಪ್ಪಟ್ಟು ದರಕ್ಕೆ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಇದರಿಂದಾಗಿ ಕಳ್ಳಮಾರ್ಗ ಮೂಲಕ ಮದ್ಯ ಸಾಗಾಟವಾಗುತ್ತಿತ್ತು. ಇದಕ್ಕೆ ಕಡಿವಾಣ ಹಾಕಲು ಬಳ್ಳಾರಿ ಜಿಲ್ಲಾಡಳಿತ ಗಡಿ ಭಾಗದಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಿದೆ. ಆದರೆ ಬಳ್ಳಾರಿ ಗಡಿ ಗ್ರಾಮಗಳಿಂದ ಆಂಧ್ರದ ಗಡಿ ಗ್ರಾಮಗಳಿಗೆ ಅಕ್ರಮವಾಗಿ ಮದ್ಯ ಸಾಗಾಟವಾಗುತ್ತಿದೆ. ಈ ಸಂಬಂಧ ಬಳ್ಳಾರಿ ತಾಲೂಕಿನ ಪಿಡಿ ಹಳ್ಳಿ ಪೊಲೀಸ್ ಠಾಣೆ ಹಾಗೂ ಅನಂತಪುರಂ ಜಿಲ್ಲೆ ಇಡಪನಕಲ್ಲು ಪೊಲೀಸ್ ಠಾಣೆಗಳಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುವವರ ವಿರುದ್ದ ಪ್ರಕರಣಗಳು ಕೂಡ ದಾಖಲಾಗಿವೆ.

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!