AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳಮುಖಿ ಎಂದು ಗೊತ್ತಿದ್ದರೂ ಪ್ರೀತಿಯಲ್ಲಿ ಬಿದ್ದ ಯುವಕ: ಆಮೇಲಾಗಿದ್ದು ದುರಂತ

ಬಳ್ಳಾರಿಯಲ್ಲಿ ಯುವಕ ಹಾಗೂ ಮಂಗಳಮುಖಿ ನಡುವಣ ಲವ್ ಕಹಾನಿ ಈಗ ದುರಂತಮಯವಾಗಿದೆ. ಪರಸ್ಪರ ಪ್ರೀತಿಸಿ ಒಟ್ಟಿಗೆ ವಾಸ ಮಾಡುತ್ತಿದ್ದರು ಎನ್ನಲಾದ ಇಬ್ಬರು ಅನುಮಾನಾಸ್ಪದವಾಗಿ ಬಾಡಿಗೆ ಮನೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯ ಬಳ್ಳಾರಿಯ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಎಲ್ಲ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ.

ಮಂಗಳಮುಖಿ ಎಂದು ಗೊತ್ತಿದ್ದರೂ ಪ್ರೀತಿಯಲ್ಲಿ ಬಿದ್ದ ಯುವಕ: ಆಮೇಲಾಗಿದ್ದು ದುರಂತ
ಶೇಖರ್ ಅಲಿಯಾಸ್ ಮಣಿ, ಸುಹಾಸಿನಿImage Credit source: tv9
ವಿನಾಯಕ ಬಡಿಗೇರ್​
| Edited By: |

Updated on: Feb 18, 2026 | 1:50 PM

Share

ಬಳ್ಳಾರಿ, ಫೆಬ್ರವರಿ 18: ಬಳ್ಳಾರಿ (Ballari) ನಗರದ ಕೆಎಂಎಫ್ (KMF) ಡೈರಿ ಕ್ರಾಸ್ ಬಳಿಯ ಬಾಡಿಗೆ ಮನೆಯಲ್ಲಿ ಪರಸ್ಪರ ಪ್ರೀತಿಸುತ್ತಿದ್ದ ಮಂಗಳಮುಖಿ ಮತ್ತು ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತರನ್ನು ಮಂಗಳಮುಖಿ ಸುಹಾಸಿನಿ (29) ಹಾಗೂ ಶೇಖರ್ ಅಲಿಯಾಸ್ ಮಣಿ (31) ಎಂದು ಗುರುತಿಸಲಾಗಿದೆ. ಶೇಖರ್ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲ್ಪನಗುಡಿ ಗ್ರಾಮದ ನಿವಾಸಿಯಾಗಿದ್ದು, ಆಟೋ ಚಾಲಕರಾಗಿ ಜೀವನ ನಡೆಸುತ್ತಿದ್ದ. ಸುಹಾಸಿನಿ ಬಳ್ಳಾರಿ ತಾಲೂಕಿನ ಚಾಗನೂರು ಗ್ರಾಮದವರಾಗಿದ್ದರು.

ಇಬ್ಬರೂ ಕಳೆದ ಆರು ವರ್ಷಗಳಿಂದ ಒಟ್ಟಿಗೆ ವಾಸವಾಗಿದ್ದರು. ಸುಹಾಸಿನಿ ಮಂಗಳಮುಖಿ ಎಂದು ಗೊತ್ತಿದ್ದರೂ ಶೇಖರ್ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಬಳ್ಳಾರಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ಸಂಬಂಧ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಮಂಗಳಮುಖಿಯರಿಂದ ಗಂಭೀರ ಆರೋಪ

ಮಂಗಳಮುಖಿ ಸಮುದಾಯದ ಸದಸ್ಯರು ಶೇಖರ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಹಣಕ್ಕಾಗಿ ಸುಹಾಸಿನಿಯ ಜೊತೆ ಇದ್ದ ಶೇಖರ್, ನಂತರ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಫ್ರೀಯಾಗಿ ಮೂವಿ ಸಿಗುತ್ತೆ ಎಂದು ಡೌನ್ ಲೋಡ್ ಮಾಡ್ತಿದ್ದಿರಾ? ಡೌನ್ ಲೋಡ್ ಆಗುವ ಸಮಯವೇ ಆಗುತ್ತೆ ವಂಚಕರಿಗೆ ವರದಾನ, ಹೇಗೆ ಗೊತ್ತಾ?

ಮತ್ತೊಂದೆಡೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸಾವಿನ ನಿಖರ ಕಾರಣ ಮರಣೋತ್ತರ ವರದಿ ನಂತರವೇ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ