AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಳಿದ ಖಾತೆ ಕೊಡದಿದ್ದರೆ ರಾಜೀನಾಮೆ ನೀಡುವ ಪರೋಕ್ಷ ಸುಳಿವು ಕೊಟ್ಟ ನೂತನ ಸಚಿವ ಆನಂದ್ ಸಿಂಗ್

ನನಗೆ ಅರ್ಹತೆ ಇಲ್ವಾ?, ನಾನು ಭ್ರಷ್ಟಾಚಾರ ಮಾಡಿದ್ದೀನಾ? ನನಗೆ ಸಾಮರ್ಥ್ಯ ಇಲ್ವಾ? ನಾನೇನು ಅನ್‌ ಫಿಟ್ ಇದೀನಾ? : ನೂತನ ಸಚಿವ ಆನಂದ್ ಸಿಂಗ್

ಕೇಳಿದ ಖಾತೆ ಕೊಡದಿದ್ದರೆ ರಾಜೀನಾಮೆ ನೀಡುವ ಪರೋಕ್ಷ ಸುಳಿವು ಕೊಟ್ಟ ನೂತನ ಸಚಿವ ಆನಂದ್ ಸಿಂಗ್
ಆನಂದ್ ಸಿಂಗ್
TV9 Web
| Edited By: |

Updated on:Aug 07, 2021 | 3:44 PM

Share

ಬಳ್ಳಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಸಚಿವರಿಗೆ ಖಾತೆ ಹಂಚಿದ ಬೆನ್ನಲ್ಲೇ ಅಸಮಾಧಾನ ಭುಗಿಲೆದ್ದಿದೆ. ಕೇಳಿದ ಖಾತೆ ನೀಡದಿರುವುದು ನನಗೆ ಅಸಮಾಧಾನ ಉಂಟುಮಾಡಿದೆ. ಕೇಳಿದ ಖಾತೆ ಏಕೆ ನೀಡಲಿಲ್ಲ ಅನ್ನೋದು ನನಗೆ ತಿಳಿಸಬೇಕು. ಸಿಎಂ ಬೊಮ್ಮಾಯಿರನ್ನು ಭೇಟಿಯಾಗಿ ಮನವಿ ಮಾಡುವೆ. ನನಗೆ ಅರ್ಹತೆ ಇಲ್ವಾ?, ನಾನು ಭ್ರಷ್ಟಾಚಾರ ಮಾಡಿದ್ದೀನಾ? ನನಗೆ ಸಾಮರ್ಥ್ಯ ಇಲ್ವಾ? ನಾನೇನು ಅನ್‌ ಫಿಟ್ ಇದೀನಾ? ಎಂದು ಕೇಳುವೆ. ಅವರು ನೀನು ನಾಲಾಯಕ್ ಅಂತ ಅನ್ನೋದನ್ನಾದ್ರೂ ಹೇಳಲಿ. ಸರ್ಕಾರ ಬರಲಿಕ್ಕೆ ಕಾರಣವಾದವರಲ್ಲಿ ನಾನೂ ಮೊದಲಿಗ. ಮೊದಲಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು ನಾನೇ. ನಾನು ರಾಜೀನಾಮೆ ನೀಡಿದಾಗ ಯಾರೂ ಕೊಟ್ಟಿರಲಿಲ್ಲ. ನಾನು ಕೇಳಿದ ಖಾತೆ ನನಗೆ ಮತ್ತು ಸಿಎಂಗೆ ಮಾತ್ರ ಗೊತ್ತು. ಕೇಳಿದ ಖಾತೆ ಸಿಗದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಅವರು ಬಳ್ಳಾರಿ ನಗರದಲ್ಲಿ ಎಚ್ಚರಿಕೆ ನೀಡಿದರು.

ಸಚಿವ ಆನಂದ್ ಸಿಂಗ್ ಅಸಮಧಾನದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,  ‘ಎಲ್ಲರಿಗೂ ಕೇಳಿದ ಖಾತೆ ನೀಡಲು ಆಗಲ್ಲ. ನಾಳೆ ಸಚಿವ ಆನಂದ್ ಸಿಂಗ್ ಜತೆ ಚರ್ಚೆ ಮಾಡುತ್ತೇನೆ. ಸಂಪುಟ ರಚನೆಯಾದಾಗ ಅಸಮಾಧಾನ ಸಹಜ’ ಎಂದು ತಿಳಿಸಿದರು.

ಇದನ್ನೂ ಓದಿ: ಬೊಮ್ಮಾಯಿ ಮಂತ್ರಿ ಮಂಡಲದಲ್ಲಿ ಮಹತ್ವದ, ಆಯಕಟ್ಟಿನ ಇಲಾಖೆ ನೀಡಿದರೂ ರಗಳೆ ತೆಗೆದ ಬಳ್ಳಾರಿ ಕಡೆಯ ಇಬ್ಬರು ಸಚಿವರು

ಖಾತೆ ಹಂಚಿಕೆಗೂ ಮುನ್ನ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

(Minister Anand Singh indirectly instructed him to resign if he did not give his demanded ministry)

Published On - 3:35 pm, Sat, 7 August 21

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ