AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hampi Utsav 2023: ಕನ್ನಡ ಹಾಡು ಹಾಡಲಿಲ್ಲವೆಂದು ಪದ್ಮಶ್ರೀ ಪುರಸ್ಕೃತ ಗಾಯಕ ಕೈಲಾಶ್ ಖೇರ್ ಮೇಲೆ ಬಾಟಲಿ ಎಸೆತ, ಇಬ್ಬರು ಅರೆಸ್ಟ್

ಕನ್ನಡ ಹಾಡು ಹಾಡಲಿಲ್ಲವೆಂದು ಪದ್ಮಶ್ರೀ ಪುರಸ್ಕೃತ ಗಾಯಕ ಕೈಲಾಶ್ ಖೇರ್ ಮೇಲೆ ಪ್ರೇಕ್ಷಕರ ಗ್ಯಾಲರಿಯಿಂದ ನೀರಿನ ಬಾಟಲಿ ಎಸೆದು ಅವಮಾನ ಮಾಡಲಾಗಿದೆ.

Hampi Utsav 2023: ಕನ್ನಡ ಹಾಡು ಹಾಡಲಿಲ್ಲವೆಂದು ಪದ್ಮಶ್ರೀ ಪುರಸ್ಕೃತ ಗಾಯಕ ಕೈಲಾಶ್ ಖೇರ್ ಮೇಲೆ ಬಾಟಲಿ ಎಸೆತ, ಇಬ್ಬರು ಅರೆಸ್ಟ್
ಕೈಲಾಶ್ ಖೇರ್
TV9 Web
| Updated By: ಆಯೇಷಾ ಬಾನು|

Updated on:Jan 30, 2023 | 8:35 AM

Share

ವಿಜಯನಗರ: ಜಿಲ್ಲೆಯಲ್ಲಿ ಹಂಪಿ ಉತ್ಸವದ(Hampi Utsav) ಸಮಾರೋಪ ಸಮಾರಂಭ ಭರ್ಜರಿಯಾಗಿ ನೆರವೇರಿದೆ. ಮಹಾಮಾರಿ ಕೊರೊನಾದಿಂದ(Coronavirus) ತಾತ್ಕಾಲಿಕವಾಗಿ ನಿಂತು ಹೋಗಿದ್ದ ಹಂಪಿ ಉತ್ಸವ ಕಾರ್ಯಕ್ರಮ ಕೊರೊನಾ ಬಳಿಕ ಅದ್ದೂರಿಯಾಗಿ ನೆರವೇರಿದೆ. ಆದ್ರೆ ಈ ಅದ್ದೂರಿ ಸಮಾರಂಭದಲ್ಲಿ ಅಹಿತಕರ ಘಟನೆಯೊಂದು ನಡೆದಿದೆ. ಗಾಯಕ ಕೈಲಾಶ್ ಖೇರ್​(Kailash kher) ಮೇಲೆ ಕೆಲ ಕಿಡಿಗೇಡಿಗಳು ಬಾಟಲಿ ಎಸೆದು ದರ್ಪ ಮೆರೆದಿದ್ದಾರೆ.

ಕಿಡಿಗೇಡಿಗಳು ಪೊಲೀಸರ ವಶ

ವಿಜಯನಗರ ಜಿಲ್ಲೆಯ ಹಂಪಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ಕನ್ನಡ ಹಾಡು ಹಾಡಲಿಲ್ಲವೆಂದು ಪದ್ಮಶ್ರೀ ಪುರಸ್ಕೃತ ಗಾಯಕ ಕೈಲಾಶ್ ಖೇರ್ ಮೇಲೆ ಪ್ರೇಕ್ಷಕರ ಗ್ಯಾಲರಿಯಿಂದ ನೀರಿನ ಬಾಟಲಿ ಎಸೆದು ಅವಮಾನ ಮಾಡಲಾಗಿದೆ. ಆದ್ರೆ ಕಿಡಿಗೇಡಿಗಳು ಬಾಡಲಿ ಎಸೆದರೂ ಗಾಯಕ ಕೈಲಾಶ್ ತಮ್ಮ ಗಾಯನ ಮುಂದುವರೆಸಿದ್ದರು. ಸದ್ಯ ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಬಾಟಲ್ ಎಸೆದ ಕಿಡಿಗೇಡಿಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: Road Accident: ಖಾಸಗಿ ಬಸ್ ಡಿಕ್ಕಿಯಾಗಿ ಸ್ವಗ್ರಾಮದಿಂದ ಬೆಂಗಳೂರಿಗೆ ಮರಳುತ್ತಿದ್ದ ತಂದೆ-ಮಗಳು ದುರಂತ ಸಾವು

ಕಾಳಾಪುರದಲ್ಲಿ ಸಿರಿಗೆರಿಶ್ರೀ ಬೈಕ್​ ಱಲಿ ವೇಳೆ ಕಲ್ಲುತೂರಾಟ

ಗುರುಬಸವೇಶ್ವರರು ನೆಲಸಿರೋ ಐತಿಹಾಸಿಕ ಪುಣ್ಯ ಕ್ಷೇತ್ರ. ವಿಜಯನಗರ ಜಿಲ್ಲೆಯಲ್ಲಿರೋ ಕೊಟ್ಟೂರಿನಲ್ಲಿ ತರಳುಬಾಳು ಹುಣ್ಣಿಮೆ ಮಹೋತ್ಸವ ನಡೆಯುತ್ತಿದೆ. ನಿನ್ನೆಯಿಂದ ಆರಂಭವಾಗಿರೋ ಸಮಾರಂಭ, ಫೆಬ್ರವರಿ 5 ರಂದು ಅಂತ್ಯವಾಗಲಿದೆ. ಇದೇ ಹುಣ್ಣಿಮೆ ಮಹೋತ್ಸವಕ್ಕೆ ತರಳಬಾಳು ಶ್ರೀಗಳು ಆಗಮಿಸಿದ್ರು. ಶ್ರೀಗಳನ್ನ ಬರಮಾಡಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತರು ಬೈಕ್‌ ಱಲಿ ನಡೆಸಿದ್ರು. ಈ ಱಲಿ ನಡೆವೆಯೇ ದೊಡ್ಡ ಗಲಾಟೆಯೇ ನಡೆದು ಹೋಗಿದೆ. ಕೊಟ್ಟೂರು ತಾಲೂಕಿನ ಕಾಳಾಪುರ ಗ್ರಾಮಕ್ಕೆ ಱಲಿ ಎಂಟ್ರಿಯಾಗ್ತಿದ್ದಂತೆ ಗ್ರಾಮಸ್ಥರು ಹಾಗೂ ಱಲಿಯಲ್ಲಿ ಬಂದವರ ನಡುವೆ ಮಾತಿನ ಚಕಮಕಿಯಾಗಿದ್ದು, ಅದು ವಿಕೋಪಕ್ಕೆ ತಿರುಗಿ ಬಡಿದಾಟವೇ ನಡೆದು ಹೋಗಿದೆ.

ಉಜ್ಜನಿಪೀಠ ಹಾಗೂ ತರಳಬಾಳು ಮಠದ ಮಧ್ಯೆ ದಶಕಗಳಿಂದಲೂ ಮನಸ್ತಾಪ ಇದೆ. ಇದು ಭಕ್ತರವರೆಗೂ ಬಂದು ನಿಂತಿತ್ತು. ಹಳೇ ದ್ವೇಷವೇ ನಿನ್ನೆ ಸ್ಫೋಟಗೊಂಡಿದೆ ಅಂತಾ ಹೇಳಲಾಗ್ತಿದೆ. ಱಲಿಯಲ್ಲಿ ಬಂದಿದ್ದವರು ಮನೆ ಮನೆಗೂ ನುಗ್ಗಿ ದಾಂಧಲೆ ನಡೆಸಿದ್ದಾರೆ. ಬೈಕ್‌ಗಳನ್ನ ಸುಟ್ಟು ಹಾಕಿದ್ದಾರೆ.ಹತ್ತಾರು ಮಂದಿಯನ್ನ ಗಾಯಗೊಳಿಸಿದ್ದಾರೆ ಅಂತಾ ಕಾಳಾಪುರ ಗ್ರಾಮಸ್ಥರು ಆರೋಪಿಸಿದ್ದಾರೆ.

ಇನ್ನು ನಿನ್ನೆ ಬೈಕ್‌ ಱಲಿ ಬರೋದನ್ನ ಅರಿತಿದ್ದ ಪೊಲೀಸರು, ಉಜ್ಜನಿ ಬಳಿ ಬಿಗಿ ಬಂದೋಬಸ್ತ ಮಾಡಿದ್ದರು. ಇಷ್ಟಾದ್ರೂ ಉಜ್ಜನಿ ಸಮೀಪದ ಕಾಳಾಪುರದಲ್ಲಿ ಕಾಳಗವೇ ನಡೆದು ಹೋಗಿದೆ. ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂಥಾ ವಾತಾವರಣ ಇದ್ದು, ಉಜ್ಜನಿ ಅಕ್ಕಪಕ್ಕದ 9 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೂ ಹೆಚ್ಚಿನ ಭದ್ರತೆ ನೀಡಲಾಗಿದೆ. ಎಸ್‌ಪಿ, ಡಿಸಿ ಸೇರಿದಂತೆ ಎಲ್ರೂ ಗ್ರಾಮಕ್ಕೆ ಭೇಟಿ ನೀಡಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:55 am, Mon, 30 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ