AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hampi Utsav 2023: ಕನ್ನಡ ಹಾಡು ಹಾಡಲಿಲ್ಲವೆಂದು ಪದ್ಮಶ್ರೀ ಪುರಸ್ಕೃತ ಗಾಯಕ ಕೈಲಾಶ್ ಖೇರ್ ಮೇಲೆ ಬಾಟಲಿ ಎಸೆತ, ಇಬ್ಬರು ಅರೆಸ್ಟ್

ಕನ್ನಡ ಹಾಡು ಹಾಡಲಿಲ್ಲವೆಂದು ಪದ್ಮಶ್ರೀ ಪುರಸ್ಕೃತ ಗಾಯಕ ಕೈಲಾಶ್ ಖೇರ್ ಮೇಲೆ ಪ್ರೇಕ್ಷಕರ ಗ್ಯಾಲರಿಯಿಂದ ನೀರಿನ ಬಾಟಲಿ ಎಸೆದು ಅವಮಾನ ಮಾಡಲಾಗಿದೆ.

Hampi Utsav 2023: ಕನ್ನಡ ಹಾಡು ಹಾಡಲಿಲ್ಲವೆಂದು ಪದ್ಮಶ್ರೀ ಪುರಸ್ಕೃತ ಗಾಯಕ ಕೈಲಾಶ್ ಖೇರ್ ಮೇಲೆ ಬಾಟಲಿ ಎಸೆತ, ಇಬ್ಬರು ಅರೆಸ್ಟ್
ಕೈಲಾಶ್ ಖೇರ್
TV9 Web
| Edited By: |

Updated on:Jan 30, 2023 | 8:35 AM

Share

ವಿಜಯನಗರ: ಜಿಲ್ಲೆಯಲ್ಲಿ ಹಂಪಿ ಉತ್ಸವದ(Hampi Utsav) ಸಮಾರೋಪ ಸಮಾರಂಭ ಭರ್ಜರಿಯಾಗಿ ನೆರವೇರಿದೆ. ಮಹಾಮಾರಿ ಕೊರೊನಾದಿಂದ(Coronavirus) ತಾತ್ಕಾಲಿಕವಾಗಿ ನಿಂತು ಹೋಗಿದ್ದ ಹಂಪಿ ಉತ್ಸವ ಕಾರ್ಯಕ್ರಮ ಕೊರೊನಾ ಬಳಿಕ ಅದ್ದೂರಿಯಾಗಿ ನೆರವೇರಿದೆ. ಆದ್ರೆ ಈ ಅದ್ದೂರಿ ಸಮಾರಂಭದಲ್ಲಿ ಅಹಿತಕರ ಘಟನೆಯೊಂದು ನಡೆದಿದೆ. ಗಾಯಕ ಕೈಲಾಶ್ ಖೇರ್​(Kailash kher) ಮೇಲೆ ಕೆಲ ಕಿಡಿಗೇಡಿಗಳು ಬಾಟಲಿ ಎಸೆದು ದರ್ಪ ಮೆರೆದಿದ್ದಾರೆ.

ಕಿಡಿಗೇಡಿಗಳು ಪೊಲೀಸರ ವಶ

ವಿಜಯನಗರ ಜಿಲ್ಲೆಯ ಹಂಪಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ಕನ್ನಡ ಹಾಡು ಹಾಡಲಿಲ್ಲವೆಂದು ಪದ್ಮಶ್ರೀ ಪುರಸ್ಕೃತ ಗಾಯಕ ಕೈಲಾಶ್ ಖೇರ್ ಮೇಲೆ ಪ್ರೇಕ್ಷಕರ ಗ್ಯಾಲರಿಯಿಂದ ನೀರಿನ ಬಾಟಲಿ ಎಸೆದು ಅವಮಾನ ಮಾಡಲಾಗಿದೆ. ಆದ್ರೆ ಕಿಡಿಗೇಡಿಗಳು ಬಾಡಲಿ ಎಸೆದರೂ ಗಾಯಕ ಕೈಲಾಶ್ ತಮ್ಮ ಗಾಯನ ಮುಂದುವರೆಸಿದ್ದರು. ಸದ್ಯ ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಬಾಟಲ್ ಎಸೆದ ಕಿಡಿಗೇಡಿಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: Road Accident: ಖಾಸಗಿ ಬಸ್ ಡಿಕ್ಕಿಯಾಗಿ ಸ್ವಗ್ರಾಮದಿಂದ ಬೆಂಗಳೂರಿಗೆ ಮರಳುತ್ತಿದ್ದ ತಂದೆ-ಮಗಳು ದುರಂತ ಸಾವು

ಕಾಳಾಪುರದಲ್ಲಿ ಸಿರಿಗೆರಿಶ್ರೀ ಬೈಕ್​ ಱಲಿ ವೇಳೆ ಕಲ್ಲುತೂರಾಟ

ಗುರುಬಸವೇಶ್ವರರು ನೆಲಸಿರೋ ಐತಿಹಾಸಿಕ ಪುಣ್ಯ ಕ್ಷೇತ್ರ. ವಿಜಯನಗರ ಜಿಲ್ಲೆಯಲ್ಲಿರೋ ಕೊಟ್ಟೂರಿನಲ್ಲಿ ತರಳುಬಾಳು ಹುಣ್ಣಿಮೆ ಮಹೋತ್ಸವ ನಡೆಯುತ್ತಿದೆ. ನಿನ್ನೆಯಿಂದ ಆರಂಭವಾಗಿರೋ ಸಮಾರಂಭ, ಫೆಬ್ರವರಿ 5 ರಂದು ಅಂತ್ಯವಾಗಲಿದೆ. ಇದೇ ಹುಣ್ಣಿಮೆ ಮಹೋತ್ಸವಕ್ಕೆ ತರಳಬಾಳು ಶ್ರೀಗಳು ಆಗಮಿಸಿದ್ರು. ಶ್ರೀಗಳನ್ನ ಬರಮಾಡಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತರು ಬೈಕ್‌ ಱಲಿ ನಡೆಸಿದ್ರು. ಈ ಱಲಿ ನಡೆವೆಯೇ ದೊಡ್ಡ ಗಲಾಟೆಯೇ ನಡೆದು ಹೋಗಿದೆ. ಕೊಟ್ಟೂರು ತಾಲೂಕಿನ ಕಾಳಾಪುರ ಗ್ರಾಮಕ್ಕೆ ಱಲಿ ಎಂಟ್ರಿಯಾಗ್ತಿದ್ದಂತೆ ಗ್ರಾಮಸ್ಥರು ಹಾಗೂ ಱಲಿಯಲ್ಲಿ ಬಂದವರ ನಡುವೆ ಮಾತಿನ ಚಕಮಕಿಯಾಗಿದ್ದು, ಅದು ವಿಕೋಪಕ್ಕೆ ತಿರುಗಿ ಬಡಿದಾಟವೇ ನಡೆದು ಹೋಗಿದೆ.

ಉಜ್ಜನಿಪೀಠ ಹಾಗೂ ತರಳಬಾಳು ಮಠದ ಮಧ್ಯೆ ದಶಕಗಳಿಂದಲೂ ಮನಸ್ತಾಪ ಇದೆ. ಇದು ಭಕ್ತರವರೆಗೂ ಬಂದು ನಿಂತಿತ್ತು. ಹಳೇ ದ್ವೇಷವೇ ನಿನ್ನೆ ಸ್ಫೋಟಗೊಂಡಿದೆ ಅಂತಾ ಹೇಳಲಾಗ್ತಿದೆ. ಱಲಿಯಲ್ಲಿ ಬಂದಿದ್ದವರು ಮನೆ ಮನೆಗೂ ನುಗ್ಗಿ ದಾಂಧಲೆ ನಡೆಸಿದ್ದಾರೆ. ಬೈಕ್‌ಗಳನ್ನ ಸುಟ್ಟು ಹಾಕಿದ್ದಾರೆ.ಹತ್ತಾರು ಮಂದಿಯನ್ನ ಗಾಯಗೊಳಿಸಿದ್ದಾರೆ ಅಂತಾ ಕಾಳಾಪುರ ಗ್ರಾಮಸ್ಥರು ಆರೋಪಿಸಿದ್ದಾರೆ.

ಇನ್ನು ನಿನ್ನೆ ಬೈಕ್‌ ಱಲಿ ಬರೋದನ್ನ ಅರಿತಿದ್ದ ಪೊಲೀಸರು, ಉಜ್ಜನಿ ಬಳಿ ಬಿಗಿ ಬಂದೋಬಸ್ತ ಮಾಡಿದ್ದರು. ಇಷ್ಟಾದ್ರೂ ಉಜ್ಜನಿ ಸಮೀಪದ ಕಾಳಾಪುರದಲ್ಲಿ ಕಾಳಗವೇ ನಡೆದು ಹೋಗಿದೆ. ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂಥಾ ವಾತಾವರಣ ಇದ್ದು, ಉಜ್ಜನಿ ಅಕ್ಕಪಕ್ಕದ 9 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೂ ಹೆಚ್ಚಿನ ಭದ್ರತೆ ನೀಡಲಾಗಿದೆ. ಎಸ್‌ಪಿ, ಡಿಸಿ ಸೇರಿದಂತೆ ಎಲ್ರೂ ಗ್ರಾಮಕ್ಕೆ ಭೇಟಿ ನೀಡಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:55 am, Mon, 30 January 23

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ