AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ RTO ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪ: ಧಿಡೀರ್ ಭೇಟಿ ನೀಡಿದ ಶಾಸಕ ಭರತ್ ರೆಡ್ಡಿ

ದಲ್ಲಾಳಿಗಳ ಹಾವಳಿ ತಪ್ಪಿಸದಿದ್ದರೆ ನಿಮ್ಮನ್ನು ವರ್ಗಾವಣೆ ಮಾಡಿಸುವೆ ಎಂದು ಖಡಕ್​ ವಾರ್ನಿಂಗ್ ನೀಡಿದರು. ಜೊತೆಗೆ ಯಾರೇ ಬಂದರೂ ಹಣವಿಲ್ಲದೇ ಕೆಲಸ ಆಗಬೇಕು. ಇದು ಮೊದಲ ವಾರ್ನಿಂಗ್ ಮತ್ತೊಮ್ಮೆ ಮಾಡಿದರೆ ಸಸ್ಪಂಡ್ ಮಾಡುವೆ. ಜನ ದಲ್ಲಾಳಿಗಳ ಹಾವಳಿಗೆ ಬೇಸತ್ತಿದ್ದಾರೆ. ಹೀಗೆಯೇ ಮುಂದುವರೆದರೆ ಸರಿ ಇರಲ್ಲ ಎಂದು ಬಳ್ಳಾರಿ ನಗರ ಶಾಸಕ ಭರತ್​ ರೆಡ್ಡಿ ಹೇಳಿದರು.

ಬಳ್ಳಾರಿ RTO ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪ: ಧಿಡೀರ್ ಭೇಟಿ ನೀಡಿದ ಶಾಸಕ ಭರತ್ ರೆಡ್ಡಿ
ಶಾಸಕ ಭರತ್​ ರೆಡ್ಡಿ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 03, 2023 | 3:48 PM

Share

ಬಳ್ಳಾರಿ, ನ.03: ಭ್ರಷ್ಟಾಚಾರ ಕೂಪವಾಗಿರುವ ಬಳ್ಳಾರಿ(Ballari) ಆರ್​ಟಿಓ ಕಚೇರಿ(RTO Office)ಗೆ ನಗರ ಶಾಸಕ ಭರತ್ ರೆಡ್ಡಿ ಧಿಡೀರ್ ಭೇಟಿ ನಿಡಿದ್ದಾರೆ. ಹೌದು, ಆರ್​ಟಿಓ ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ ತಪ್ಪಿಸುವಂತೆ ಸಾರ್ವಜನಿಕರಿಂದ ಅನೇಕ ದೂರುಗಳು ಬಂದ ಹಿನ್ನೆಲೆ ಇಂದು(ನ.3) ಕಚೇರಿಗೆ ತೆರಳಿ ಆರ್​ಟಿಓ ಶೇಖರಪ್ಪ ಮತ್ತು ಆರ್​ಟಿಓ ಇನ್ಸ್ಪೆಕ್ಟರ್ ನಾಗೇಶ್​ ಎಂಬುವವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಚುನಾವಣೆಯಲ್ಲಿ ನಿಲ್ಲಲು ಮುಂದಾಗಿದ್ದ ಆರ್​ಟಿಓ ಇನ್ಸ್ಪೆಕ್ಟರ್ ನಾಗೇಶ್

ಇನ್ನು ಈ ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜನಾರ್ದನ ರೆಡ್ಡಿಯವರ ನೂತನ ಪಕ್ಷದಿಂದ ನಿಲ್ಲಲು ಆರ್​ಟಿಓ ಇನ್ಸ್ಪೆಕ್ಟರ್ ನಾಗೇಶ್ ಮುಂದಾಗಿದ್ದರು. ಆದರೆ, ಕೊನೆ ಹಂತದಲ್ಲಿ ಆಗಿರಲಿಲ್ಲ. ಇದೀಗ ಅದನ್ನೆ ಹಿಡಿದುಕೊಂಡ ಶಾಸಕ ಭರತ್ ರೆಡ್ಡಿ  ಅವರು ‘ಚುನಾವಣೆ ನಿಲ್ಲೋದಿದ್ರೇ ರಾಜೀನಾಮೆ ನೀಡಿ. ರಾಜಕೀಯ ಮಾಡುವುದಕ್ಕೆ ಕಚೇರಿಗೆ ಬರಬೇಡಿ. ಮರ್ಯಾದೆಯಿಂದ ಕೆಲಸ ಮಾಡಿ ಇಲ್ಲವಾದ್ರೇ ಸರಿಯಿರಲ್ಲ ಎಂದು ನೇರವಾಗಿ ವಾರ್ನಿಂಗ್ ಮಾಡಿದ್ದಾರೆ.

ಇದನ್ನೂ ಓದಿ:ಇನ್ನು ಮುಂದೆ ಆರ್​ಟಿಓ ಕಚೇರಿ ಮುಂದೆ ಕಾಯುವ ಅವಶ್ಯಕತೆ ಇಲ್ಲ; ಆನ್​ಲೈನ್​ ಸೇವೆಗೆ ಹೆಚ್ಚಿನ ಆದ್ಯತೆ ನೀಡಿದ ಸಾರಿಗೆ ಕಚೇರಿ

 ದಲ್ಲಾಳಿಗಳ ಹಾವಳಿ ತಪ್ಪಿಸದಿದ್ದರೆ ನಿಮ್ಮನ್ನು ವರ್ಗಾವಣೆ

ಇದೇ ವೇಳೆ ದಲ್ಲಾಳಿಗಳ ಹಾವಳಿ ತಪ್ಪಿಸದಿದ್ದರೆ ನಿಮ್ಮನ್ನು ವರ್ಗಾವಣೆ ಮಾಡಿಸುವೆ ಎಂದು ಖಡಕ್​ ವಾರ್ನಿಂಗ್ ನೀಡಿದರು. ಯಾರೇ ಬಂದರೂ ಹಣವಿಲ್ಲದೇ ಕೆಲಸ ಆಗಬೇಕು. ಇದು ಮೊದಲ ವಾರ್ನಿಂಗ್ ಮತ್ತೊಮ್ಮೆ ಮಾಡಿದ್ರೇ ಸಸ್ಪಂಡ್ ಮಾಡುವೆ. ಜನ ದಲ್ಲಾಳಿಗಳ ಹಾವಳಿಗೆ ಬೇಸತ್ತಿದ್ದಾರೆ. ಹೀಗೆಯೇ ಮುಂದುವರೆದರೆ ಸರಿ ಇರಲ್ಲ ಎಂದರು. ಶಾಸಕರೆದುರು ಸೇರಿದ್ದ ಜನರು, ಆರ್​ಟಿಓ ಕಚೇರಿ ಅಧಿಕಾರಿಗಳ ವಿರುದ್ಧ ದೂರಿನ ಸುರಿಮಳೆಗೈದಿದ್ದಾರೆ. ಇನ್ಮುಂದೆ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯದಂತೆ ಮಾಡುವೆ ಎಂದು ಭರತ್ ರೆಡ್ಡಿ ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ