AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜನಾರ್ದನ ರೆಡ್ಡಿ ಬಿಜೆಪಿಗೆ ಬಂದರೆ ಮತ್ತೆ ಬಲ ಬರುತ್ತೆ: ಮಾಜಿ ಶಾಸಕ ಸೋಮಶೇಖರ ರೆಡ್ಡಿ

ಬಳ್ಳಾರಿಯಲ್ಲಿ ಟಿವಿ9ಗೆ ಪ್ರತಿಕ್ರಿಯಿಸಿರುವ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ, ಶಾಸಕ ಜನಾರ್ದನ ರೆಡ್ಡಿ ಬಿಜೆಪಿಗೆ ಬಂದರೆ ಮತ್ತೆ ಪಕ್ಷಕ್ಕೆ ಬಲ ಬರುತ್ತೆ. ವೈಯಕ್ತಿಕ ದ್ವೇಷವಿಲ್ಲ. ಸಹೋದರ ಜರ್ನಾದನ ರೆಡ್ಡಿ ಮರಳಿ ಬಿಜೆಪಿಗೆ ಬಂದ್ರೆ ಖುಷಿ ಆಗುತ್ತದೆ. ಮಾಜಿ ಸಿಎಂ B.S.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಗೆ ಜರ್ನಾದನ ರೆಡ್ಡಿ ಬರುತ್ತಾರೆ. ದೊಡ್ಡ ದೊಡ್ಡ ನಾಯಕರು ಜರ್ನಾದನ ರೆಡ್ಡಿ ಸಂಪರ್ಕ ಮಾಡಿದ್ದಾರೆ ಎಂದಿದ್ದಾರೆ.

ಶಾಸಕ ಜನಾರ್ದನ ರೆಡ್ಡಿ ಬಿಜೆಪಿಗೆ ಬಂದರೆ ಮತ್ತೆ ಬಲ ಬರುತ್ತೆ: ಮಾಜಿ ಶಾಸಕ ಸೋಮಶೇಖರ ರೆಡ್ಡಿ
ಶಾಸಕ ಜನಾರ್ದನ ರೆಡ್ಡಿ, ಮಾಜಿ ಶಾಸಕ ಸೋಮಶೇಖರ
TV9 Web
| Edited By: |

Updated on: Jan 27, 2024 | 9:31 PM

Share

ಬಳ್ಳಾರಿ, ಜನವರಿ 27: ಶಾಸಕ ಜನಾರ್ದನ ರೆಡ್ಡಿ (Janardhana Reddy) ಬಿಜೆಪಿಗೆ ಬಂದರೆ ಮತ್ತೆ ಪಕ್ಷಕ್ಕೆ ಬಲ ಬರುತ್ತೆ ಎಂದು  ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಬೇರೆ ಪಕ್ಷ ಕಟ್ಟಿದ್ದಕ್ಕೆ ಮಾತ್ರ ಜರ್ನಾದನ ರೆಡ್ಡಿ ವಿರೋಧ ಮಾಡಿದ್ದೇವೆ. ವೈಯಕ್ತಿಕ ದ್ವೇಷವಿಲ್ಲ. ಸಹೋದರ ಜರ್ನಾದನ ರೆಡ್ಡಿ ಮರಳಿ ಬಿಜೆಪಿಗೆ ಬಂದ್ರೆ ಖುಷಿ ಆಗುತ್ತದೆ. ಮುಂಬರುವ ಲೋಕಸಭಾ ಚುನಾವಣೆ ಸೇರಿದಂತೆ, ಜಿಲ್ಲಾ ಪಂಚಾಯತ್​, ತಾಲೂಕು ಪಂಚಾಯತ್​ ಚುನಾವಣೆಗೂ ಪ್ಲಸ್​ ಆಗುತ್ತೆ. ಮಾಜಿ ಸಿಎಂ B.S.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಗೆ ಜರ್ನಾದನ ರೆಡ್ಡಿ ಬರುತ್ತಾರೆ. ದೊಡ್ಡ ದೊಡ್ಡ ನಾಯಕರು ಜರ್ನಾದನ ರೆಡ್ಡಿ ಸಂಪರ್ಕ ಮಾಡಿದ್ದಾರೆ. ಶೀಘ್ರದಲ್ಲಿ ಅವರು ಬಿಜೆಪಿಗೆ ಬರುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

ರೆಡ್ಡಿ ಪಕ್ಷಕ್ಕೆ ಬರುವುದು ಬಿಜೆಪಿಗೆ ಪ್ಲಸ್ ಆಗುತ್ತೆ. ಕೆಆರ್‌ಪಿಪಿ ಪಕ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಸ್ವಲ್ಪ ಹೊಡೆತ ಬಿದ್ದಿದೆ. ಗ್ಯಾರಂಟಿ ಎಫೆಕ್ಟ್​ನಿಂದ ಬಿಜೆಪಿ ಸೋಲಾಯಿತು. ಗ್ಯಾರಂಟಿ ಯೋಜನೆಗಳು ಬೋಗಸ್ ಅಂತ ಜನರಿಗೆ ಗೊತ್ತಾಗಿದೆ. ರೆಡ್ಡಿ ಬಿಜೆಪಿಗೆ ಸೇರಿದರೆ ಕೆಆರ್‌ಪಿಪಿ ಪಕ್ಷವನ್ನ ಮರ್ಜ ಮಾಡಲಾಗುತ್ತೆ ಎಂದರು.

ಇದನ್ನೂ ಓದಿ: ಬಿಜೆಪಿ ಜತೆ ಕೆಆರ್​ಪಿಪಿ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧ: ಕೆಆರ್​ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ

ಮರ್ಜ ಮಾಡುವ ಮೂಲಕವೇ ಶ್ರೀರಾಮುಲು, ಯಡಿಯೂರಪ್ಪ ಪಕ್ಷಕ್ಕೆ ಸೇರಿದ್ದಾರೆ. ಇವರ ಹಾದಿಯಲ್ಲಿ ಜರ್ನಾದನ ರೆಡ್ಡಿ ಪಕ್ಷಕ್ಕೆ ಸೇರುತ್ತಾರೆ. ನಾನು ಜನಾರ್ದನ ರೆಡ್ಡಿ ಸಂಪರ್ಕ ಮಾಡಿಲ್ಲ ಎಂದು ಹೇಳಿದ್ದಾರೆ.

ಮೋದಿ ಪ್ರಧಾನಿಯಾಗುವುದಕ್ಕೆ ಕೆಆರ್​ಪಿಪಿ ಪಕ್ಷ ಹೊಂದಾಣಿಕೆಗೆ ಸಿದ್ಧ: ಶಾಸಕ ಜನಾರ್ದನ ರೆಡ್ಡಿ

ಕೊಪ್ಪಳದಲ್ಲಿ ಶಾಸಕ ಜನಾರ್ದನ ರೆಡ್ಡಿ ಮಾತನಾಡಿದ್ದು, ಕೆಆರ್​ಪಿಪಿ ಪಕ್ಷದ ಜೊತೆ ಬಿಜೆಪಿ ಹೊಂದಾಣಿಕೆಗೆ ಸಿದ್ದವಾಗಿದ್ದರೆ ನಾನೂ ಪ್ರಯಾಣ ಮಾಡುತ್ತೇನೆ. ಹೊಂದಾಣಿಕೆ ಮಾಡಿಕೊಂಡು ಹೋಗೋದಕ್ಕೆ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ. ದೇಶ ಮೋದಿ ಅವರು ಪ್ರಧಾನಿಯಾಗಬೇಕೆಂತಿದೆ. ಮೋದಿ ಪ್ರಧಾನಿಯಾಗುವುದಕ್ಕೆ ಕೆಆರ್​ಪಿಪಿ ಪಕ್ಷ ಹೊಂದಾಣಿಕೆಗೆ ಸಿದ್ಧ. ಕಲ್ಯಾಣ ರಾಜ್ಯ ಪಕ್ಷದಿಂದ ಗೆದ್ದ ಮೇಲೆ ಬಿಜೆಪಿಗೆ ಸಪೋರ್ಟ್ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನಾರ್ದನ ರೆಡ್ಡಿಯನ್ನು ಸಂಪರ್ಕಿಸಿರುವ ಬಿಜೆಪಿ: ಮತ್ತೆ ಬಿಜೆಪಿಗೆ ಸೇರುತ್ತಾರಾ ಕೆಆರ್​ಪಿಪಿ ಸ್ಥಾಪಕ?

ಕೆಆರ್​ಪಿಪಿ ಪಕ್ಷದ ಸಂಸ್ಥಾಪಕ ಹಾಗೂ ಗಂಗಾವತಿ ಶಾಸಕ ಜನಾರ್ದನರೆಡ್ಡಿಯನ್ನ ಬಿಜೆಪಿಗೆ ಕರೆತರುವ ಪ್ರಯತ್ನಗಳು ನಡೆಯುತ್ತಿರುವ ಬಗ್ಗೆ ಮಾಹಿತಿ ಇದೆ. ಬಿಜೆಪಿ ಜತೆಗೆ ಕೆಆರ್​ಪಿಪಿ ವಿಲೀನ ಮಾಡಿ, ಕೊಪ್ಪಳದಿಂದ ರೆಡ್ಡಿಯನ್ನ ಅಖಾಡಕ್ಕೆ ಇಳಿಸುವ ಬಗ್ಗೆ ಚರ್ಚೆ ಇದೆ ಅಂತ ಹೇಳಲಾಗುತ್ತಿದೆ. ಬಹಿರಂಗ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯನ್ನ ರೆಡ್ಡಿ ಹೊಗಳಿದ್ದು ಈ ಬೆಳವಣಿಗೆಗೆ ತಳಕು ಹಾಕಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ
ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ
ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ