AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸುಧಾಕರ್ ಸಿಎಂ ಬೊಮ್ಮಾಯಿಗಿಂತ ದೊಡ್ಡೋರಾ: ಸೋಮಶೇಖರ್ ರೆಡ್ಡಿ ಆಕ್ರೋಶ

ಆರೋಗ್ಯ ಸಚಿವ ಡಾ.ಕೆ.ಸುಧಾಕರ (Dr K Sudhakar) ಅವರಿಗೆ ಕರೆ ಮಾಡಿದ್ದೆ. ಅವರು ನನ್ನ ಕರೆ ಸ್ವೀಕರಿಸಲಿಲ್ಲ ಎಂದು ಸೋಮಶೇಖರ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಸುಧಾಕರ್ ಸಿಎಂ ಬೊಮ್ಮಾಯಿಗಿಂತ ದೊಡ್ಡೋರಾ: ಸೋಮಶೇಖರ್ ರೆಡ್ಡಿ ಆಕ್ರೋಶ
ಶಾಸಕ ಸೋಮಶೇಖರ ರೆಡ್ಡಿ
TV9 Web
| Edited By: |

Updated on:Feb 02, 2022 | 6:48 PM

Share

ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ (MBBS) ಹಾಗೂ ಎಂಡಿ (MD) ಸೀಟ್​ಗಳ ಸಂಖ್ಯೆಯಲ್ಲಿ ಕಡಿತವಾಗಿದೆ ಎಂದು ಶಾಸಕ ಸೋಮಶೇಖರ ರೆಡ್ಡಿ (Somashekhar Reddy) ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಚರ್ಚಿಸಲು ಆರೋಗ್ಯ ಸಚಿವ ಡಾ.ಕೆ.ಸುಧಾಕರ (Dr K Sudhakar) ಅವರಿಗೆ ಕರೆ ಮಾಡಿದ್ದೆ. ಅವರು ನನ್ನ ಕರೆ ಸ್ವೀಕರಿಸಲಿಲ್ಲ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಕೇವಲ 30 ಸೆಕೆಂಡ್​ನಲ್ಲಿ ಕೆಲಸ ಮಾಡಿಕೊಟ್ಟರು. ಇವರೇನೂ ಸಿಎಂಗಿಂತ್ಲೂ ದೊಡ್ಡವರಾ? ಇವರ ವರ್ತನೆ ವಿರುದ್ಧ ಕ್ರಮಕೈಗೊಳ್ಳಬೇಕಿದೆ ಎಂದು ಅವರು ಆಗ್ರಹಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ, ನಮ್ಮ ಸಮಸ್ಯೆ ಹೇಳಿಕೊಂಡೆವು. ಅವರು ತಕ್ಷಣ ಸಮಸ್ಯೆಗೆ ಸ್ಪಂದಿಸಿದರು. ಸಚಿವ ಸುಧಾಕರ ಅವರ ವರ್ತನೆಯ ಬಗ್ಗೆ ನನಗೆ ಆಕ್ಷೇಪವಿದೆ. ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ನಮ್ಮ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಮನವಿ ಮಾಡುತ್ತೇನೆ ಎಂದರು.

ಸಚಿವರ ವಿರುದ್ಧ ವರಿಷ್ಠರಿಗೆ, ಸಿಎಂಗೆ ದೂರು ಕೊಟ್ಟಿರುವುದು ನಿಜ: ರೇಣುಕಾಚಾರ್ಯ ನಾನು 15ಕ್ಕೂ ಹೆಚ್ಚು ದುರಹಂಕಾರಿ ಸಚಿವರ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ದೂರು ಕೊಟ್ಟಿರುವುದು ನಿಜ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು. ನಾನು ಲಿಖಿತ ರೂಪದಲ್ಲಿ ದೂರು ನೀಡಿಲ್ಲ. ಜ.27ರಂದು ಒಬ್ಬ ಸಚಿವರಿಗೆ ನಾನು ಕರೆ ಮಾಡಿದ್ದೆ, ಅವರು ನನ್ನ ಕರೆ ಸ್ವೀಕರಿಸಿರಲಿಲ್ಲ. ಅವರ ಆಪ್ತಸಹಾಯಕರು ಕರೆ ಸ್ವೀಕರಿಸಿ ಸಚಿವರಿಗೆ ಕೊರೊನಾ ಎಂದರು. ನಾನು ಸುಮ್ಮನಾಗಿದ್ದೆ. ಆದರೆ ಮರುದಿ‌ನ ಅವರು ಸಚಿವ ಸಂಪುಟ ಸಭೆಗೆ ಹಾಜರಾಗಿದ್ದರು. ಸಚಿವರು ಈ ರೀತಿಯಾಗಿ ಮಾಡಿರುವುದು ಸರಿಯಲ್ಲ. ನಾನು ಈ ದೂರವಾಣಿ ಕರೆಯ ಬಗ್ಗೆ ಸಹ ಮಾಹಿತಿ ನೀಡಿರುವೆ. ಈ ವಿಚಾರದ ಬಗ್ಗೆ ಬಿಜೆಪಿ ವರಿಷ್ಠರು ನಿರ್ಧರಿಸುತ್ತಾರೆ ಎಂದು ಅವರು ಹೇಳಿದರು.

ಹೊನ್ನಾಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕರ ಮನವಿಗೆ ಸ್ಪಂದಿಸದ ಹಾಗೂ ಕ್ಷೇತ್ರದ ಕೆಲಸ ಮಾಡಿಕೊಡದ ಕೆಲ ದುರಹಂಕಾರಿ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಕೆಲವು ಸಚಿವರು ತಮ್ಮಿಂದಲೇ ಸರ್ಕಾರ ಬಂದಿದೆ. ತಮ್ಮಿಂದಲೇ ಎಲ್ಲವೂ ನಡೆಯುತ್ತದೆ ಎಂಬ ಅಹಂನಲ್ಲಿದ್ದಾರೆ. ನಾನು ಎಲ್ಲ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ. ಕೆಲವು ಸಚಿವರು ನಮ್ಮ ಮನವಿಗೆ ಸ್ಪಂದಿಸಿ ನಮ್ಮನ್ನು ಗೌರವದಿಂದ ಕಾಣುತ್ತಾರೆ. ಕ್ಷೇತ್ರದ ಕೆಲಸಗಳನ್ನು ಮಾಡಿಕೊಡುತ್ತಾರೆ. ಅಂಥವರ ಬಗ್ಗೆ ನಮಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಸಚಿವಾಕಾಂಕ್ಷಿಗಳ ರೇಸ್​ನಲ್ಲಿ ಸೋಮಶೇಖರ್ ರೆಡ್ಡಿ, ಸಂಡೂರಿನ ಕುಮಾರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ! ಇದನ್ನೂ ಓದಿ: ಅಂತಿಮ ವರ್ಷದ ಎಮ್ ಬಿ ಬಿ ಎಸ್ ಪರೀಕ್ಷೆ ಮುಂದೂಡುವಂತೆ ಆರ್ ಜಿ ಯು ಎಚ್ ಎಸ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಪತ್ರ

Published On - 6:47 pm, Wed, 2 February 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ