AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ ಮನಿ ಡಬ್ಲಿಂಗ್ ಸ್ಕ್ಯಾಮ್ ಕೇಸ್​: 10 ದಿನವಾದ್ರೂ ಪತ್ತೆಯಾಗದ ಆರೋಪಿ, ಉದ್ಯಮಿಗಳು, ರಾಜಕಾರಣಿಗಳಿಗೂ ವಂಚನೆ

ಬಳ್ಳಾರಿಯ ಮನಿ ಡಬ್ಲಿಂಗ್ ಸ್ಕ್ಯಾಮ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್ಯಂತರ ಹಣದ ಸಮೇತ ಪರಾರಿಯಾಗಿರುವ ವಂಚಕ ವಿಶ್ವನಾಥ್, 10 ದಿನ ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಕರ್ನಾಟಕ ಮತ್ತು ಆಂಧ್ರ ಸೇರಿದಂತೆ ವಿವಿಧೆಡೆ ಹುಡುಕಾಟ ನಡೆಸಿದರು ಆರೋಪಿಯ ಸುಳಿವಿಲ್ಲ. ಹೀಗಾಗಿ ಸದ್ಯ ಪ್ರಕರಣ ಪೊಲೀಸರಿಗೆ ಸವಾಲಾಗಿದೆ.

ಬಳ್ಳಾರಿಯಲ್ಲಿ ಮನಿ ಡಬ್ಲಿಂಗ್ ಸ್ಕ್ಯಾಮ್ ಕೇಸ್​: 10 ದಿನವಾದ್ರೂ ಪತ್ತೆಯಾಗದ ಆರೋಪಿ, ಉದ್ಯಮಿಗಳು, ರಾಜಕಾರಣಿಗಳಿಗೂ ವಂಚನೆ
ಆರೋಪಿ ಟಿ. ವಿಶ್ವನಾಥ್​
ವಿನಾಯಕ ಬಡಿಗೇರ್​
| Edited By: |

Updated on: Apr 16, 2025 | 1:34 PM

Share

ಬಳ್ಳಾರಿ, ಏಪ್ರಿಲ್​ 16: ಇತ್ತೀಚೆಗೆ ನಗರದಲ್ಲಿ ಮನಿ ಡಬ್ಲಿಂಗ್ ಸ್ಕ್ಯಾಮ್ (Money-Doubling Scam)​​ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಸಾಕಷ್ಟು ಜನರಿಂದ ಬರೋಬ್ಬರಿ 50 ಕೋಟಿಗೂ‌ ಹೆಚ್ಚು ಹಣ ವಂಚನೆ ಮಾಡಿರುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಬ್ರೂಸ್ ಪೇಟೆ ಪೋಲಿಸ್ ಠಾಣೆಯಲ್ಲಿ (Bruce Town Police) ಪ್ರಕರಣ ಕೂಡ ದಾಖಲಾಗಿತ್ತು. ಇದೀಗ ಕೋಟ್ಯಂತರ ಹಣದ ಸಮೇತ ಪರಾರಿಯಾಗಿರುವ ವಂಚಕ ವಿಶ್ವನಾಥ್​ 10 ದಿನ ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಕರ್ನಾಟಕ, ಆಂಧ್ರ ಸೇರಿದಂತೆ ವಿವಿಧೆಡೆ ವಿಶ್ವನಾಥ್‌ಗಾಗಿ ಎರಡು ತಂಡಗಳನ್ನು ರಚಿಸಿ ಪೊಲೀಸ್ ಹುಡುಕಾಡಿದರೂ ಆರೋಪಿ ಸುಳಿವು ಸಿಕ್ಕಿಲ್ಲ. ಇತ್ತ ಹಣ ಕಳೆದುಕೊಂಡ 900ಕ್ಕೂ ಹೆಚ್ಚು ಜನರು ಠಾಣೆಗೆ ಅಲೆದಾಡುತ್ತಿದ್ದಾರೆ.

ಕೋಟ್ಯಂತರ ರೂ ಸಮೇತ ಟಿ.ವಿಶ್ವನಾಥ್ ಪರಾರಿ

ವಾಸವಿ ಹೋಮ್ ನೀಡ್ಸ್ ಕಂಪನಿ ಹೆಸರಲ್ಲಿ ಟಿ.ವಿಶ್ವನಾಥ್​ ಎಂಬಾತನ ಬಳಿ ಕಳೆದ 3 ವರ್ಷಗಳಿಂದ ನೂರಾರು ಜನರು ಹಣ ಹೂಡಿಕೆ ಮಾಡಿದ್ದರು. 75 ಸಾವಿರ ರೂ ಹಣ ಹೂಡಿಕೆ ಮಾಡಿದರೆ ಪ್ರತಿ ತಿಂಗಳು 25% ಲಾಭಾಂಶದ ಜೊತೆಗೆ 1 ಲಕ್ಷ ರೂ ಕೊಡುವುದಾಗಿ ಆಸೆ ಹುಟ್ಟಿಸಿದ್ದ. ಹಣ ದ್ವಿಗುಣಗೊಳಿಸುವುದಾಗಿ ಹೇಳಿದ್ದಕ್ಕೆ ಸಾಲ ಮಾಡಿ, ಚಿನ್ನಾಭರಣ ಅಡವಿಟ್ಟು 900ಕ್ಕೂ ಹೆಚ್ಚು ಜನರು ಹೂಡಿಕೆ ಮಾಡಿದ್ದಾರೆ. ಬಳಿಕ ನೂರಾರು ಕೋಟಿ ರೂ ಹಣದ ಸಮೇತ ಟಿ.ವಿಶ್ವನಾಥ್ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಬಳ್ಳಾರಿಯಲ್ಲಿ ಮತ್ತೊಂದು ಮನಿ ಡಬ್ಲಿಂಗ್ ಸ್ಕ್ಯಾಮ್: ಬರೋಬ್ಬರಿ 50 ಕೋಟಿಗೂ‌ ಹೆಚ್ಚು ವಂಚನೆ!

ಆರೋಪಿ ಟಿ.ವಿಶ್ವನಾಥ್ ಎಂತಹ ಖತರ್ನಾಕ್ ವ್ಯಕ್ತಿ ಎಂದರೆ, ಕೇವಲ ಬಡವರು ಹಾಗೂ ಮಧ್ಯಮ‌ ವರ್ಗದವರಿಗೆ ಅಷ್ಟೇ ಅಲ್ಲದೇ ಶಿಕ್ಷಣ ಸಂಸ್ಥೆಗಳು, ಉದ್ಯಮಿಗಳು ಹಾಗೂ ರಾಜಕಾರಣಿಗಳಿಗೂ ವಂಚಿಸಿದ್ದಾನೆ. ಸದ್ಯ ಪ್ರಕರಣದ ಎ1 ವಿಶ್ವನಾಥ್ ಪತ್ತೆ ಮಾಡುವುದು ಪೊಲೀಸರಿಗೆ ದೊಡ್ಡ ಸವಾಲಾಗಿದೆ. ಆರೋಪಿಯ ಮೂಲ ವಿಳಾಸ ಪತ್ತೆಯಾಗದ ಹಿನ್ನೆಲೆ ಜನರು ಪರದಾಡುವಂತಾಗಿದೆ. ಇದೆಲ್ಲದರ ಮಧ್ಯೆ ಆರೋಪಿ ವಿಶ್ವನಾಥ್​ ತೆಲುಗು ಹಾಡಿಗೆ ಖುಷಿಯಿಂದಲೇ ಸ್ಟೇಪ್ ಹಾಕಿರುವ ವಿಡಿಯೋವೊಂದು ವೈರಲ್ ಆಗಿದೆ.

ಇದನ್ನೂ ಓದಿ: ಮಾರಕಾಸ್ತ್ರ, ಪಿಸ್ತೂಲ್ ಹಿಡಿದು ಮನೆಗೆ ನುಗ್ಗುತ್ತಾರೆ ಮುಸುಕುಧಾರಿ ಗ್ಯಾಂಗ್: ಆತಂಕದಲ್ಲಿ ಹಾಸನ ಜನತೆ

ಒಟ್ಟಾರೆ ಈ ವಿಶ್ವನಾಥ್​ ವಂಚನೆ ಪ್ರಕರಣವನ್ನು ನೋಡುತ್ತಿದ್ದರೆ, ಉಂಡು ಹೋದ ಕೊಂಡು ಹೋದ ಸಿನಿಮಾ ನೆನಪಾಗತ್ತೆ. ಆತನನ್ನು ಆದಷ್ಟು ಬೇಗ ಬಂಧಿಸುವ ಮೂಲಕ ಪೋಲಿಸರು ಅಮಾಯಕರ ನೆರವಿಗೆ ಬರಬೇಕಿದೆ. ಅಷ್ಟೇ ಅಲ್ಲದೆ ಸರ್ಕಾರ ಈ ಬಗ್ಗೆ ಎಸ್​ಐಟಿ ತನಿಖೆ ಮಾಡಿಸಬೇಕು ಎನ್ನುವ ಒತ್ತಾಯ ಕೂಡ ಕೇಳಿ ಬರುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ