AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nadoja Award 2022: ಹಂಪಿ ಕನ್ನಡ ವಿವಿಯಿಂದ ಮೂವರು ಗಣ್ಯರಿಗೆ ನಾಡೋಜ ಗೌರವ

ಸಾಹಿತಿಗಳಾದ ಗೊ.ರು. ಚನ್ನಬಸಪ್ಪ, ಭಾಷ್ಯಂ ಸ್ವಾಮಿ ಹಾಗೂ ಪ್ರೊ.ಟಿ.ವಿ. ವೆಂಕಟಾಚಲ ಶಾಸ್ತ್ರಿ ಅವರನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಗೌರವ ಪದವಿಗೆ ಆಯ್ಕೆ ಮಾಡಲಾಗಿದೆ.

Nadoja Award 2022: ಹಂಪಿ ಕನ್ನಡ ವಿವಿಯಿಂದ ಮೂವರು ಗಣ್ಯರಿಗೆ ನಾಡೋಜ ಗೌರವ
ಭಾಷ್ಯಂ ಸ್ವಾಮಿ, ಗೊ.ರು. ಚನ್ನಬಸಪ್ಪ ಹಾಗೂ ಪ್ರೊ.ಟಿ.ವಿ. ವೆಂಕಟಾಚಲ ಶಾಸ್ತ್ರಿ
Follow us
TV9 Web
| Updated By: ಆಯೇಷಾ ಬಾನು

Updated on: Apr 07, 2022 | 3:51 PM

ವಿಜಯನಗರ: ಸಾಹಿತಿಗಳಾದ ಗೊ.ರು. ಚನ್ನಬಸಪ್ಪ, ಭಾಷ್ಯಂ ಸ್ವಾಮಿ ಹಾಗೂ ಪ್ರೊ.ಟಿ.ವಿ. ವೆಂಕಟಾಚಲ ಶಾಸ್ತ್ರಿ ಅವರನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಗೌರವ ಪದವಿಗೆ ಆಯ್ಕೆ ಮಾಡಲಾಗಿದೆ. ಹಂಪಿ ಕನ್ನಡ ವಿವಿಯ ನಾಡೋಜ ಗೌರವಕ್ಕೆ ಜಿ. ಕೃಷ್ಣಪ್ಪ, ಮಲೆಯೂರು ಗುರುಸ್ವಾಮಿ, ಡಾ ಎಸ್.ಸಿ. ಶರ್ಮಾ, ಗುರುಲಿಂಗ ಕಾಪಸೆ, ಡಾ. ಶಿವಾನಂದ ನಾಯಕ, ರಮೇಶ ಎಂ.ಕೆ. ನಾಸೀರ್ ಅಹಮ್ಮದ್ ಸೇರಿದಂತೆ ಒಟ್ಟು ಹತ್ತು ಜನರ ಹೆಸರು ನಾಡೋಜಕ್ಕೆ ಶಿಫಾರಸು ಮಾಡಲಾಗಿತ್ತು. ಅಂತಿಮವಾಗಿ ರಾಜ್ಯಪಾಲರು ಮೂವರ ಹೆಸರಿಗೆ ಅಂಕಿತ ಹಾಕಿದ್ದಾರೆ ಎಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಸ.ಚಿ.ರಮೇಶ ತಿಳಿಸಿದ್ದಾರೆ.

ಏಪ್ರಿಲ್ 12 ರಂದು ಸಂಜೆ 5.30 ಕ್ಕೆ ಕನ್ನಡ ವಿಶ್ವವಿದ್ಯಾಲಯದ ನವರಂಗ ಬಯಲು ರಂಗಮಂದಿರದಲ್ಲಿ ನಡೆಯಲಿರುವ ನುಡಿಹಬ್ಬದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಾಡೋಜ ಪ್ರದಾನ ಮಾಡುವರು. ಚಿತ್ರದುರ್ಗದ ಮುರುಘಾ ಶರಣರು, ಪತ್ರಕರ್ತ ಪದ್ಮರಾಜ ದಂಡಾವತಿ, ಕೆಂಪೇಗೌಡ ಅಧ್ಯಯನ ಕೇಂದ್ರದ ಮುಖ್ಯಸ್ಥ ಬಿ.ಎಸ್. ಪುಟ್ಟಸ್ವಾಮಿ, ಪರಿಸರ ಹೋರಾಟಗಾರ ಕಲ್ಕುಳಿ ವಿಠಲ ಹೆಗಡೆ ಅವರಿಗೆ ಡಿ.ಲಿಟ್ ಹಾಗೂ 1387 ವಿದ್ಯಾರ್ಥಿಗಳಿಗೆ ವಿವಿಧ ಪದವಿಯನ್ನು ಉನ್ನತ ಶಿಕ್ಷಣ ಸಚಿವ ಡಾ ಸಿ.ಎನ್ . ಅಶ್ವತ್ಥನಾರಾಯಣ ಪ್ರದಾನ ಮಾಡಲಿದ್ದಾರೆ. ಆಂಧ್ರ ಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ತೇಜಸ್ವಿ ವಿ. ಕಟ್ಟಿಮನಿ ಘಟಿಕೋತ್ಸವ ಭಾಷಣ ಮಾಡುವರು ಎಂದು ವಿವರಿಸಿದರು.

ನಾಡೋಜ ಗೌರವಕ್ಕೆ ಇದೆ ಮಹತ್ವ ರಾಜ್ಯದ ಹಲವು ವಿಶ್ವ ವಿದ್ಯಾಲಯಗಳು ಪ್ರತಿ ವರ್ಷ ಘಟಿಕೋತ್ಸವದ ವೇಳೆ ಗಣ್ಯರು, ಸಾಹಿತಿಗಳು, ಚಲನಚಿತ್ರರಂಗದ ಸಾಧಕರು, ಸಮಾಜ ಕಾರ್ಯ ಕೈಗೊಂಡವರಿಗೆ ಡಾಕ್ಟರೇಟ್ ಗೌರವ ನೀಡಿ ಪ್ರದಾನ ಮಾಡಿ ಗೌರವಿಸುತ್ತವೆ. ಆದ್ರೆ 1991ರ ನವಂಬರ್ 1 ರಂದು ರಾಜೋತ್ಸವದಂದು ಸ್ಪಾಪನೆಯಾಗಿರುವ. ರಾಜ್ಯದ ಎಕೈಕ ಕನ್ನಡ ವಿಶ್ವ ವಿದ್ಯಾಲಯವಾಗಿರುವ ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿ ಡಾಕ್ಟರೇಟ್ ಪ್ರದಾನದ ಬದಲಾಗಿ ನಾಡೋಜ ಗೌರವ ನೀಡಿ ಗಣ್ಯರನ್ನ ಗೌರವಿಸಲಾಗುತ್ತದೆ.

ಹಂಪಿ ಕನ್ನಡ ವಿಶ್ವ ವಿದ್ಯಾಲಯವು ಪ್ರತಿ ವರ್ಷ ಆಚರಿಸುವ ನುಡಿಹಬ್ಬದಲ್ಲಿ ಕರ್ನಾಟಕದ ಜನ, ಭಾಷೆ,ಕಲೆ, ಸಂಸ್ಕೃತಿಗಳ ಏಳಿಗೆಗಾಗಿ ದುಡಿದ ಮಹನೀಯರನ್ನ ಗುರುತಿಸಿ ಅವರಿಗೆ ನಾಡೋಜ ಎಂಬ ಗೌರವ ಪದವಿಯನ್ನ ನೀಡುತ್ತ ಬಂದಿದೆ. ಆದಿ ಕವಿ ಪಂಪನಿಗೆ ಸಂಬಂಧಿಸಿದ ನಾಡೋಜ ಎಂಬ ಶಬ್ಧವು ಕರ್ನಾಟಕದ ಪರಂಪರೆಯ ಸ್ವಾತಂತ್ರ್ಯವನ್ನು, ನಾಡನ್ನು ಕಟ್ಟಿದವರು ಎಂಬ ಮನ್ನಣೆಯನ್ನು ಸೂಚಿಸುವಂಥದ್ದಾಗಿದೆ.

ವಿಜಯನಗರ ಜಿಲ್ಲೆಯ ಕಮಲಾಪುರದಲ್ಲಿರುವ ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿ ಇದೂವರೆಗೂ ನುಡಿಹಬ್ಬಗಳು ಜರುಗಿದ್ದು. ಇಲ್ಲಿಯವರೆಗೂ ಒಟ್ಟು 91ಗಣ್ಯರಿಗೆ ನಾಡೋಜ ಗೌರವ ಪ್ರದಾನ ಮಾಡಿ ಗೌರವಿಸಿದೆ. ಕುವೆಂಪು, ಗಂಗೂಬಾಯಿ ಹಾನಗಲ್, ಪಾಟೀಲ ಪುಟ್ಟಪ್ಪ, ಶಿವರಾಂ ಕಾರಂತ, ಪಂಡಿತ ಪುಟ್ಟರಾಜ ಗವಾಯಿ, ಡಾಕ್ಟರ್ ರಾಜಕುಮಾರ್, ಚಂದ್ರಶೇಖರ ಕಂಬಾರ್, ಪ್ರೋ ಕೆಎಸ್ ನಿಸಾರ್ ಅಹ್ಮಮದ್, ಡಾ ಸರೋಜಿನಿ ಮಹಿಷಿ, ನ್ಯಾಯಮೂರ್ತಿ ಎಸ್ ಆರ್ ನಾಯಕ, ಏಣಗಿ ಬಾಳಪ್ಪ, ವಿರೇಂದ್ರ ಹೆಗಡೆ, ಎಸ್ ಎಲ್ ಬೈರಪ್ಪ ಸೇರಿದಂತೆ ನಾಡಿನ 91 ಗಣ್ಯರಿಗೆ ಇದೂವರೆಗೂ ನಾಡೋಜ ಪದವಿ ನೀಡಿ ಗೌರವಿಸಲಾಗಿದೆ.

ವರದಿ: ವೀರಪ್ಪ ದಾನಿ, ಟಿವಿ9 ಬಳ್ಳಾರಿ.

ಇದನ್ನೂ ಓದಿ: ಬ್ಯಾಂಕ್ ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಮ್ಮು ಕಾಶ್ಮೀರದ ಮಾಜಿ ಸಿಎಂ ಒಮರ್ ಅಬ್ದುಲ್ಲಾ ವಿಚಾರಣೆ ನಡೆಸಿದ ಇಡಿ

ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ