AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯ ಬಿಮ್ಸ್​ನಲ್ಲಿ ಬಾಣಂತಿಯರ ಸರಣಿ ಸಾವಿನ ಬಳಿಕ ಮತ್ತೊಂದು ಸಾವು!

ಗಂಡು ಮಗು ಜನಿಸಿತು ಎಂದು ಎಲ್ಲರೂ ಸಂತಸದಲ್ಲಿದ್ದರು. ಆದ್ರೆ, ಅರ್ಧ ಗಂಟೆಯಲ್ಲೇ ಬಡಿದ ಕಂದನ ಸಾವಿನ ಸುದ್ದಿ ಎಲ್ಲರನ್ನೂ ಆಘಾತಕ್ಕೆ ದೂಡಿದೆ. ಬಳ್ಳಾರಿಯ ಬಿಮ್ಸ್​ನಲ್ಲಿ ಬಾಣಂತಿಯರ ಸರಣಿ ಸಾವಿನ ಬಳಿಕ ಈಗ ಮಗು ಮೃತಪಟ್ಟಿದೆ.

ಬಳ್ಳಾರಿಯ ಬಿಮ್ಸ್​ನಲ್ಲಿ ಬಾಣಂತಿಯರ ಸರಣಿ ಸಾವಿನ ಬಳಿಕ ಮತ್ತೊಂದು ಸಾವು!
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ರಮೇಶ್ ಬಿ. ಜವಳಗೇರಾ

Updated on: Dec 05, 2024 | 7:50 PM

ಬಳ್ಳಾರಿ, (ಡಿಸೆಂಬರ್ 05): ಬಳ್ಳಾರಿಯ ಬಿಮ್ಸ್​ನಲ್ಲಿ ಬಾಣಂತಿಯರ ಸರಣಿ ಸಾವಿನ ಬಳಿಕ ಮತ್ತೊಂದು ಆಘಾತ ಎದುರಾಗಿದೆ.. ಐವರು ಬಾಣಂತಿಯರ ಸಾವಿನ ಪ್ರಕರಣ ಮಾಸುವ ಮುನ್ನವೇ ವೈದ್ಯರ ನಿರ್ಲಕ್ಷಕ್ಕೆ ಇಂದು ಶಿಶು ಸಾವನ್ನಪ್ಪಿದೆ‌‌.. ನಾರ್ಮಲ್ ಹೆರಿಗೆಗೆ ಅಂತಾ ದಾಖಲಾಗಿದ್ದ ಗರ್ಭಿಣಿಗೆ ವೈದ್ಯರು ಏಕಾಏಕಿ ಸಿಜರಿನ್ ಮಾಡಿದ್ದರು ಜೊತೆಗೆ ಮಗು ಕೂಡ ಚೆನ್ನಾಗಿದೆ ಅಂತಾ ಹೇಳಿದ್ರು, ಆದ್ರೆ ಅರ್ಧ ಗಂಟೆ ಬಿಟ್ಟು ಮಗು ಸಾವಾಗಿದೆ ಅಂತಾ ಹೇಳಿದ್ದಾರೆ ಹೀಗಾಗಿ ಪೋಷಕರ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಬ್ಬರಲ್ಲ ಇಬ್ಬರಲ್ಲ ನಾಲ್ವರು ಬಾಣಂತಿಯರು ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬಿಮ್ಸ್​ನಲ್ಲಿ ಓರ್ವ ಬಾಣಂತಿ ಉಸಿರು ಚೆಲ್ಲಿದ್ದಾರೆ. ಎರಡ್ಮೂರು ವಾರಗಳ ಆಂತರದಲ್ಲಿ ಐವರು ಬಾಣಂತಿಯರ ಸಾವು ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿದೆ.. ಐವಿ ಫ್ಲೂಯೆಡ್​​ನಿಂದಲೇ ಸರಣಿ ಸಾವು ನಡೆದಿದೆ ಎನ್ನಲಾಗುತ್ತಿದ್ದು, ಈ ಬಗ್ಗೆ ತನಿಖೆ ನಡೆದಿದೆ. ಇದರ ನಡುವೆ ಇಂದು(ಡಿಸೆಂಬರ್ 05) ಬಿಮ್ಸ್​​ನಲ್ಲಿ ಹಸುಗೂಸು ಉಸಿರು ಚೆಲ್ಲಿದೆ.

ಇದನ್ನೂ ಓದಿ: ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ: ಐವಿ ಗ್ಲುಕೋಸ್​ನಲ್ಲಿ ಆಘಾತಕಾರಿ ಅಂಶ ಪತ್ತೆ

ಸಿರಗುಪ್ಪ ಬಳಿಯ ಸಿರಗೇರದ ಗಂಗೋತ್ರಿ ಎನ್ನುವರು ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಚೆನ್ನಾಗಿದೆ ಎಂದು ವೈದ್ಯುರ ಹೇಳಿದ್ದಾರೆ. ಆದ್ರೆ, ಇದಾದ ಅರ್ಧಗಂಟೆಯಲ್ಲಿ ಮಗು ಸಾವನ್ನಪ್ಪಿದೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಅಂತ ಶಿಶುವಿನ ಸಂಬಂಧಿಕರು ರೊಚ್ಚಿಗೆದ್ದಾರೆ.

ಗಂಗೋತ್ರಿಗೆ ಈ ಹಿಂದೆ ನಾರ್ಮಲ್ ಡೆಲಿವರಿ ಆಗಿದ್ದರಿಂದ ಈ ಬಾರಿಯೂ ನಾರ್ಮಲ್ ಆಗುತ್ತೆ ಎಂದು ವೈದ್ಯರು ಹೇಳಿದ್ದರು. ತಡ ರಾತ್ರಿಯೇ ಗಂಗೋತ್ರಿಗೆ ಪೇನ್​ ಶುರುವಾಗಿದ್ದು, ಬೆಳಗ್ಗೆ ಒದ್ದಾಡಲು ಆರಂಭಿಸಿದ್ದಾರೆ. ಅಲ್ಲಿತನಕ ಸುಮ್ಮನಿದ್ದ ವೈದ್ಯರು ಕೂಡಲೇ ಸಿಜೆರಿಯನ್ ವಾರ್ಡ್​​ಗೆ ಶಿಫ್ಟ್​ ಮಾಡಿದ್ದಾರೆ. ಬಳಿಕ ಗಂಡು ಮಗು ಜನಿಸಿದ್ದು, ತಾಯಿ-ಮಗು ಆರೋಗ್ಯವಾಗಿದೆ ಅಂತೇಳಿದ್ದಾರೆ. ಇದಾದ ಅರ್ಧಗಂಟೆಯಲ್ಲೇ ಮಗು ಆರೋಗ್ಯದಲ್ಲಿ ಏರುಪೇರಾಗಿ ಸಾವಾಗಿದೆ ಅಂತೇಳಿದ್ರಂತೆ.

ತಾಯಿ ಗರ್ಭದಲ್ಲಿ ಮಗು ಮಲ ತಿಂದಿದೆ. ಇದರಿಂದ ಶಾಸಕೋಶಕ್ಕೆ ತೊಂದರೆ ಆಗಿ ಮಗು ಮೃತಪಟ್ಟಿದೆ. ಇದರಲ್ಲಿ ವೈದ್ಯರ ನಿರ್ಲಕ್ಷ್ಯ ಇಲ್ಲ ಎಂದು ವೈದ್ಯರ ಸಬೂಬು. ಇತ್ತ ಮಗುವನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಗಂಡು ಮಗು ಜನಿಸಿತು ಎಂದು ಎಲ್ಲರೂ ಸಂತಸದಲ್ಲಿದ್ರು. ಆದ್ರೆ, ಅರ್ಧ ಗಂಟೆಯಲ್ಲೇ ಬಡಿದ ಕಂದನ ಸಾವಿನ ಸುದ್ದಿ ಎಲ್ಲರನ್ನೂ ಆಘಾತಕ್ಕೆ ದೂಡಿದೆ.. ತನಿಖೆಯಿಂದ ಈ ಸಾವಿನ ಅಸಲಿಯತ್ತು ಬಯಲಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
ಒಂದು 'ಪದ' ಬದಲಾವಣೆಗೆ 18 ವರ್ಷ ಕಾದ RCBಯ ಮೂವರು ದಿಗ್ಗಜರು
ಒಂದು 'ಪದ' ಬದಲಾವಣೆಗೆ 18 ವರ್ಷ ಕಾದ RCBಯ ಮೂವರು ದಿಗ್ಗಜರು
ಗೃಹಲಕ್ಷ್ಮಿ ಹಣದಲ್ಲಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ
ಗೃಹಲಕ್ಷ್ಮಿ ಹಣದಲ್ಲಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ
ಯಮಧರ್ಮನಾಗಿ ಪ್ರತ್ಯಕ್ಷವಾದ ರಾಯಚೂರಿನ ಆರ್​ಸಿಬಿ ಅಭಿಮಾನಿ! ವಿಡಿಯೋ ವೈರಲ್
ಯಮಧರ್ಮನಾಗಿ ಪ್ರತ್ಯಕ್ಷವಾದ ರಾಯಚೂರಿನ ಆರ್​ಸಿಬಿ ಅಭಿಮಾನಿ! ವಿಡಿಯೋ ವೈರಲ್
VIDEO: ಹಾದೀಲಿ ಬೀದಿಲಿ, ನಡು ರೋಡಲ್ಲಿ... ಕುಣಿದು ಕುಪ್ಪಳಿಸಿದ RCB ಫ್ಯಾನ್
VIDEO: ಹಾದೀಲಿ ಬೀದಿಲಿ, ನಡು ರೋಡಲ್ಲಿ... ಕುಣಿದು ಕುಪ್ಪಳಿಸಿದ RCB ಫ್ಯಾನ್
ಆರ್​ಸಿಬಿ ಐಪಿಎಲ್ ಟ್ರೋಫಿ ಗೆದ್ದ ಬೆನ್ನಲ್ಲೇ ಬೆಂಗಳೂರಿನಲ್ಲಿ ದೀಪಾವಳಿ!
ಆರ್​ಸಿಬಿ ಐಪಿಎಲ್ ಟ್ರೋಫಿ ಗೆದ್ದ ಬೆನ್ನಲ್ಲೇ ಬೆಂಗಳೂರಿನಲ್ಲಿ ದೀಪಾವಳಿ!
VIDEO: ನಮ್ಮ ಕ್ಯಾಪ್ಟನ್ಸ್ ಬಾಯಲ್ಲಿ 'ನಮ್ದು' ಕನ್ನಡ
VIDEO: ನಮ್ಮ ಕ್ಯಾಪ್ಟನ್ಸ್ ಬಾಯಲ್ಲಿ 'ನಮ್ದು' ಕನ್ನಡ