AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯ ಬಿಮ್ಸ್​ನಲ್ಲಿ ಬಾಣಂತಿಯರ ಸರಣಿ ಸಾವಿನ ಬಳಿಕ ಮತ್ತೊಂದು ಸಾವು!

ಗಂಡು ಮಗು ಜನಿಸಿತು ಎಂದು ಎಲ್ಲರೂ ಸಂತಸದಲ್ಲಿದ್ದರು. ಆದ್ರೆ, ಅರ್ಧ ಗಂಟೆಯಲ್ಲೇ ಬಡಿದ ಕಂದನ ಸಾವಿನ ಸುದ್ದಿ ಎಲ್ಲರನ್ನೂ ಆಘಾತಕ್ಕೆ ದೂಡಿದೆ. ಬಳ್ಳಾರಿಯ ಬಿಮ್ಸ್​ನಲ್ಲಿ ಬಾಣಂತಿಯರ ಸರಣಿ ಸಾವಿನ ಬಳಿಕ ಈಗ ಮಗು ಮೃತಪಟ್ಟಿದೆ.

ಬಳ್ಳಾರಿಯ ಬಿಮ್ಸ್​ನಲ್ಲಿ ಬಾಣಂತಿಯರ ಸರಣಿ ಸಾವಿನ ಬಳಿಕ ಮತ್ತೊಂದು ಸಾವು!
ವಿನಾಯಕ ಬಡಿಗೇರ್​
| Edited By: |

Updated on: Dec 05, 2024 | 7:50 PM

Share

ಬಳ್ಳಾರಿ, (ಡಿಸೆಂಬರ್ 05): ಬಳ್ಳಾರಿಯ ಬಿಮ್ಸ್​ನಲ್ಲಿ ಬಾಣಂತಿಯರ ಸರಣಿ ಸಾವಿನ ಬಳಿಕ ಮತ್ತೊಂದು ಆಘಾತ ಎದುರಾಗಿದೆ.. ಐವರು ಬಾಣಂತಿಯರ ಸಾವಿನ ಪ್ರಕರಣ ಮಾಸುವ ಮುನ್ನವೇ ವೈದ್ಯರ ನಿರ್ಲಕ್ಷಕ್ಕೆ ಇಂದು ಶಿಶು ಸಾವನ್ನಪ್ಪಿದೆ‌‌.. ನಾರ್ಮಲ್ ಹೆರಿಗೆಗೆ ಅಂತಾ ದಾಖಲಾಗಿದ್ದ ಗರ್ಭಿಣಿಗೆ ವೈದ್ಯರು ಏಕಾಏಕಿ ಸಿಜರಿನ್ ಮಾಡಿದ್ದರು ಜೊತೆಗೆ ಮಗು ಕೂಡ ಚೆನ್ನಾಗಿದೆ ಅಂತಾ ಹೇಳಿದ್ರು, ಆದ್ರೆ ಅರ್ಧ ಗಂಟೆ ಬಿಟ್ಟು ಮಗು ಸಾವಾಗಿದೆ ಅಂತಾ ಹೇಳಿದ್ದಾರೆ ಹೀಗಾಗಿ ಪೋಷಕರ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಬ್ಬರಲ್ಲ ಇಬ್ಬರಲ್ಲ ನಾಲ್ವರು ಬಾಣಂತಿಯರು ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬಿಮ್ಸ್​ನಲ್ಲಿ ಓರ್ವ ಬಾಣಂತಿ ಉಸಿರು ಚೆಲ್ಲಿದ್ದಾರೆ. ಎರಡ್ಮೂರು ವಾರಗಳ ಆಂತರದಲ್ಲಿ ಐವರು ಬಾಣಂತಿಯರ ಸಾವು ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿದೆ.. ಐವಿ ಫ್ಲೂಯೆಡ್​​ನಿಂದಲೇ ಸರಣಿ ಸಾವು ನಡೆದಿದೆ ಎನ್ನಲಾಗುತ್ತಿದ್ದು, ಈ ಬಗ್ಗೆ ತನಿಖೆ ನಡೆದಿದೆ. ಇದರ ನಡುವೆ ಇಂದು(ಡಿಸೆಂಬರ್ 05) ಬಿಮ್ಸ್​​ನಲ್ಲಿ ಹಸುಗೂಸು ಉಸಿರು ಚೆಲ್ಲಿದೆ.

ಇದನ್ನೂ ಓದಿ: ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ: ಐವಿ ಗ್ಲುಕೋಸ್​ನಲ್ಲಿ ಆಘಾತಕಾರಿ ಅಂಶ ಪತ್ತೆ

ಸಿರಗುಪ್ಪ ಬಳಿಯ ಸಿರಗೇರದ ಗಂಗೋತ್ರಿ ಎನ್ನುವರು ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಚೆನ್ನಾಗಿದೆ ಎಂದು ವೈದ್ಯುರ ಹೇಳಿದ್ದಾರೆ. ಆದ್ರೆ, ಇದಾದ ಅರ್ಧಗಂಟೆಯಲ್ಲಿ ಮಗು ಸಾವನ್ನಪ್ಪಿದೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಅಂತ ಶಿಶುವಿನ ಸಂಬಂಧಿಕರು ರೊಚ್ಚಿಗೆದ್ದಾರೆ.

ಗಂಗೋತ್ರಿಗೆ ಈ ಹಿಂದೆ ನಾರ್ಮಲ್ ಡೆಲಿವರಿ ಆಗಿದ್ದರಿಂದ ಈ ಬಾರಿಯೂ ನಾರ್ಮಲ್ ಆಗುತ್ತೆ ಎಂದು ವೈದ್ಯರು ಹೇಳಿದ್ದರು. ತಡ ರಾತ್ರಿಯೇ ಗಂಗೋತ್ರಿಗೆ ಪೇನ್​ ಶುರುವಾಗಿದ್ದು, ಬೆಳಗ್ಗೆ ಒದ್ದಾಡಲು ಆರಂಭಿಸಿದ್ದಾರೆ. ಅಲ್ಲಿತನಕ ಸುಮ್ಮನಿದ್ದ ವೈದ್ಯರು ಕೂಡಲೇ ಸಿಜೆರಿಯನ್ ವಾರ್ಡ್​​ಗೆ ಶಿಫ್ಟ್​ ಮಾಡಿದ್ದಾರೆ. ಬಳಿಕ ಗಂಡು ಮಗು ಜನಿಸಿದ್ದು, ತಾಯಿ-ಮಗು ಆರೋಗ್ಯವಾಗಿದೆ ಅಂತೇಳಿದ್ದಾರೆ. ಇದಾದ ಅರ್ಧಗಂಟೆಯಲ್ಲೇ ಮಗು ಆರೋಗ್ಯದಲ್ಲಿ ಏರುಪೇರಾಗಿ ಸಾವಾಗಿದೆ ಅಂತೇಳಿದ್ರಂತೆ.

ತಾಯಿ ಗರ್ಭದಲ್ಲಿ ಮಗು ಮಲ ತಿಂದಿದೆ. ಇದರಿಂದ ಶಾಸಕೋಶಕ್ಕೆ ತೊಂದರೆ ಆಗಿ ಮಗು ಮೃತಪಟ್ಟಿದೆ. ಇದರಲ್ಲಿ ವೈದ್ಯರ ನಿರ್ಲಕ್ಷ್ಯ ಇಲ್ಲ ಎಂದು ವೈದ್ಯರ ಸಬೂಬು. ಇತ್ತ ಮಗುವನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಗಂಡು ಮಗು ಜನಿಸಿತು ಎಂದು ಎಲ್ಲರೂ ಸಂತಸದಲ್ಲಿದ್ರು. ಆದ್ರೆ, ಅರ್ಧ ಗಂಟೆಯಲ್ಲೇ ಬಡಿದ ಕಂದನ ಸಾವಿನ ಸುದ್ದಿ ಎಲ್ಲರನ್ನೂ ಆಘಾತಕ್ಕೆ ದೂಡಿದೆ.. ತನಿಖೆಯಿಂದ ಈ ಸಾವಿನ ಅಸಲಿಯತ್ತು ಬಯಲಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vinayak Badiger
Vinayak Badiger
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ