AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರುಬಿಸಿಲಿಗೆ ಬಳಲಿದ ಗಣಿನಾಡು ಬಳ್ಳಾರಿ.. ಡಿ ಹೈಡ್ರೇಷನ್​ನಿಂದ ನವಜಾತ ಶಿಶುಗಳು ಅಸ್ವಸ್ಥ

ಗಣಿನಾಡು ಬಳ್ಳಾರಿಯಲ್ಲಿ ಕೆಂಡದಂತ ಬಿಸಿಲು. ಸೂರ್ಯನ ಪ್ರತಾಪಕ್ಕೆ ಜನ ಹೈರಾಣಾಗಿದ್ದಾರೆ. ಭಾರಿ ಬಿಸಿಲಿನಿಂದಾಗಿ ನವಜಾತ ಶಿಶುಗಳು ಮಕ್ಕಳು ಬಸವಳಿದಿದ್ದಾರೆ. ಇದೇ ಕಾರಣಕ್ಕೆ ನವಜಾತ ಶಿಶುಗಳಲ್ಲಿ ಡೀಹೈಡ್ರೇಷನ್ ಉಂಟಾಗ್ತಿದೆ.

ಬಿರುಬಿಸಿಲಿಗೆ ಬಳಲಿದ ಗಣಿನಾಡು ಬಳ್ಳಾರಿ.. ಡಿ ಹೈಡ್ರೇಷನ್​ನಿಂದ ನವಜಾತ ಶಿಶುಗಳು ಅಸ್ವಸ್ಥ
ಡಿ ಹೈಡ್ರೇಷನ್​ನಿಂದ ನವಜಾತ ಶಿಶುಗಳು ಅಸ್ವಸ್ಥ
ಆಯೇಷಾ ಬಾನು
|

Updated on: Apr 13, 2021 | 8:48 AM

Share

ಗಣಿನಾಡು ಬಳ್ಳಾರಿಯಲ್ಲಿ ಈಗಾಗಲೇ 40 ಡಿಗ್ರಿಗೂ ಹೆಚ್ಚು ಉಷ್ಣಾಂಶ ದಾಖಲಾಗುತ್ತಿದೆ. ಬಿರು ಬಿಸಿಲಿನಿಂದಾಗಿ ಭೂಮಿ ಕಾದ ಕಬ್ಬಿಣವಾಗಿದೆ. ಹೀಗಾಗಿಯೇ ಬಿಸಿಲಿನ ಎಫೆಕ್ಟ್ ನವಜಾತ ಶಿಶುಗಳ ಮೇಲೆ ಹಾಗೂ ಚಿಕ್ಕಚಿಕ್ಕ ಮಕ್ಕಳ ಮೇಲೆ ಆಗುತ್ತಿದೆ. ಪೋಷಕರು ಸಾಕಷ್ಟು ಮುಂಜಾಗ್ರತೆ ವಹಿಸಿದ್ರೂ ಬಿಸಿಲಿನಿಂದ ಶಿಶುಗಳನ್ನು ರಕ್ಷಣೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಬಳ್ಳಾರಿಯಲ್ಲಿ ಭಾರಿ ಬಿಸಿಲಿನ ಪರಿಣಾಮ ನವಜಾತ ಶಿಶುಗಳು ನಿರ್ಜಲೀಕರಣ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಾಹಿತಿ ಪ್ರಕಾರ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ನಿತ್ಯ 6ರಿಂದ 7 ಶಿಶುಗಳು ಬಿಸಿಲಿನ ಸಮಸ್ಯೆಯಿಂದ ಚಿಕಿತ್ಸೆಗೋಸ್ಕರ ದಾಖಲಾಗುತ್ತಿದ್ದಾರಂತೆ. ವಿಮ್ಸ್​ನ ನವಜಾತ ಶಿಶುಗಳ ಸ್ಪೇಷಲ್ ಕೇರ್ ಘಟಕದಲ್ಲಿ ನವಜಾತ ಶಿಶುಗಳಿಗೆ ಸಮರ್ಪಕ ಚಿಕಿತ್ಸೆ ನೀಡಲಾಗುತ್ತಿದೆ. 20 ದಿನದಲ್ಲಿ 70 ಕ್ಕೂ ಹೆಚ್ಚು ನವಜಾತ ಶಿಶುಗಳಿಗೆ ಚಿಕಿತ್ಸೆ ನೀಡಲಾಗಿದೆ. ಬಿಸಿಲಿನ ಪ್ರಮಾಣ ಜಾಸ್ತಿಯಾಗಿದ್ದರಿಂದ ಇನ್ನಷ್ಟು ಶಿಶುಗಳು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇನ್ನು ಮಕ್ಕಳಲ್ಲಿ ಈ ರೀತಿ ಸಮಸ್ಯೆ ಎದುರಾಗಿರುವುದು ಬಳ್ಳಾರಿ ಜಿಲ್ಲೆಯ ಪೋಷಕರಲ್ಲಿ ಆತಂಕ ಮೂಡಿಸಿದೆ. ಬಿಸಿಲು ಮತ್ತಷ್ಟು ಹೆಚ್ಚಾದರೆ ಪರಿಸ್ಥಿತಿ ಏನಪ್ಪಾ ಅನ್ನೋ ಭಯವೂ ಪೋಷಕರನ್ನ ಕಾಡುತ್ತಿದೆ. ಮಕ್ಕಳು ಮಾತ್ರವಲ್ಲ ವೃದ್ಧರಿಗೂ ಬಿಸಿಲಿನಿಂದ ನಾನಾ ಸಮಸ್ಯೆ ಎದುರಾಗುತ್ತಿವೆ. ಒಟ್ನಲ್ಲಿ ಬೇಸಿಗೆ ಮುಗಿಯುವ ತನಕ ಜನರು ಒಂದಷ್ಟು ಅಲರ್ಟ್ ಆಗಿದ್ರೆ ಒಳ್ಳೆಯದು. ಇಲ್ಲವಾದ್ರೆ ಮತ್ತಷ್ಟು ಸಮಸ್ಯೆ ಎದುರಾಗುವ ಅಪಾಯ ಇದೆ.

Dehydration in Babies

ವಿಮ್ಸ್​ನ ನವಜಾತ ಶಿಶುಗಳ ಸ್ಪೇಷಲ್ ಕೇರ್ ಘಟಕ

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟಕ್ಕೆ ಸಜ್ಜಾಗಿಯೇ ಹುಟ್ಟಿದ ಶಿಶು; ಅಮ್ಮ ಪಡೆದ ವ್ಯಾಕ್ಸಿನ್​ನಿಂದ ಶಕ್ತಿ ಪಡೆದ ಅಮೆರಿಕದ ಮೊದಲ ಮಗು ಇದು..

(Newly Born Babies Facing Dehydration Problems Due to Heavy Summer in Bellary)

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ