AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ’ಕೈ‘ ಕೊಟ್ಟಿದ್ದಕ್ಕೆ ಮಗ ನಿಖಿಲ್, ಅಪ್ಪ ದೇವೇಗೌಡರು ಸೋತರು -ಹೆಚ್​​ಡಿ ಕುಮಾರಸ್ವಾಮಿ ವಿಶ್ಲೇಷಣೆ

ಸಿದ್ದರಾಮಯ್ಯರನ್ನು ಉಪ ಮುಖ್ಯಮಂತ್ರಿ ಮಾಡಿದ್ದು H.D.ದೇವೇಗೌಡರು. ಮುಖ್ಯಮಂತ್ರಿ ಆಗೋಕೆ ಮಾತ್ರ ಸಿದ್ದರಾಮಯ್ಯ ಕಾಂಗ್ರೆಸ್​ಗೆ ಹೋಗಿದ್ದಾರೆ. 30 ವರ್ಷದಿಂದ ನಮಗೆ ಕುಟುಂಬ ರಾಜಕಾರಣದ ಲೇಬಲ್ ಕೊಟ್ಟಿದ್ದಾರೆ ಎಂದು ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ’ಕೈ‘ ಕೊಟ್ಟಿದ್ದಕ್ಕೆ ಮಗ ನಿಖಿಲ್, ಅಪ್ಪ ದೇವೇಗೌಡರು ಸೋತರು -ಹೆಚ್​​ಡಿ ಕುಮಾರಸ್ವಾಮಿ ವಿಶ್ಲೇಷಣೆ
ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ
TV9 Web
| Edited By: |

Updated on:Jan 31, 2023 | 2:41 PM

Share

ಬಳ್ಳಾರಿ: ಕಾಂಗ್ರೆಸ್ ಬೆಂಬಲ ನೀಡದಿದ್ದಕ್ಕೆ ನಿಖಿಲ್(Nikhil Kumaraswamy)​, ದೇವೇಗೌಡರು(HD Deve Gowda) ಸೋತರು ಎಂದು ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೆಕೊಪ್ಪದಲ್ಲಿ ಹೆಚ್​​ಡಿ ಕುಮಾರಸ್ವಾಮಿ(HD Kumaraswamy) ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯರನ್ನು ಉಪ ಮುಖ್ಯಮಂತ್ರಿ ಮಾಡಿದ್ದು H.D.ದೇವೇಗೌಡರು. ಮುಖ್ಯಮಂತ್ರಿ ಆಗೋಕೆ ಮಾತ್ರ ಸಿದ್ದರಾಮಯ್ಯ ಕಾಂಗ್ರೆಸ್​ಗೆ ಹೋಗಿದ್ದಾರೆ. 30 ವರ್ಷದಿಂದ ನಮಗೆ ಕುಟುಂಬ ರಾಜಕಾರಣದ ಲೇಬಲ್ ಕೊಟ್ಟಿದ್ದಾರೆ ಎಂದು ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ವರುಣಾದಲ್ಲಿ ಪುತ್ರನ ಭವಿಷ್ಯಕ್ಕಾಗಿ ಸಿದ್ದರಾಮಯ್ಯ ಹೊರಗೆ ಹೋಗ್ತಿದ್ದಾರೆ. ಖರ್ಗೆ ಸಿಎಂ ಆಗಲು ಬರೋಕೆ ಆಗಲ್ಲ, ಹಾಗಾಗಿ ಪುತ್ರನ ತರುತ್ತಿದ್ದಾರೆ. ಯಡಿಯೂರಪ್ಪ, ಕೆ.ಎಸ್​.ಈಶ್ವರಪ್ಪಗೂ ಅವರ ಮಕ್ಕಳ ಬಗ್ಗೆಯೇ ಚಿಂತೆ. ಅಕ್ರಮ ಗಣಿಗಾರಿಕೆ ಹೊರಗೆ ಬರುವುದಕ್ಕೆ ಕುಮಾರಸ್ವಾಮಿಯೇ ಕಾರಣ. ನನ್ನ ವಿರುದ್ಧ 150 ಕೋಟಿ ಆರೋಪಮಾಡಿದವರು ಎಲ್ಲಿಗೆ ಹೋದರು? ಜನಾರ್ದನ ರೆಡ್ಡಿ ಪಕ್ಷದಿಂದ ಜೆಡಿಎಸ್ ಪಕ್ಷಕ್ಕೆ ಯಾವುದೇ ಸಮಸ್ಯೆ ಇಲ್ಲ. ಎಲ್ಲಿ ಬೇಕಾದ್ರಲ್ಲಿ ಸ್ಪರ್ಧೆ ಮಾಡೋಕೆ ನನ್ನದು ಟೂರಿಂಗ್ ಟಾಕೀಸ್ ಅಲ್ಲ. ಸಿದ್ದರಾಮಯ್ಯ ಒಂದು ಕ್ಷೇತ್ರ ಹುಡುಕೋಕೆ ಅಗ್ತಿಲ್ಲ. ಇವರು ಸಿಎಂ ಆದವರು, ಹದಿಮೂರು ಬಾರಿ ಬಜೆಟ್ ಮಂಡಿಸಿದವರು ಎಂದು ಹೆಚ್​ಡಿಕೆ ಟೀಕಿಸಿದ್ದಾರೆ.

ಇದನ್ನೂ ಓದಿ: Election News: ಬಳ್ಳಾರಿಯಲ್ಲಿ ಸಹೋದರನ ವಿರುದ್ಧ ಪತ್ನಿಯನ್ನು ಕಣಕ್ಕಿಳಿಸಿದ ಜನಾರ್ದನ ರೆಡ್ಡಿ

ಸ್ವತಂತ್ರವಾಗಿ ಅಧಿಕಾರ ನಡೆಸಲು ಕಾಂಗ್ರೆಸ್​ ನಾಯಕರು ನನಗೆ ಬಿಡಲಿಲ್ಲ

ಇನ್ನೊಂದು ವಾರದಲ್ಲಿ ಜೆಡಿಎಸ್​ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡುತ್ತೇವೆ. 2028ರಲ್ಲಿ 2 ರಾಷ್ಟ್ರೀಯ ಪಕ್ಷಗಳನ್ನು ರಾಜ್ಯದ ಜನ ‌ತಿರಸ್ಕಾರ ಮಾಡ್ತಾರೆ. 2018ರಲ್ಲಿ ಕಾಂಗ್ರೆಸ್ ಷರತ್ತು ಹಾಕಿ ಅಧಿಕಾರ ನೀಡಿತ್ತು. ಆದ್ರೆ ಸ್ವತಂತ್ರವಾಗಿ ಅಧಿಕಾರ ನಡೆಸಲು ಕಾಂಗ್ರೆಸ್​ ನಾಯಕರು ನನಗೆ ಬಿಡಲಿಲ್ಲ. ಸಮ್ಮಿಶ್ರ ಸರ್ಕಾರವಿದ್ದರೆ ಬಡತನವನ್ನು ಹೋಗಲಾಡಿಸಲು ಸಾಧ್ಯವಿಲ್ಲ. ಎರಡೂ ಪಕ್ಷದ ಜೊತೆಗೆ ಸಮ್ಮಿಶ್ರ ಸರ್ಕಾರ ಮಾಡಿ ಅನುಭವ ಇದೆ. ಈಗಿರೋದು 2006ರ ಬಿಜೆಪಿ ಅಲ್ಲ, ರಾಷ್ಟ್ರ ನಾಯಕರ ಶಕ್ತಿ ಇರುವ ಬಿಜೆಪಿ. 2018ರಲ್ಲಿ ಕಾಂಗ್ರೆಸ್​​​ ಜೊತೆ ಹೋಗಿದ್ದಕ್ಕೆ ಗುಲಾಮನಾಗಿರುವ ಹಾಗೆ ಆಯ್ತು. ಸಿದ್ದರಾಮಯ್ಯ ಅಧಿಕಾರ ಹೋದರೂ ನನಗೆ ಮನೆ ಬಿಟ್ಟು ಕೊಡಲಿಲ್ಲ. ಸಮ್ಮಿಶ್ರ ಸರ್ಕಾರ ಮಾಡಿ‌ ಕಾಂಗ್ರೆಸ್​​ನವರು ಕುತ್ತಿಗೆ ಕೊಯ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:41 pm, Tue, 31 January 23

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!