AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ’ಕೈ‘ ಕೊಟ್ಟಿದ್ದಕ್ಕೆ ಮಗ ನಿಖಿಲ್, ಅಪ್ಪ ದೇವೇಗೌಡರು ಸೋತರು -ಹೆಚ್​​ಡಿ ಕುಮಾರಸ್ವಾಮಿ ವಿಶ್ಲೇಷಣೆ

ಸಿದ್ದರಾಮಯ್ಯರನ್ನು ಉಪ ಮುಖ್ಯಮಂತ್ರಿ ಮಾಡಿದ್ದು H.D.ದೇವೇಗೌಡರು. ಮುಖ್ಯಮಂತ್ರಿ ಆಗೋಕೆ ಮಾತ್ರ ಸಿದ್ದರಾಮಯ್ಯ ಕಾಂಗ್ರೆಸ್​ಗೆ ಹೋಗಿದ್ದಾರೆ. 30 ವರ್ಷದಿಂದ ನಮಗೆ ಕುಟುಂಬ ರಾಜಕಾರಣದ ಲೇಬಲ್ ಕೊಟ್ಟಿದ್ದಾರೆ ಎಂದು ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ’ಕೈ‘ ಕೊಟ್ಟಿದ್ದಕ್ಕೆ ಮಗ ನಿಖಿಲ್, ಅಪ್ಪ ದೇವೇಗೌಡರು ಸೋತರು -ಹೆಚ್​​ಡಿ ಕುಮಾರಸ್ವಾಮಿ ವಿಶ್ಲೇಷಣೆ
ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ
Follow us
TV9 Web
| Updated By: ಆಯೇಷಾ ಬಾನು

Updated on:Jan 31, 2023 | 2:41 PM

ಬಳ್ಳಾರಿ: ಕಾಂಗ್ರೆಸ್ ಬೆಂಬಲ ನೀಡದಿದ್ದಕ್ಕೆ ನಿಖಿಲ್(Nikhil Kumaraswamy)​, ದೇವೇಗೌಡರು(HD Deve Gowda) ಸೋತರು ಎಂದು ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೆಕೊಪ್ಪದಲ್ಲಿ ಹೆಚ್​​ಡಿ ಕುಮಾರಸ್ವಾಮಿ(HD Kumaraswamy) ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯರನ್ನು ಉಪ ಮುಖ್ಯಮಂತ್ರಿ ಮಾಡಿದ್ದು H.D.ದೇವೇಗೌಡರು. ಮುಖ್ಯಮಂತ್ರಿ ಆಗೋಕೆ ಮಾತ್ರ ಸಿದ್ದರಾಮಯ್ಯ ಕಾಂಗ್ರೆಸ್​ಗೆ ಹೋಗಿದ್ದಾರೆ. 30 ವರ್ಷದಿಂದ ನಮಗೆ ಕುಟುಂಬ ರಾಜಕಾರಣದ ಲೇಬಲ್ ಕೊಟ್ಟಿದ್ದಾರೆ ಎಂದು ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ವರುಣಾದಲ್ಲಿ ಪುತ್ರನ ಭವಿಷ್ಯಕ್ಕಾಗಿ ಸಿದ್ದರಾಮಯ್ಯ ಹೊರಗೆ ಹೋಗ್ತಿದ್ದಾರೆ. ಖರ್ಗೆ ಸಿಎಂ ಆಗಲು ಬರೋಕೆ ಆಗಲ್ಲ, ಹಾಗಾಗಿ ಪುತ್ರನ ತರುತ್ತಿದ್ದಾರೆ. ಯಡಿಯೂರಪ್ಪ, ಕೆ.ಎಸ್​.ಈಶ್ವರಪ್ಪಗೂ ಅವರ ಮಕ್ಕಳ ಬಗ್ಗೆಯೇ ಚಿಂತೆ. ಅಕ್ರಮ ಗಣಿಗಾರಿಕೆ ಹೊರಗೆ ಬರುವುದಕ್ಕೆ ಕುಮಾರಸ್ವಾಮಿಯೇ ಕಾರಣ. ನನ್ನ ವಿರುದ್ಧ 150 ಕೋಟಿ ಆರೋಪಮಾಡಿದವರು ಎಲ್ಲಿಗೆ ಹೋದರು? ಜನಾರ್ದನ ರೆಡ್ಡಿ ಪಕ್ಷದಿಂದ ಜೆಡಿಎಸ್ ಪಕ್ಷಕ್ಕೆ ಯಾವುದೇ ಸಮಸ್ಯೆ ಇಲ್ಲ. ಎಲ್ಲಿ ಬೇಕಾದ್ರಲ್ಲಿ ಸ್ಪರ್ಧೆ ಮಾಡೋಕೆ ನನ್ನದು ಟೂರಿಂಗ್ ಟಾಕೀಸ್ ಅಲ್ಲ. ಸಿದ್ದರಾಮಯ್ಯ ಒಂದು ಕ್ಷೇತ್ರ ಹುಡುಕೋಕೆ ಅಗ್ತಿಲ್ಲ. ಇವರು ಸಿಎಂ ಆದವರು, ಹದಿಮೂರು ಬಾರಿ ಬಜೆಟ್ ಮಂಡಿಸಿದವರು ಎಂದು ಹೆಚ್​ಡಿಕೆ ಟೀಕಿಸಿದ್ದಾರೆ.

ಇದನ್ನೂ ಓದಿ: Election News: ಬಳ್ಳಾರಿಯಲ್ಲಿ ಸಹೋದರನ ವಿರುದ್ಧ ಪತ್ನಿಯನ್ನು ಕಣಕ್ಕಿಳಿಸಿದ ಜನಾರ್ದನ ರೆಡ್ಡಿ

ಸ್ವತಂತ್ರವಾಗಿ ಅಧಿಕಾರ ನಡೆಸಲು ಕಾಂಗ್ರೆಸ್​ ನಾಯಕರು ನನಗೆ ಬಿಡಲಿಲ್ಲ

ಇನ್ನೊಂದು ವಾರದಲ್ಲಿ ಜೆಡಿಎಸ್​ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡುತ್ತೇವೆ. 2028ರಲ್ಲಿ 2 ರಾಷ್ಟ್ರೀಯ ಪಕ್ಷಗಳನ್ನು ರಾಜ್ಯದ ಜನ ‌ತಿರಸ್ಕಾರ ಮಾಡ್ತಾರೆ. 2018ರಲ್ಲಿ ಕಾಂಗ್ರೆಸ್ ಷರತ್ತು ಹಾಕಿ ಅಧಿಕಾರ ನೀಡಿತ್ತು. ಆದ್ರೆ ಸ್ವತಂತ್ರವಾಗಿ ಅಧಿಕಾರ ನಡೆಸಲು ಕಾಂಗ್ರೆಸ್​ ನಾಯಕರು ನನಗೆ ಬಿಡಲಿಲ್ಲ. ಸಮ್ಮಿಶ್ರ ಸರ್ಕಾರವಿದ್ದರೆ ಬಡತನವನ್ನು ಹೋಗಲಾಡಿಸಲು ಸಾಧ್ಯವಿಲ್ಲ. ಎರಡೂ ಪಕ್ಷದ ಜೊತೆಗೆ ಸಮ್ಮಿಶ್ರ ಸರ್ಕಾರ ಮಾಡಿ ಅನುಭವ ಇದೆ. ಈಗಿರೋದು 2006ರ ಬಿಜೆಪಿ ಅಲ್ಲ, ರಾಷ್ಟ್ರ ನಾಯಕರ ಶಕ್ತಿ ಇರುವ ಬಿಜೆಪಿ. 2018ರಲ್ಲಿ ಕಾಂಗ್ರೆಸ್​​​ ಜೊತೆ ಹೋಗಿದ್ದಕ್ಕೆ ಗುಲಾಮನಾಗಿರುವ ಹಾಗೆ ಆಯ್ತು. ಸಿದ್ದರಾಮಯ್ಯ ಅಧಿಕಾರ ಹೋದರೂ ನನಗೆ ಮನೆ ಬಿಟ್ಟು ಕೊಡಲಿಲ್ಲ. ಸಮ್ಮಿಶ್ರ ಸರ್ಕಾರ ಮಾಡಿ‌ ಕಾಂಗ್ರೆಸ್​​ನವರು ಕುತ್ತಿಗೆ ಕೊಯ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:41 pm, Tue, 31 January 23

ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ