AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಮ್ಸ್ ಆಸ್ಪತ್ರೆಯಲ್ಲಿ ಬಳಕೆದಾರರ ಶುಲ್ಕ ದುರ್ಬಳಕೆ; ಮೂವರು ಸಿಬ್ಬಂದಿ ಅಮಾನತು

ನಿತ್ಯ ಹತ್ತು, ಇಪ್ಪತ್ತು ರೂಪಾಯಿ ಹೊರ ರೋಗಿಗಳ ವಿಭಾಗದಲ್ಲಿ ಕಟ್ಟುವ ಹಣಕ್ಕೆ ಖನ್ನ ಹಾಕಿದ್ದು ಬ್ಯಾಂಕ್​ಗೆ ಕಟ್ಟ ಬೇಕಿದ್ದ ಸುಮಾರು 6 ಲಕ್ಷದ 21 ಸಾವಿರದ 242 ರೂಪಾಯಿ ಹಣ ಎಗರಿಸಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ಸಿಬ್ಬಂದಿ ದಯಾ ಅಮರ್, ಮೇಲ್ವಿಚಾರಕಿ ಶರಣಮ್ಮ, ಅಧೀಕ್ಷಕ ಗುರುರಾಜ ಎಂಬುವವರನ್ನು ಅಮಾನತುಗೊಳಿಸಿದ್ದಾರೆ.

ಬಿಮ್ಸ್ ಆಸ್ಪತ್ರೆಯಲ್ಲಿ ಬಳಕೆದಾರರ ಶುಲ್ಕ ದುರ್ಬಳಕೆ; ಮೂವರು ಸಿಬ್ಬಂದಿ ಅಮಾನತು
ವೈದ್ಯಕೀಯ ವಿಜ್ಞಾನ ಸಂಸ್ಥೆ
ವಿನಾಯಕ ಬಡಿಗೇರ್​
| Edited By: |

Updated on: Aug 04, 2024 | 1:17 PM

Share

ಬಳ್ಳಾರಿ, ಆಗಸ್ಟ್.04: ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಬಳಕೆದಾರರ ಶುಲ್ಕ ದುರ್ಬಳಕೆ ಮಾಡಿಕೊಂಡ ಆರೋಪದಡಿ ಮೂವರು ಸಿಬ್ಬಂದಿಯನ್ನು ವಿಮ್ಸ್ ನಿರ್ದೇಶಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ನಿತ್ಯ ಹತ್ತು, ಇಪ್ಪತ್ತು ರೂಪಾಯಿ ಹೊರ ರೋಗಿಗಳ ವಿಭಾಗದಲ್ಲಿ ಕಟ್ಟುವ ಹಣಕ್ಕೆ ಖನ್ನ ಹಾಕಿದ್ದು ಬ್ಯಾಂಕ್​ಗೆ ಕಟ್ಟ ಬೇಕಿದ್ದ ಸುಮಾರು 6 ಲಕ್ಷದ 21 ಸಾವಿರದ 242 ರೂಪಾಯಿ ಹಣ ಎಗರಿಸಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ಸಿಬ್ಬಂದಿ ದಯಾ ಅಮರ್, ಮೇಲ್ವಿಚಾರಕಿ ಶರಣಮ್ಮ, ಅಧೀಕ್ಷಕ ಗುರುರಾಜ ಎಂಬುವವರನ್ನು ಅಮಾನತುಗೊಳಿಸಿದ್ದಾರೆ.

ನಿತ್ಯ 10-20 ರೂಪಾಯಿನಂತೆ ಹೊರ ರೋಗಿಗಳ ವಿಭಾಗದಲ್ಲಿ ಜನರು ಕಟ್ಟುವ ಹಣವನ್ನು ಈ ಮೂವರು ದುರುಪಯೋಗ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.

ದ್ವಿತಿಯ ದರ್ಜೆ ಸಹಾಯಕ ದಯಾ ಅಮರ್ ಎಂಬಾತ ಬ್ಯಾಂಕ್​ಗೆ ಹಾಕಿರುವ ನಕಲಿ ಚಲನ್ ತೋರಿಸಿ ಆ ಹಣ ಎಗರಿಸಿರುವುದು ಪರಿಶೀಲನೆ ವೇಳೆ ಗೊತ್ತಾಗಿದೆ. ಒಂದು ಅಥವಾ ಎರಡು ಸಾವಿರ ಹಣವನ್ನು ಬ್ಯಾಂಕ್​ಗೆ ಹಾಕಿ ಬಳಿಕ ನಕಲಿ ಚಲನ್​ನಲ್ಲಿ 20 ರಿಂದ 25 ಸಾವಿರ ಅಂತಾ ಬರೆದು ಯಾಮಾರಿಸಿದ್ದಾರೆ. ವಿಮ್ಸ್ ಮೇಲಾಧಿಕಾರಿಗಳು ಅಕೌಂಟ್ ಚೆಕ್ ಮಾಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಈ ಆರೋಪದಡಿ ದಯಾ ಅಮರ್​ ಸಹಿತ ಈ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಇಬ್ಬರು ಸಿಬ್ಬಂದಿಯಾದ ಮೇಲ್ವಿಚಾರಕಿ ಶರಣಮ್ಮ, ಅಧೀಕ್ಷಕ ಗುರುರಾಜ್ ಅವರನ್ನು ಅಮಾನತು ಮಾಡಲಾಗಿದೆ ಎಂದು ವಿಮ್ಸ್ ನಿರ್ದೇಶಕ ಗಂಗಾಧರ್ ಗೌಡ ತಿಳಿಸಿದ್ದಾರೆ. ಇಲಾಖಾ ತನಿಖೆಗೆ ಆದೇಶಿಸಿದ್ದು ತನಿಖೆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ವಿಮ್ಸ್ ನಿರ್ದೇಶಕ ಗಂಗಾಧರ್ ಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: ಪಿಎಸ್​ಐ ಪರಶುರಾಮ್​ ಸಾವು ಪ್ರಕರಣ: ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ವಿರುದ್ಧ ಕೇಳಿ ಬಂತು ಗಂಭೀರ ಆರೋಪ

ವಿಷಕಾರಿ ಬೀಜ ಸೇವಿಸಿ 8 ಮಕ್ಕಳು ಅಸ್ವಸ್ಥ

ಶಾಲಾ ವಿರಾಮದ ವೇಳೆ ವಿಷಕಾರಿ ಬೀಜ ಸೇವಿಸಿ 8 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದಲ್ಲಿ ಘಟನೆ ನಡೆದಿದೆ. ವಿಷಕಾರಿ ಬೀಜ ಸೇವಿಸಿದ ಬಳಿಕ ತೆಕ್ಕಲಕೋಟೆಯ ವಾಲ್ಮೀಕಿ ನಗರದ ಸರ್ಕಾರಿ ಶಾಲೆ ಮಕ್ಕಳಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ಮಗುವಿಗೆ ಹೆಚ್ಚಿನ ಸಮಸ್ಯೆಯಾಗಿದ್ದು, ಉಳಿದವರ ಆರೋಗ್ಯ ಸ್ಥಿರವಾಗಿದೆ. ಬಳ್ಳಾರಿಯ ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ ಮಾಹಿತಿ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!