AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಮ್ಸ್ ಆಸ್ಪತ್ರೆಯಲ್ಲಿ ಬಳಕೆದಾರರ ಶುಲ್ಕ ದುರ್ಬಳಕೆ; ಮೂವರು ಸಿಬ್ಬಂದಿ ಅಮಾನತು

ನಿತ್ಯ ಹತ್ತು, ಇಪ್ಪತ್ತು ರೂಪಾಯಿ ಹೊರ ರೋಗಿಗಳ ವಿಭಾಗದಲ್ಲಿ ಕಟ್ಟುವ ಹಣಕ್ಕೆ ಖನ್ನ ಹಾಕಿದ್ದು ಬ್ಯಾಂಕ್​ಗೆ ಕಟ್ಟ ಬೇಕಿದ್ದ ಸುಮಾರು 6 ಲಕ್ಷದ 21 ಸಾವಿರದ 242 ರೂಪಾಯಿ ಹಣ ಎಗರಿಸಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ಸಿಬ್ಬಂದಿ ದಯಾ ಅಮರ್, ಮೇಲ್ವಿಚಾರಕಿ ಶರಣಮ್ಮ, ಅಧೀಕ್ಷಕ ಗುರುರಾಜ ಎಂಬುವವರನ್ನು ಅಮಾನತುಗೊಳಿಸಿದ್ದಾರೆ.

ಬಿಮ್ಸ್ ಆಸ್ಪತ್ರೆಯಲ್ಲಿ ಬಳಕೆದಾರರ ಶುಲ್ಕ ದುರ್ಬಳಕೆ; ಮೂವರು ಸಿಬ್ಬಂದಿ ಅಮಾನತು
ವೈದ್ಯಕೀಯ ವಿಜ್ಞಾನ ಸಂಸ್ಥೆ
ವಿನಾಯಕ ಬಡಿಗೇರ್​
| Edited By: |

Updated on: Aug 04, 2024 | 1:17 PM

Share

ಬಳ್ಳಾರಿ, ಆಗಸ್ಟ್.04: ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಬಳಕೆದಾರರ ಶುಲ್ಕ ದುರ್ಬಳಕೆ ಮಾಡಿಕೊಂಡ ಆರೋಪದಡಿ ಮೂವರು ಸಿಬ್ಬಂದಿಯನ್ನು ವಿಮ್ಸ್ ನಿರ್ದೇಶಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ನಿತ್ಯ ಹತ್ತು, ಇಪ್ಪತ್ತು ರೂಪಾಯಿ ಹೊರ ರೋಗಿಗಳ ವಿಭಾಗದಲ್ಲಿ ಕಟ್ಟುವ ಹಣಕ್ಕೆ ಖನ್ನ ಹಾಕಿದ್ದು ಬ್ಯಾಂಕ್​ಗೆ ಕಟ್ಟ ಬೇಕಿದ್ದ ಸುಮಾರು 6 ಲಕ್ಷದ 21 ಸಾವಿರದ 242 ರೂಪಾಯಿ ಹಣ ಎಗರಿಸಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ಸಿಬ್ಬಂದಿ ದಯಾ ಅಮರ್, ಮೇಲ್ವಿಚಾರಕಿ ಶರಣಮ್ಮ, ಅಧೀಕ್ಷಕ ಗುರುರಾಜ ಎಂಬುವವರನ್ನು ಅಮಾನತುಗೊಳಿಸಿದ್ದಾರೆ.

ನಿತ್ಯ 10-20 ರೂಪಾಯಿನಂತೆ ಹೊರ ರೋಗಿಗಳ ವಿಭಾಗದಲ್ಲಿ ಜನರು ಕಟ್ಟುವ ಹಣವನ್ನು ಈ ಮೂವರು ದುರುಪಯೋಗ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.

ದ್ವಿತಿಯ ದರ್ಜೆ ಸಹಾಯಕ ದಯಾ ಅಮರ್ ಎಂಬಾತ ಬ್ಯಾಂಕ್​ಗೆ ಹಾಕಿರುವ ನಕಲಿ ಚಲನ್ ತೋರಿಸಿ ಆ ಹಣ ಎಗರಿಸಿರುವುದು ಪರಿಶೀಲನೆ ವೇಳೆ ಗೊತ್ತಾಗಿದೆ. ಒಂದು ಅಥವಾ ಎರಡು ಸಾವಿರ ಹಣವನ್ನು ಬ್ಯಾಂಕ್​ಗೆ ಹಾಕಿ ಬಳಿಕ ನಕಲಿ ಚಲನ್​ನಲ್ಲಿ 20 ರಿಂದ 25 ಸಾವಿರ ಅಂತಾ ಬರೆದು ಯಾಮಾರಿಸಿದ್ದಾರೆ. ವಿಮ್ಸ್ ಮೇಲಾಧಿಕಾರಿಗಳು ಅಕೌಂಟ್ ಚೆಕ್ ಮಾಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಈ ಆರೋಪದಡಿ ದಯಾ ಅಮರ್​ ಸಹಿತ ಈ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಇಬ್ಬರು ಸಿಬ್ಬಂದಿಯಾದ ಮೇಲ್ವಿಚಾರಕಿ ಶರಣಮ್ಮ, ಅಧೀಕ್ಷಕ ಗುರುರಾಜ್ ಅವರನ್ನು ಅಮಾನತು ಮಾಡಲಾಗಿದೆ ಎಂದು ವಿಮ್ಸ್ ನಿರ್ದೇಶಕ ಗಂಗಾಧರ್ ಗೌಡ ತಿಳಿಸಿದ್ದಾರೆ. ಇಲಾಖಾ ತನಿಖೆಗೆ ಆದೇಶಿಸಿದ್ದು ತನಿಖೆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ವಿಮ್ಸ್ ನಿರ್ದೇಶಕ ಗಂಗಾಧರ್ ಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: ಪಿಎಸ್​ಐ ಪರಶುರಾಮ್​ ಸಾವು ಪ್ರಕರಣ: ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ವಿರುದ್ಧ ಕೇಳಿ ಬಂತು ಗಂಭೀರ ಆರೋಪ

ವಿಷಕಾರಿ ಬೀಜ ಸೇವಿಸಿ 8 ಮಕ್ಕಳು ಅಸ್ವಸ್ಥ

ಶಾಲಾ ವಿರಾಮದ ವೇಳೆ ವಿಷಕಾರಿ ಬೀಜ ಸೇವಿಸಿ 8 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದಲ್ಲಿ ಘಟನೆ ನಡೆದಿದೆ. ವಿಷಕಾರಿ ಬೀಜ ಸೇವಿಸಿದ ಬಳಿಕ ತೆಕ್ಕಲಕೋಟೆಯ ವಾಲ್ಮೀಕಿ ನಗರದ ಸರ್ಕಾರಿ ಶಾಲೆ ಮಕ್ಕಳಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ಮಗುವಿಗೆ ಹೆಚ್ಚಿನ ಸಮಸ್ಯೆಯಾಗಿದ್ದು, ಉಳಿದವರ ಆರೋಗ್ಯ ಸ್ಥಿರವಾಗಿದೆ. ಬಳ್ಳಾರಿಯ ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ ಮಾಹಿತಿ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ