AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯ ಅವಾಂತರ; ಕಂಪ್ಲಿ-ಗಂಗಾವತಿ ಸೇತುವೆಯ ಮೇಲೆ ಸಂಚಾರ ಸ್ಥಗಿತ, ಅರ್ಧಗಂಟೆಗೂ ಹೆಚ್ಚು ಕಾಲ ಆಟೋದಲ್ಲೇ ನರಳಾಡಿದ ರೋಗಿ

ಕಂಪ್ಲಿ-ಗಂಗಾವತಿ ಸೇತುವೆಯ ಮೇಲೆ ಸಂಚಾರ ಸ್ಥಗಿತ ಹಿನ್ನೆಲೆ ಸೇತುವೆ ದಾಟಲು ಆಟೋದಲ್ಲಿ ತೆರಳುತ್ತಿದ್ದ ರೋಗಿ ಪರದಾಡುತ್ತಿದ್ದಾರೆ. ಬಳ್ಳಾರಿಯಿಂದ ಗಂಗಾವತಿಗೆ ತೆರಳುತ್ತಿದ್ದ ಹನೀಫ್ ಅರ್ಧಗಂಟೆಗೂ ಹೆಚ್ಚು ಕಾಲ ಆಟೋದಲ್ಲೇ ನರಳಾಡಿದ್ದಾರೆ.

ಮಳೆಯ ಅವಾಂತರ; ಕಂಪ್ಲಿ-ಗಂಗಾವತಿ ಸೇತುವೆಯ ಮೇಲೆ ಸಂಚಾರ ಸ್ಥಗಿತ, ಅರ್ಧಗಂಟೆಗೂ ಹೆಚ್ಚು ಕಾಲ ಆಟೋದಲ್ಲೇ ನರಳಾಡಿದ ರೋಗಿ
ಕಂಪ್ಲಿ-ಗಂಗಾವತಿ ಸೇತುವೆಯ ಮೇಲೆ ಸಂಚಾರ ಸ್ಥಗಿತ, ಅರ್ಧಗಂಟೆಗೂ ಹೆಚ್ಚು ಕಾಲ ಆಟೋದಲ್ಲೇ ನರಳಾಡಿದ ರೋಗಿ
TV9 Web
| Edited By: ಆಯೇಷಾ ಬಾನು|

Updated on:Jul 13, 2022 | 5:04 PM

Share

ಬಳ್ಳಾರಿ: ರಾಜ್ಯದ ಹಲವೆಡೆ ರಣಮಳೆ ಒಂದೇ ಸಮನೆ ಸುರಿಯುತ್ತಿದೆ. ಇನ್ನೂ ಕೆಲವಡೆ ಮಳೆ ಕಡಿಮೆಯಾದ್ರೂ, ಮಳೆ ಅವಾಂತರಗಳು ಮಾತ್ರ ತಗ್ಗುತ್ತಲೇ ಇಲ್ಲ. ವ್ಯಾಪಕ ವರ್ಷಧಾರೆಯಿಂದ ಜನರ ಬದುಕು ಬೀದಿಗೆ ಬಂದಿದೆ. ಮನೆಗಳು, ಗುಡ್ಡ, ರಸ್ತೆಗಳೇ ಕುಸಿದು ಬೀಳುತ್ತಿವೆ. ಜಲಾಶಯಗಳ ಅಪಾರ ನೀರಿನಿಂದ ನದಿಪಾತ್ರದ ಜನರು ಸಂಕಷ್ಟಕ್ಕೆ ಸಿಲುಕಿದ್ರೆ, ಸಾವಿರಾರು ಹೆಕ್ಟೇರ್ ಪ್ರದೇಶದ ಬೆಳೆ ಜಲಸಮಾಧಿಯಾಗಿದೆ. ಸೇತುವೆಗಳು ಮುಳುಗಿ ಜನರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗದಂತಾಗಿದೆ. ಅದರಂತೆಯೇ ಕಂಪ್ಲಿ-ಗಂಗಾವತಿ ಸೇತುವೆಯ ಮೇಲೆ ಸಂಚಾರ ಸ್ಥಗಿತ ಹಿನ್ನೆಲೆ ರೋಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಕಂಪ್ಲಿ-ಗಂಗಾವತಿ ಸೇತುವೆಯ ಮೇಲೆ ಸಂಚಾರ ಸ್ಥಗಿತ ಹಿನ್ನೆಲೆ ಸೇತುವೆ ದಾಟಲು ಆಟೋದಲ್ಲಿ ತೆರಳುತ್ತಿದ್ದ ರೋಗಿ ಪರದಾಡುತ್ತಿದ್ದಾರೆ. ಬಳ್ಳಾರಿಯಿಂದ ಗಂಗಾವತಿಗೆ ತೆರಳುತ್ತಿದ್ದ ಹನೀಫ್ ಅರ್ಧಗಂಟೆಗೂ ಹೆಚ್ಚು ಕಾಲ ಆಟೋದಲ್ಲೇ ನರಳಾಡಿದ್ದಾರೆ. ಚಿಕಿತ್ಸೆಯ ದಾಖಲಾತಿ ತೋರಿಸಿದರೂ ಪೊಲೀಸರು ಹನೀಫ್ರನ್ನ ತಡೆದಿದ್ದು ಸ್ಥಳೀಯರ ಮನವಿಯ ಮೇರೆಗೆ ರೋಗಿ ತೆರಳಲು ಅನುಮತಿ ನೀಡಲಾಗಿದೆ. ಬಳ್ಳಾರಿಯ ಟಿಬಿ ಸ್ಯಾನಟರಿ ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆದು ಊರಿಗೆ ತೆರಳುವ ವೇಳೆ ರೋಗಿ ಹನೀಫ್ ಪರದಾಡಿದ್ದಾರೆ.

ಮುಳ್ಳಿನ ಬೇಲಿ ದಾಟಿ ಕಿರು ಸೇತುವೆ ಮೇಲೆ ಹೋದ ಜನ ಇನ್ನು ಮತ್ತೊಂದು ಕಡೆ ಕೊಪ್ಪಳ ತಾಲೂಕಿನ ಮುನಿರಾಬಾದ್ ತುಂಗಭದ್ರಾ ಜಲಾಶಯದ ಮುಂಭಾಗ ಇರುವ ಸೇತುವೆಗೆ ಮುಳ್ಳಿನ ಬೇಲಿ ಹಾಕಿದ್ದು ಅದನ್ನೇ ದಾಟಿ ಜನ ಹೋಗುವ ದೃಶ್ಯಗಳು ಕಂಡು ಬಂದಿವೆ. ಅಧಿಕಾರಿಗಳು, ಪೊಲೀಸರು ಹೋಗುತ್ತಲೇ ಸೇತುವೆ ಮೇಲೆ ನುಗ್ಗಿದ ಜನ ಮುಳ್ಳಿನ ಬೇಲಿ ದಾಟಿ ಕಿರು ಸೇತುವೆ ಮೇಲೆ ಹೋಗಿದ್ದಾರೆ.

ಈ ಕಿರು ಸೇತುವೆ ಮುನಿರಾಬಾದ್ – ಟಿಬಿ ಡ್ಯಾಮ್ ಗೆ ಸಂಪರ್ಕ ಕಲ್ಲಿಸುತ್ತೆ. ಸೇತುವೆ ಮೇಲೆ ಜನ ಓಡಾಡದಂತೆ ಮುಳ್ಳಿನ ಬೇಲಿ ಹಾಕಲಾಗಿತ್ತು. ಮುಳ್ಳಿನ ಬೇಲಿ ಹಾಕಿ ಪೊಲೀಸರು, ಅಧಿಕಾರಿಗಳು ಹೋದ ತಕ್ಷಣ ಮತ್ತೆ ಕಿರು ಸೇತುವೆ ಮೇಲೆ ಜನ ಓಡಾಟ ಶುರು ಮಾಡಿದ್ದಾರೆ. ಅಲ್ಲದೆ ಕಿರು ಸೇತುವೆ ಮುಂಭಾಗ ಯುವಕರು‌ ಸೆಲ್ಪಿಗೆ ಪೋಜ್ ಕೊಟ್ಟು ಫೋಟೋ ತೆಗೆದುಕೊಳ್ಳುತ್ತಿದ್ದಾರೆ.

Published On - 4:55 pm, Wed, 13 July 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ