AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಜಿಲ್ಲೆಯ ಬಹುತೇಕ ಪಿಎಚ್‌ಸಿಗಳಲಿಲ್ಲ ಮರಣೋತ್ತರ ಪರೀಕ್ಷೆ ಕೇಂದ್ರಗಳು

ಬಳ್ಳಾರಿಯ 29 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪೈಕಿ ಕೇವಲ 8ರಲ್ಲಿ ಮಾತ್ರ ಮರಣೋತ್ತರ ಪರೀಕ್ಷಾ ಕೇಂದ್ರಗಳಿವೆ. ಇದು ಆರೋಗ್ಯ ಇಲಾಖೆಯ ನಿಯಮಗಳ ಉಲ್ಲಂಘನೆಯಾಗಿದೆ. ಮೃತದೇಹಗಳನ್ನು ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಸರ್ಕಾರವು ಪ್ರತಿ ಪಿಎಚ್‌ಸಿಗಳಲ್ಲಿ ಮರಣೋತ್ತರ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಬೇಕಿದೆ. ಬಳ್ಳಾರಿಯ ಆರೋಗ್ಯ ವ್ಯವಸ್ಥೆಯಲ್ಲಿ ಈ ಕೊರತೆಯನ್ನು ತುರ್ತಾಗಿ ನಿವಾರಿಸಬೇಕು.

ಬಳ್ಳಾರಿ ಜಿಲ್ಲೆಯ ಬಹುತೇಕ ಪಿಎಚ್‌ಸಿಗಳಲಿಲ್ಲ ಮರಣೋತ್ತರ ಪರೀಕ್ಷೆ ಕೇಂದ್ರಗಳು
ಪ್ರಾಥಮಿಕ ಆರೋಗ್ಯ ಕೇಂದ್ರ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ವಿವೇಕ ಬಿರಾದಾರ

Updated on: Apr 11, 2025 | 9:32 PM

ಬಳ್ಳಾರಿ, ಏಪ್ರಿಲ್​ 11: ಬಳ್ಳಾರಿಯಲ್ಲಿ (Ballari) ಸುಮಾರು 29 ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ (PHC). ಈ ಆರೋಗ್ಯ ಕೇಂದ್ರಗಳ ಪೈಕಿ ಕೇವಲ 8 ಕೇಂದ್ರಗಳಲ್ಲಿ ಮಾತ್ರ ಮರಣೋತ್ತರ ಪರೀಕ್ಷೆ ಕೇಂದ್ರಗಳಿವೆ. ನಿಯಮದ ಪ್ರಕಾರ ಪ್ರತಿ ಪಿಎಚ್‌ಸಿ ಗಳಲ್ಲಿ ಮರಣೋತ್ತರ ಪರೀಕ್ಷೆ ಕೇಂದ್ರಗಳಿರಬೇಕು. ಆದರೆ, ಈ ನಿಯಮವನ್ನು ಗಾಳಿಗೆ ತೋರಿ ಇಲ್ಲಿಯ ಆರೋಗ್ಯ ಇಲಾಖೆ ಪಿಎಚ್‌ಸಿಗಳನ್ನು ನಡೆಸುತ್ತಿದೆ.

ಈ ಬಗ್ಗೆ ಡಿಎಚ್‌ಓ ಡಾ. ಯಲ್ಲಾರ್ ರಮೇಶ ಮಾತನಾಡಿ, ನಮ್ಮ ಜಿಲ್ಲೆಯಲ್ಲಿರುವ ಬಹುತೇಕ ಪಿಎಚ್‌ಸಿ‌ಗಳಲ್ಲಿ ಮರಣೋತ್ತರ ಪರೀಕ್ಷೆ ಕೇಂದ್ರಗಳಿಲ್ಲ. ಕೇವಲ 8 ಕೇಂದ್ರಗಳಲ್ಲಿ ಮರಣೋತ್ತರ ಪರೀಕ್ಷೆ ಕೇಂದ್ರಗಳಿವೆ. ಪ್ರಾಥಮಿಕ ಆರೋಗ್ಯ ಕೇಂದ್ರಲ್ಲಿನ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಹತ್ತಿರದ ತಾಲೂಕು ಆಸ್ಪತ್ರೆಗೆ ಅಥವಾ ಬೀಮ್ಸ್ ಆಸ್ಪತ್ರೆಗೆ ಕಳುಹಿಸುತ್ತೇವೆ. ಇನ್ನು, ಯಾವುದೇ ಕಾರಣಕ್ಕೂ ಆಸ್ಪತ್ರೆಯ ಹೊರ ಆವರಣದಲ್ಲಿ ಮರಣೋತ್ತರ ಪರೀಕ್ಷೆ ನಡೆಸುವುದಿಲ್ಲ. ಹಂತ ಪ್ರಕರಣಗಳು ಈವರಗೆ ನಡೆದಿಲ್ಲ ಎಂದು ಹೇಳಿದರು.

ಬಳ್ಳಾರಿಯಲ್ಲಿರುವ 29 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಾಹಿತಿಯನ್ನ ಡಿಎಚ್‌ಓ ಡಾ. ಯಲ್ಲಾರದ ರಮೇಶ ತೆಗೆದುಕೊಂಡು. ಆಸ್ಪತ್ರೆಗಳ ವ್ಯವಸ್ಥೆ ಬಗ್ಗೆ ತಿಳಿದುಕೊಂಡಿದ್ದಾರೆ. ಎಂಟು ಪಿಎಚ್‌ಸಿಗಳಲ್ಲಿರುವ ಮರಣೋತ್ತರ ಪರೀಕ್ಷೆ ಕೇಂದ್ರಗಳು ಯಾವ ರೀತಿ ಕೆಲಸ ಮಾಡುತ್ತಿವೆ ಎಂಬುವುದರ ಬಗ್ಗೆಯೂ ಮಾಹಿತಿ ಪಡೆದ್ದಾರೆ‌. ಜೊತೆಗೆ ಮರಣೋತ್ತರ ಪರೀಕ್ಷೆ ಕೇಂದ್ರಗಳನ್ನು ಹೊಂದದ ಪಿಎಚ್‌ಸಿಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ಕೂಡ ನೀಡಿದ್ದಾರೆ. ಜೊತೆಗೆ ಮೃತ ದೇಹಗಳ ಮರಣೋತ್ತರ ಪರೀಕ್ಷೆ ನಡೆಸುವುದರ ಬಗ್ಗೆ ಯಾವುದೇ ತೊಂದರೆ ಇಲ್ಲ.

ಇದನ್ನೂ ಓದಿ
Image
ಗಂಡನ ಕೊಲೆಯನ್ನು ವಿಡಿಯೋ ಕಾಲ್​ನಲ್ಲಿ ನೋಡಿ ಆನಂದಪಟ್ಟ ಹೆಂಡ್ತಿ!
Image
ಪತ್ನಿಯನ್ನ ತುಂಡರಿಸಿ ಸೂಟ್ ಕೇಸ್​ನಲ್ಲಿ ತುಂಬಿಟ್ಟ ಪತಿ!
Image
ಪತ್ನಿ ಜತೆ ಅಕ್ರಮ ಸಂಬಂಧ, ಗುಂಡಿ ತೋಡಿ ಬಾಡಿಗೆದಾರನನ್ನು ಜೀವಂತ ಸಮಾಧಿ
Image
ಉದ್ಯಮಿ ಕೊಲೆಗೆ ಟ್ವಿಸ್ಟ್; ಹೆಣ್ಣು ಕೊಟ್ಟ ಅತ್ತೆಯೇ ಕತ್ತು ಸೀಳಿ ಹತ್ಯೆ!

ಬಳ್ಳಾರಿ ತಾಲೂಕಿನ ಸಿದ್ದಮ್ಮನಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಿಯಾಲಿಟಿ ಚೆಕ್ ನಡೆಸಿದ ನಿಮ್ಮ Tv9 ಅಲ್ಲಿನ ವಾಸ್ತವ ಸ್ಥಿತಿಯನ್ನ ವಿವರಿಸಿದೆ. ಜೊತೆಗೆ ಅಲ್ಲಿ ಮರಣೋತ್ತರ ಪರೀಕ್ಷೆ ಕೇಂದ್ರವಿಲ್ಲದೆ ಪಿಎಚ್‌ಸಿ ನಡೆಸಲಾಗುತ್ತಿರುವ ಬಗ್ಗೆ ಅಲ್ಲಿವ ವೈದ್ಯರೇ Tv9 ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಳ್ಳಾರಿಯಲ್ಲಿ ಮತ್ತೊಂದು ಮನಿ ಡಬ್ಲಿಂಗ್ ಸ್ಕ್ಯಾಮ್: ಬರೋಬ್ಬರಿ 50 ಕೋಟಿಗೂ‌ ಹೆಚ್ಚು ವಂಚನೆ!

ಒಟ್ಟಿನಲ್ಲಿ ಗಣಿನಾಡು ಬಳ್ಳಾರಿಯಲ್ಲಿ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮರಣೋತ್ತರ ಪರೀಕ್ಷೆ ಕೇಂದ್ರಗಳಿಲ್ಲ. ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಬೇಕೆಂದರೇ ತಾಲೂಕು ಆಸ್ಪತ್ರೆಗೆ ತೆರಳಬೇಕು. ಅಥವಾ ಜಿಲ್ಲಾಸ್ಪತ್ರೆ ಬಿಮ್ಸ್​ಗೆ ತೆರಳುವ ಸ್ಥಿತಿ ಇದೆ. ಹೀಗಾಗಿ ಸರ್ಕಾರ ಕೂಡಲೇ ಎಚ್ಚೆತ್ತು ಪ್ರತಿ ಪಿಎಚ್‌ಸಿಗಳಲ್ಲಿ ಮರಣೋತ್ತರ ಪರೀಕ್ಷೆ ಕೇಂದ್ರಗಳನ್ನು ಸ್ಥಾಪನೆ ಮಾಡುವ ಕೆಲಸ ಮಾಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ