AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಕೊರತೆಯ ಮಧ್ಯೆ ದಿಢೀರ್ ಕುಸಿದ ಮೆಣಸಿನಕಾಯಿ ದರ, ರೈತ ಹೈರಾಣ

ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆ ಬರಗಾಲ ತಾಂಡವಾಡುತ್ತಿದೆ. ಇದರ ನಡುವೆ ಮಾರುಕಟ್ಟೆಯಲ್ಲಿ ರೈತರ ಬೆಳೆಗೆ ಬೆಲೆ ಇಲ್ಲದಂತಾಗಿದೆ. ಹೀಗಾಗಿ ಕೂಡಲೇ ಸರ್ಕಾರ ಖರೀದಿ ಕೇಂದ್ರ ತೆರೆದು ಸೂಕ್ತ ಬೆಂಬಲ ಬೆಲೆಯೊಂದಿಗೆ ಬೆಳೆ ಖರೀದಿ ಮಾಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಮಳೆ ಕೊರತೆಯ ಮಧ್ಯೆ ದಿಢೀರ್ ಕುಸಿದ ಮೆಣಸಿನಕಾಯಿ ದರ, ರೈತ ಹೈರಾಣ
ಮಳೆ ಕೊರತೆಯ ಮಧ್ಯೆ ದಿಢೀರ್ ಕುಸಿದ ಮೆಣಸಿನಕಾಯಿ ದರ, ರೈತ ಹೈರಾಣ
TV9 Web
| Edited By: |

Updated on: Jan 18, 2024 | 2:36 PM

Share

ರಾಜ್ಯದಲ್ಲಿ ಮಳೆ ಕೊರತೆಯಿಂದ ಬರಗಾಲ ತಾಂಡವಾಡುತ್ತಿದೆ.. ತೀವ್ರ ಬರಗಾಲದ ನಡುವೆಯು ರೈತ ಅಳಿದುಳಿದ ಬೆಳೆಯನ್ನ ಉಳಿಸಿ-ಬೆಳೆಸಿ ಮಾರುಕಟ್ಟೆಗೆ ತೆಗೆದುಕೊಂಡು ಹೋದರೆ ಅದಕ್ಕೂ ಬೆಲೆ‌ ಇಲ್ಲದಂತಾಗಿದೆ. ಒಂದು ಕ್ವಿಂಟಲ್‌ಗೆ 50,000 ರೂ ಗೆ ಮಾರಾಟವಾಗುತ್ತಿದ್ದ ಮೆಣಸಿನಕಾಯಿ ಬೆಳೆ‌ ದಿಢೀರ್ ಕುಸಿತ ಕಂಡು ಕೇವಲ 10,000 ರೂಗೆ ಮಾರಾಟ ವಾಗುತ್ತಿದೆ. ಹೀಗಾಗಿ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆಯೊಂದಿಗೆ ಬೆಳೆ ಖರೀದಿಸಿ ಎಂದು ರೈತರು ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ಹೌದು, ಈ ವರ್ಷ ಮಳೆ ಕೊರತೆಯಿಂದ ಬೆಳೆ ಬರದೆ ರೈತ ಕಂಗಾಲಾಗಿದ್ದಾನೆ.. ತೀವ್ರ ಬರದ ನಡುವೆ ಕಾಲುವೆ ನೀರು, ಬೋರಬೆಲ್ ನೀರು ಹೀಗೆ ಹಲವು ಮಾರ್ಗಗಳಲ್ಲಿ ಹೊಲಗಳಿಗೆ ನೀರು ಹರಿಸಿ ಅಳಿದುಳಿದ ಬೆಳೆಯನ್ನ ಉಳಿಸಿಕೊಂಡು ಬಂದಿದ್ದ ರೈತನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮಾರುಕಟ್ಟೆಯಲ್ಲಿ 50,000 ರೂ ಗೆ ಒಂದು ಕ್ವಿಂಟಲ್ ಮಾರುತ್ತಿದ್ದ ಮೆಣಸಿನಕಾಯಿ ಬೆಲೆ ಈಗ ದಿಢೀರ್ ಕುಸಿತವಾಗಿದೆ. ಒಂದು ಕ್ವಿಂಟಲ್‌ಗೆ ಕೇವಲ 10,000 ರೂ ಮಾರಾಟವಾಗುತ್ತಿದೆ. ಒಂದು ಕಡೆ ತೀವ್ರ ಬರಗಾಲ ಮತ್ತೊಂದು ಕಡೆ ಲಕ್ಷಾಂತರ ರೂಪಾಯಿ ಸಾಲ ಮಾಡಿ ಅಳಿದುಳಿದ ಬೆಳೆಯನ್ನ ಉಳಿಸಿ ಕೊಂಡಿದ್ದ ರೈತನಿಗೆ ದರ ಕುಸಿತದ ಬಿಸಿ ತಟ್ಟಿದೆ. ಹೀಗಾಗಿ ಕಂಗಾಲಾಗಿರುವ ರೈತ ಸರ್ಕಾರ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆಯೊಂದಿಗೆ ಬೆಳೆ ಖರೀದಿ ಮಾಡಬೇಕು ಅಂತಾ ಒತ್ತಾಯ ಮಾಡಿದ್ದಾನೆ.

ಇನ್ನು ಬಳ್ಳಾರಿ ಜಿಲ್ಲೆಯಲ್ಲಿ ರೈತರು ಅತೀ ಹೆಚ್ಚು ಮೆಣಸಿನಕಾಯಿ ಬೆಳೆಯನ್ನ ಬೆಳೆಯುತ್ತಾರೆ. ಈ ವರ್ಷ ಅಂದಾಜು 37,000 ಹೆಕ್ಟೇರ್ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆಯನ್ನ ಬೆಳೆದಿದ್ದಾರೆ. ಕಳೆದ ವರ್ಷ 70,000 ರೂ ಕ್ವಿಂಟಲ್ ಮಾರಾಟವಾಗಿದ್ದ ಬೆಳೆ ಈ ವರ್ಷ ದಿಢೀರನೆ ಕುಸಿತ ಕಂಡಿದೆ. ಒಂದು ಎಕರೆ ಜಮೀನಿನಲ್ಲಿ ಮೆಣಸಿನಕಾಯಿ ಬೆಳೆ ಬೆಳೆಯಬೇಕು ಅಂದ್ರೆ 50 ರಿಂದ ಒಂದು ಲಕ್ಷದ ವರಗೆ ಖರ್ಚು ಇರುತ್ತೆ.

Also Read: ರಾಜ್ಯದಲ್ಲಿ 85% ಲಾರಿಗಳು ನಿಂತು ಹೋಗಿವೆ, ಬೇಡಿಕೆ ಇಡೇರುವವರೆಗೂ ಪ್ರತಿಭಟನೆ ಮಾಡ್ತೀವಿ -ನವೀನ್ ರೆಡ್ಡಿ

ಸಾಲ ಶೂಲ ಮಾಡಿ ಬೆಳೆದಿದ್ದ ಬೆಳೆಗೆ ಈಗ ಬೆಲೆ ಇಲ್ಲದಂತಾಗಿದೆ.. ಹೀಗಾಗಿ ಅನ್ನದಾತ ಕಣ್ಣೀರು ಹಾಕುವ ಪರಿಸ್ಥಿತಿ ಬಂದಿದೆ.. ಇನ್ನು ಮೆಣಸಿನ ಬೆಳೆ ಪರಿಸ್ಥಿತಿ ಹೀಗಾದರೆ ಭತ್ತದ ಬೆಳೆಯು ಕಳೆದ ಎರಡು ವಾರದಿಂದ ಕುಸಿದಿದೆ. ಹೀಗಾಗಿ ರಾಜ್ಯ ಸರ್ಕಾರ ಕೂಡಲೇ ಖರೀದಿ ಕೇಂದ್ರ ತೆಗೆದು ಬೆಂಬಲ ಬೆಲೆಯೊಂದಿಗೆ ಬೆಳೆ ಖರೀದಿ ಮಾಡಬೇಕು ಎಂದು ರೈತರು ಒತ್ತಾಯ ಮಾಡುತ್ತಿದ್ದಾರೆ

ಒಟ್ಟಿನಲ್ಲಿ ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆ ಬರಗಾಲ ತಾಂಡವಾಡುತ್ತಿದೆ. ಇದರ ನಡುವೆ ಮಾರುಕಟ್ಟೆಯಲ್ಲಿ ರೈತರ ಬೆಳೆಗೆ ಬೆಲೆ ಇಲ್ಲದಂತಾಗಿದೆ. ಹೀಗಾಗಿ ಕೂಡಲೇ ಸರ್ಕಾರ ಖರೀದಿ ಕೇಂದ್ರ ತೆರೆದು ಸೂಕ್ತ ಬೆಂಬಲ ಬೆಲೆಯೊಂದಿಗೆ ಬೆಳೆ ಖರೀದಿ ಮಾಡಬೇಕು ಎನ್ನುವುದು ರೈತರ ಒತ್ತಾಯ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?