AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಾವತಿ ನದಿ ಪ್ರವಾಹದಲ್ಲಿ ಸಿಲುಕಿದ ಅರ್ಚಕ ಕುಟುಂಬ: ರಕ್ಷಣೆಗೆ ತೆರಳಿದ್ದ ಬೋಟ್ ಪಲ್ಟಿ

ಮುದೇನೂರು ಬಳಿ ಶನೇಶ್ವರ ದೇಗುಲದ ಆವರಣದಲ್ಲಿದ್ದ ಅರ್ಚಕರ ಕುಟುಂಬದ 6 ಜನರು ಸಿಲುಕಿದ್ದು, ಸಂತ್ರಸ್ತರನ್ನ ರಕ್ಷಿಸಲು ತೆರಳಿದ ವೇಳೆ ಬೋಟ್ ಪಲ್ಟಿಯಾಗಿದೆ. ಬೋಟ್​​ನಲ್ಲಿ ಸಂತ್ರಸ್ತರು ಸೇರಿ 10 ಜನರಿದ್ದರು ಎನ್ನಲಾಗುತ್ತಿದೆ.

ವೇದಾವತಿ ನದಿ ಪ್ರವಾಹದಲ್ಲಿ ಸಿಲುಕಿದ ಅರ್ಚಕ ಕುಟುಂಬ: ರಕ್ಷಣೆಗೆ ತೆರಳಿದ್ದ ಬೋಟ್ ಪಲ್ಟಿ
ರಕ್ಷಣೆಗೆ ತೆರಳಿದ್ದ ಬೋಟ್ ಪಲ್ಟಿ
TV9 Web
| Edited By: |

Updated on:Sep 08, 2022 | 1:25 PM

Share

ಬಳ್ಳಾರಿ: ವೇದಾವತಿ ನದಿಯ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತವಾಗಿದ್ದು, ಪ್ರವಾಹದಲ್ಲಿ ಸಿಲುಕಿದ್ದ ಅರ್ಚಕ ಕುಟುಂಬ ರಕ್ಷಣೆಗೆ ತೆರಳಿದ್ದ ಬೋಟ್ ಪಲ್ಟಿಯಾಗಿರುವಂತಹ ಘಟನೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ‌ ರಾರಾವಿ ಬಳಿ ವೇದಾವತಿ ನದಿಯಲ್ಲಿ ನಡೆದಿದೆ. ಮುದೇನೂರು ಬಳಿ ಶನೇಶ್ವರ ದೇಗುಲದ ಆವರಣದಲ್ಲಿದ್ದ ಅರ್ಚಕರ ಕುಟುಂಬದ 6 ಜನರು ಸಿಲುಕಿದ್ದು, ಸಂತ್ರಸ್ತರನ್ನ ರಕ್ಷಿಸಲು ತೆರಳಿದ ವೇಳೆ ಬೋಟ್ ಪಲ್ಟಿಯಾಗಿದೆ. ಬೋಟ್​​ನಲ್ಲಿ ಸಂತ್ರಸ್ತರು ಸೇರಿ 10 ಜನರಿದ್ದರು ಎನ್ನಲಾಗುತ್ತಿದೆ. ಬೋಟ್​ ಪಲ್ಟಿಯಾದ ಹಿನ್ನೆಲೆ ಸಂತ್ರಸ್ತರು ಮತ್ತೆ ದೇಗುಲದಲ್ಲೇ ಆಶ್ರಯ ಪಡೆದಿದ್ದಾರೆ. ರಕ್ಷಣಾ ಕಾರ್ಯ ಸಾಧ್ಯವಾಗದ ಹಿನ್ನಲೆ ಮರಳಿ  ಅರ್ಚಕರ ಕುಟುಂಬ ದೇವಸ್ಥಾನದಲ್ಲಿ‌ ಆಶ್ರಯ ಪಡೆದಿದ್ದಾರೆ.

ರಾರಾವಿ ಸೇತುವೆ ಮೇಲೆ ವಾಹನಗಳ ಓಡಾಟಕ್ಕೆ ನಿರ್ಬಂಧ

ಭಾರಿ ಮಳೆಯಿಂದ ವೇದಾವತಿ ನದಿ ಉಕ್ಕಿ ಹರಿಯುತ್ತಿದೆ. ರಾರಾವಿ ಸೇತುವೆ ಮೇಲೆ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಿದ್ದು, ರಾರಾವಿ ಮಾರ್ಗವಾಗಿ ಆಂಧ್ರಪ್ರದೇಶಕ್ಕೆ ಸಂಪರ್ಕ ಕಡಿತವಾಗಿದೆ. ಜಿಲ್ಲೆಯ ಶಿರಗುಪ್ಪ ತಾಲೂಕಿನ ರಾರಾವಿ ಗ್ರಾಮ. ಸೇತುವೆ ಬಳಿ ಪೊಲೀಸ್ ಸಿಬ್ಬಂದಿ ಬ್ಯಾರಿಕೇಡ್ ಹಾಕಿದ್ದಾರೆ. ವೇದಾವತಿ ಪ್ರವಾಹಕ್ಕೆ 250ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿರುವಂತಹ ಘಟನೆ ಬಸರಕೋಡ್ ಗ್ರಾಮದಲ್ಲಿ ನಡೆದಿದೆ. ಮನೆಗಳು ಜಲಾವೃತ ಹಿನ್ನೆಲೆ ದೇವಸ್ಥಾನದಲ್ಲಿ ಆಶ್ರಯ ಪಡೆಯಲಾಗಿದೆ. 3 ದಿನಗಳಿಂದ ವೇದಾವತಿ ನದಿ ಪ್ರವಾಹ ಹೆಚ್ಚುತ್ತಿದೆ.

ಗ್ರಾಮ ಪಂಚಾಯತ ಸದಸ್ಯರಿಂದ ತೆಪ್ಪದ ಮೂಲಕ ಮನೆ ಮನೆಗೂ ತೆರಳಿ ಆಹಾರ ವಿತರಣೆ ಮಾಡಲಾಗಿದೆ. ಮೂರು ದಿನಗಳಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾದ್ರು, ಜಿಲ್ಲಾಡಳಿತ ಗಂಜಿ ಕೇಂದ್ರ ತೆರೆದಿಲ್ಲ. ಗ್ರಾಮದ ಸಂತ್ರಸ್ತರಿಗೆ ಗ್ರಾಮ ಪಂಚಾಯತ ಸದಸ್ಯರಿಂದ ಆಹಾರ ವಿತರಣೆ ಮಾಡಲಾಗಿದೆ. ಗ್ರಾಮದ ದೇವಸ್ಥಾನ, ‌ಸಮುದಾಯ ಭವನ, ಶಾಲೆಯಲ್ಲಿ ವಾಸವಾಗಿರುವ ಸಂತ್ರಸ್ತರಿಗೆ ಆಹಾರ ವಿತರಣೆ ಮಾಡಲಾಗಿದೆ.

ಡ್ಯಾಂನಿಂದ ನದಿಗೆ 1.4 ಲಕ್ಷ ಕ್ಯೂಸೆಕ್​ ನೀರು ಬಿಡುಗಡೆ

ರಾಜ್ಯದಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಬಿಡಲಾಗಿದೆ .ತುಂಗಭದ್ರಾ ಜಲಾಶಯದಿಂದ ನದಿಗೆ 1 ಲಕ್ಷದ 4 ಸಾವಿರದ 755 ಕ್ಯೂಸೆಕ್ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಒಳಹರಿವಿನಲ್ಲಿ ಒಂದುವರೆ ಲಕ್ಷಕ್ಕೂ ಹೆಚ್ಚು ಕ್ಯೂಸೆಕ್‌ ಇರೋ‌ ಹಿನ್ನಲೆ, ಮಲೆನಾಡು ಸೇರಿದಂತೆ ಅವಳಿ‌ ಜಿಲ್ಲೆಯಲ್ಲಿ ಮಳೆಯ ಜೋರಾಗಿದೆ. 28 ಗೇಟ್​ಗಳ ಮೂಲಕ ಜಲಾಶಯಕ್ಕೆ ನೀರು ಬಿಡುಗಡೆ ಮಾಡಿದ್ದು, 20 ಗೇಟ್ ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ನದಿಗೆ ಬಿಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 1:14 pm, Thu, 8 September 22

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?