AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಾವತಿ ನದಿ ಪ್ರವಾಹದಲ್ಲಿ ಸಿಲುಕಿದ ಅರ್ಚಕ ಕುಟುಂಬ: ರಕ್ಷಣೆಗೆ ತೆರಳಿದ್ದ ಬೋಟ್ ಪಲ್ಟಿ

ಮುದೇನೂರು ಬಳಿ ಶನೇಶ್ವರ ದೇಗುಲದ ಆವರಣದಲ್ಲಿದ್ದ ಅರ್ಚಕರ ಕುಟುಂಬದ 6 ಜನರು ಸಿಲುಕಿದ್ದು, ಸಂತ್ರಸ್ತರನ್ನ ರಕ್ಷಿಸಲು ತೆರಳಿದ ವೇಳೆ ಬೋಟ್ ಪಲ್ಟಿಯಾಗಿದೆ. ಬೋಟ್​​ನಲ್ಲಿ ಸಂತ್ರಸ್ತರು ಸೇರಿ 10 ಜನರಿದ್ದರು ಎನ್ನಲಾಗುತ್ತಿದೆ.

ವೇದಾವತಿ ನದಿ ಪ್ರವಾಹದಲ್ಲಿ ಸಿಲುಕಿದ ಅರ್ಚಕ ಕುಟುಂಬ: ರಕ್ಷಣೆಗೆ ತೆರಳಿದ್ದ ಬೋಟ್ ಪಲ್ಟಿ
ರಕ್ಷಣೆಗೆ ತೆರಳಿದ್ದ ಬೋಟ್ ಪಲ್ಟಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Sep 08, 2022 | 1:25 PM

ಬಳ್ಳಾರಿ: ವೇದಾವತಿ ನದಿಯ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತವಾಗಿದ್ದು, ಪ್ರವಾಹದಲ್ಲಿ ಸಿಲುಕಿದ್ದ ಅರ್ಚಕ ಕುಟುಂಬ ರಕ್ಷಣೆಗೆ ತೆರಳಿದ್ದ ಬೋಟ್ ಪಲ್ಟಿಯಾಗಿರುವಂತಹ ಘಟನೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ‌ ರಾರಾವಿ ಬಳಿ ವೇದಾವತಿ ನದಿಯಲ್ಲಿ ನಡೆದಿದೆ. ಮುದೇನೂರು ಬಳಿ ಶನೇಶ್ವರ ದೇಗುಲದ ಆವರಣದಲ್ಲಿದ್ದ ಅರ್ಚಕರ ಕುಟುಂಬದ 6 ಜನರು ಸಿಲುಕಿದ್ದು, ಸಂತ್ರಸ್ತರನ್ನ ರಕ್ಷಿಸಲು ತೆರಳಿದ ವೇಳೆ ಬೋಟ್ ಪಲ್ಟಿಯಾಗಿದೆ. ಬೋಟ್​​ನಲ್ಲಿ ಸಂತ್ರಸ್ತರು ಸೇರಿ 10 ಜನರಿದ್ದರು ಎನ್ನಲಾಗುತ್ತಿದೆ. ಬೋಟ್​ ಪಲ್ಟಿಯಾದ ಹಿನ್ನೆಲೆ ಸಂತ್ರಸ್ತರು ಮತ್ತೆ ದೇಗುಲದಲ್ಲೇ ಆಶ್ರಯ ಪಡೆದಿದ್ದಾರೆ. ರಕ್ಷಣಾ ಕಾರ್ಯ ಸಾಧ್ಯವಾಗದ ಹಿನ್ನಲೆ ಮರಳಿ  ಅರ್ಚಕರ ಕುಟುಂಬ ದೇವಸ್ಥಾನದಲ್ಲಿ‌ ಆಶ್ರಯ ಪಡೆದಿದ್ದಾರೆ.

ರಾರಾವಿ ಸೇತುವೆ ಮೇಲೆ ವಾಹನಗಳ ಓಡಾಟಕ್ಕೆ ನಿರ್ಬಂಧ

ಭಾರಿ ಮಳೆಯಿಂದ ವೇದಾವತಿ ನದಿ ಉಕ್ಕಿ ಹರಿಯುತ್ತಿದೆ. ರಾರಾವಿ ಸೇತುವೆ ಮೇಲೆ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಿದ್ದು, ರಾರಾವಿ ಮಾರ್ಗವಾಗಿ ಆಂಧ್ರಪ್ರದೇಶಕ್ಕೆ ಸಂಪರ್ಕ ಕಡಿತವಾಗಿದೆ. ಜಿಲ್ಲೆಯ ಶಿರಗುಪ್ಪ ತಾಲೂಕಿನ ರಾರಾವಿ ಗ್ರಾಮ. ಸೇತುವೆ ಬಳಿ ಪೊಲೀಸ್ ಸಿಬ್ಬಂದಿ ಬ್ಯಾರಿಕೇಡ್ ಹಾಕಿದ್ದಾರೆ. ವೇದಾವತಿ ಪ್ರವಾಹಕ್ಕೆ 250ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿರುವಂತಹ ಘಟನೆ ಬಸರಕೋಡ್ ಗ್ರಾಮದಲ್ಲಿ ನಡೆದಿದೆ. ಮನೆಗಳು ಜಲಾವೃತ ಹಿನ್ನೆಲೆ ದೇವಸ್ಥಾನದಲ್ಲಿ ಆಶ್ರಯ ಪಡೆಯಲಾಗಿದೆ. 3 ದಿನಗಳಿಂದ ವೇದಾವತಿ ನದಿ ಪ್ರವಾಹ ಹೆಚ್ಚುತ್ತಿದೆ.

ಗ್ರಾಮ ಪಂಚಾಯತ ಸದಸ್ಯರಿಂದ ತೆಪ್ಪದ ಮೂಲಕ ಮನೆ ಮನೆಗೂ ತೆರಳಿ ಆಹಾರ ವಿತರಣೆ ಮಾಡಲಾಗಿದೆ. ಮೂರು ದಿನಗಳಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾದ್ರು, ಜಿಲ್ಲಾಡಳಿತ ಗಂಜಿ ಕೇಂದ್ರ ತೆರೆದಿಲ್ಲ. ಗ್ರಾಮದ ಸಂತ್ರಸ್ತರಿಗೆ ಗ್ರಾಮ ಪಂಚಾಯತ ಸದಸ್ಯರಿಂದ ಆಹಾರ ವಿತರಣೆ ಮಾಡಲಾಗಿದೆ. ಗ್ರಾಮದ ದೇವಸ್ಥಾನ, ‌ಸಮುದಾಯ ಭವನ, ಶಾಲೆಯಲ್ಲಿ ವಾಸವಾಗಿರುವ ಸಂತ್ರಸ್ತರಿಗೆ ಆಹಾರ ವಿತರಣೆ ಮಾಡಲಾಗಿದೆ.

ಡ್ಯಾಂನಿಂದ ನದಿಗೆ 1.4 ಲಕ್ಷ ಕ್ಯೂಸೆಕ್​ ನೀರು ಬಿಡುಗಡೆ

ರಾಜ್ಯದಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಬಿಡಲಾಗಿದೆ .ತುಂಗಭದ್ರಾ ಜಲಾಶಯದಿಂದ ನದಿಗೆ 1 ಲಕ್ಷದ 4 ಸಾವಿರದ 755 ಕ್ಯೂಸೆಕ್ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಒಳಹರಿವಿನಲ್ಲಿ ಒಂದುವರೆ ಲಕ್ಷಕ್ಕೂ ಹೆಚ್ಚು ಕ್ಯೂಸೆಕ್‌ ಇರೋ‌ ಹಿನ್ನಲೆ, ಮಲೆನಾಡು ಸೇರಿದಂತೆ ಅವಳಿ‌ ಜಿಲ್ಲೆಯಲ್ಲಿ ಮಳೆಯ ಜೋರಾಗಿದೆ. 28 ಗೇಟ್​ಗಳ ಮೂಲಕ ಜಲಾಶಯಕ್ಕೆ ನೀರು ಬಿಡುಗಡೆ ಮಾಡಿದ್ದು, 20 ಗೇಟ್ ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ನದಿಗೆ ಬಿಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 1:14 pm, Thu, 8 September 22

ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ