ಹೊಸಪೇಟೆಯಲ್ಲಿ ಪುನೀತ್ ಅಭಿಮಾನಿಗಳಿಂದ 7.4 ಅಡಿ ಎತ್ತರದ ಪುತ್ಥಳಿ ಅನಾವರಣ; ನೆಲಮುಟ್ಟಿ ನಮಸ್ಕರಿಸಿದ ರಾಘವೇಂದ್ರ ರಾಜಕುಮಾರ್

7.4 ಅಡಿ ಎತ್ತರದ ಅಪ್ಪು ಪುತ್ಥಳಿಯನ್ನು ಆಂಧ್ರಪ್ರದೇಶದ ಗುಂಟೂರಿನ ತೆನಾಲಿಯಲ್ಲಿ ರೂಪಿಸಿ, 5 ತಿಂಗಳ ಹಿಂದೆಯೇ ನಗರಕ್ಕೆ ತರಲಾಗಿದೆ ಒಟ್ಟು 6.4 ಲಕ್ಷ ರೂಪಾಯಿ ವೆಚ್ಚದಲ್ಲಿ ಪುತ್ಥಳಿ ನಿರ್ಮಾಣವಾಗಿದೆ.

ಹೊಸಪೇಟೆಯಲ್ಲಿ ಪುನೀತ್ ಅಭಿಮಾನಿಗಳಿಂದ 7.4 ಅಡಿ ಎತ್ತರದ ಪುತ್ಥಳಿ ಅನಾವರಣ; ನೆಲಮುಟ್ಟಿ ನಮಸ್ಕರಿಸಿದ ರಾಘವೇಂದ್ರ ರಾಜಕುಮಾರ್
ಪುನೀತ್ ಅಭಿಮಾನಿಗಳಿಂದ 7.4 ಅಡಿ ಎತ್ತರದ ಪುತ್ಥಳಿ ಅನಾವರಣ
Follow us
| Updated By: ಆಯೇಷಾ ಬಾನು

Updated on:Jun 05, 2022 | 8:05 PM

ವಿಜಯನಗರ: ಯಾರೇ ಕೈ ಬಿಟ್ಟರೂ ಹೊಸಪೇಟೆ ಜನ ನಮ್ಮನ್ನೆಂದೂ ಬಿಡಲ್ಲ’ ಎಂದು ಅಭಿಮಾನಿಗಳ ಪ್ರೀತಿಯನ್ನು ನೆನೆಯುತ್ತಿದ್ದ ದಿವಂಗತ ನಟ ಪುನೀತ್ ರಾಜ್ ಕುಮಾರ್‌ ಅವರ ಕಂಚಿನ ಪುತ್ಥಳಿ ಅನಾವರಣಗೊಂಡಿದೆ. ಪುನೀತ ರಾಜಕುಮಾರ್ ಪ್ರತಿಮೆ ಅನಾವರಣಕ್ಕೆ ರಾಜ್ ಕುಟುಂಬವೇ ಸಾಕ್ಷಿಯಾಗಿದೆ. ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ರಾಘವೇಂದ್ರ ರಾಜಕುಮಾರ್, ಅವರ ಪತ್ನಿ ಮಂಗಳಾ, ನಿರ್ದೇಶಕ ಸಂತೋಷ ಆನಂದರಾಮ, ಗುರುಕಿರಣ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.

ಹೊಸಪೇಟೆಯ ಬಗ್ಗೆ ವಿಶೇಷ ಪ್ರೀತಿ ಮತ್ತು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದ ಅಪ್ಪುವಿನ ಕಂಚಿನ ಪುತ್ಥಳಿಯನ್ನು ನಗರದ ತಾಲೂಕು ಕಚೇರಿ ಸಮೀಪದಲ್ಲಿ ಅವರದೇ ಹೆಸರಿನ ಪುನೀತ್ ರಾಜ್‌ಕುಮಾರ್ ವೃತ್ತದಲ್ಲಿ ಸ್ಥಾಪಿಸಿರುವುದು ವಿಶೇಷವಾಗಿದೆ. ಇದನ್ನೂ ಓದಿ: ಮಾಡೋಕೆ ಕೆಲಸ ಇಲ್ಲ ಅವರಿಗೆ, ನಮ್ಮ ಹಳೇ ಚಡ್ಡಿಗಳನ್ನು ಕೊಡುತ್ತೇವೆ ಸುಟ್ಕುಂಡು ಇರಲಿ: ಸಿಟಿ ರವಿ

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಪುತ್ಥಳಿ ಅನಾವರಣಕ್ಕೂ ಮುನ್ನ ನಿರ್ದೇಶಕ ಸಂತೋಷ ಆನಂದ್ ರಾಮ್ ಜ್ಯೋತಿಗೆ ಚಾಲನೆ ಕೊಟ್ಟರು. ಹೊಸಪೇಟೆಯ ವಡಕರಾಯ ದೇವಾಲಯದಿಂದ ಪುನೀತ್ ರಾಜ್‍ಕುಮಾರ್ ವೃತ್ತದವರೆಗೆ ಜ್ಯೋತಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಅಪ್ಪು ಭಾವಚಿತ್ರಗಳು ರಾರಾಜಿಸಿದವು. ಸಂತೋಷ್ ಆನಂದ್ ರಾಮ್ ಜೊತೆ ಸೆಲ್ಪಿ ತೆಗೆಸಿಕೊಳ್ಳಲು ಯುವಕರು ಮುಗಿಬಿದ್ದಿದ್ದರು. ಪುನೀತ ರಾಜಕುಮಾರ್ ಭಾವಚಿತ್ರ ಹಿಡಿದು ಸ್ಕೇಟಿಂಗ್ ಮಾಡೋ ಮೂಲಕ ಮಕ್ಕಳು ಅಪ್ಪುಗೆ ಗೌರವ ಸಲ್ಲಿಸಿದ್ರು.

ಕನ್ನಡ ಚಿತ್ರರಂಗದ ಖ್ಯಾತ ನಟ ದಿ.ಪುನೀತ್ ರಾಜ್ ಕುಮಾರ್ ಅವರಿಗೆ ಹೊಸಪೇಟೆಯಲ್ಲಿ ವಿಶೇಷ ಅಭಿಮಾನಿಗಳ ಬಳಗವಿದೆ. ಅಕಾಲಿಕ ಅಗಲಿಕೆಯಿಂದ ದಿಗ್ಗಾಂತರಾಗಿದ್ದ ಅಭಿಮಾನಿಗಳು ಇದೀಗ ಅಪ್ಪು ನೆನಪಿಗಾಗಿ ನಗರದ ಹೃದಯಭಾಗದ ವೃತ್ತದಲ್ಲಿ ಪುತ್ಥಳಿ ಸ್ಥಾಪಿಸಲು ಯೋಚಿಸಿ ಅಂದುಕೊಂಡಂತೆ ಪುತ್ಥಳಿ ಪ್ರತಿಮೆ ಸ್ಪಾಪನೆ ಮಾಡಿದ್ದಾರೆ. ತಮ್ಮ ನೆಚ್ಚಿನ ನಟನ ಹೆಸರನ್ನು ಜಿಲ್ಲಾಕ್ರೀಡಾಂಗಣ ವೃತ್ತಕ್ಕೆ ನಾಮಕರಣ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಇದೇ ವೃತ್ತದಲ್ಲಿ ಪುನೀತ್ ಕಂಚಿನ ಮತ್ಥಳಿ ಅನಾವರಣ ಇವುಗಳಿಗೆ ಕಳಶಪ್ರಾಯವಾಗಿದೆ.

Puneeth Statue 1

ಪುನೀತ್ ರಾಜ್ ಕುಮಾರ್‌ ಪುತ್ಥಳಿ ಅನಾವರಣ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

7.4 ಅಡಿ ಪುತ್ಥಳಿ 7.4 ಅಡಿ ಎತ್ತರದ ಅಪ್ಪು ಪುತ್ಥಳಿಯನ್ನು ಆಂಧ್ರಪ್ರದೇಶದ ಗುಂಟೂರಿನ ತೆನಾಲಿಯಲ್ಲಿ ರೂಪಿಸಿ, 5 ತಿಂಗಳ ಹಿಂದೆಯೇ ನಗರಕ್ಕೆ ತರಲಾಗಿದೆ ಒಟ್ಟು 6.4 ಲಕ್ಷ ರೂಪಾಯಿ ವೆಚ್ಚದಲ್ಲಿ ಪುತ್ಥಳಿ ನಿರ್ಮಾಣವಾಗಿದೆ. ಪ್ರತಿಮೆ ಅನಾವರಣಗೊಳಿಸಲು ಡಾ.ರಾಜ್ ಕುಮಾರ್ ಕುಟುಂಬ ಹೊಸಪೇಟೆಗೆ ಬಂದಿದೆ. ಈ ಹಿಂದೆಯೂ ಪವರ್ ಸಿನಿಮಾದ ಆಡಿಯೋ ಬಿಡುಗಡೆ ವೇಳೆ ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮತ್ತು ಸಿನಿಮಾ ಶೂಟಿಂಗ್‌ಗೆ ಬಂದಿರುವ ಕುಟುಂಬ ಬಹಳ ದಿನಗಳ ನಂತರ ಮತ್ತೆ ಹೊಸಪೇಟೆಗೆ ಬಂದಿದೆ. ಇದನ್ನೂ ಓದಿ:  ಕಾನ್ಪುರ್ ಹಿಂಸಾಚಾರ: ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

Published On - 7:58 pm, Sun, 5 June 22

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ