AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಣು ಕಾಣದ 58 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ, ಆಸ್ಪತ್ರೆಯಿಂದ ವಾಪಸಾದ ಮಹಿಳೆ ಆತ್ಮಹತ್ಯೆಗೆ ಶರಣು, ಕಾಮುಕನ ಅರೆಸ್ಟ್​​ ಮಾಡಿರುವ ಹಗರಿಬೊಮ್ಮನಹಳ್ಳಿ ಪೊಲೀಸರು

ಮಹಿಳೆಯ ಮೇಲೆ ಮೇ 30 ರಂದು ಆರೋಪಿ ಲೋಕೇಶ ನಾಯ್ಕ್ ಅತ್ಯಾಚಾರವೆಸಗಿ ಪರಾರಿಯಾಗಿದ್ದ. ಈ ಹೇಯ ಕುಕೃತ್ಯದ ಬಳಿಕ ಸಂತ್ರಸ್ತ ಮಹಿಳೆಯನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಶುಕ್ರವಾರ ಊರಿಗೆ ಮರಳಿದ ಮಹಿಳೆ ವಯಸ್ಸಾದ ತನಗೇ ಹಿಂಗಾಯ್ತಲ್ಲ ಎಂದು ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಣ್ಣು ಕಾಣದ 58 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ, ಆಸ್ಪತ್ರೆಯಿಂದ ವಾಪಸಾದ ಮಹಿಳೆ ಆತ್ಮಹತ್ಯೆಗೆ ಶರಣು, ಕಾಮುಕನ ಅರೆಸ್ಟ್​​ ಮಾಡಿರುವ ಹಗರಿಬೊಮ್ಮನಹಳ್ಳಿ ಪೊಲೀಸರು
ಅತ್ಯಾಚಾರ, ಆಸ್ಪತ್ರೆಯಿಂದ ವಾಪಸಾದ ಮಹಿಳೆ ಆತ್ಮಹತ್ಯೆಗೆ ಶರಣು (ಒಳ ಚಿತ್ರ ಲೋಕೇಶ ನಾಯ್ಕ್)
ಸಾಧು ಶ್ರೀನಾಥ್​
|

Updated on: Jun 03, 2023 | 7:07 AM

Share

ಇದು ಇಡೀ ನಾಗರಿಕ ಸಮಾಜವೇ ನಾಚಿಕೆಯಿಂದ ತಲೆತಗ್ಗಿಸುವಂತಹ ಸುದ್ದಿ. ಆ ಮಹಿಳೆಗೆ (woman) ಕಣ್ಣು ಕಾಣ್ತಿರಲಿಲ್ಲ. ಮಗಳು ಮತ್ತು ಮನೆಯವರೆಲ್ಲಾ ಊರನಲ್ಲಿನ ಮದುವೆ ಸಮಾರಂಭದಲ್ಲಿದ್ರು. ಇದೇ ವೇಳೆ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಕಾಮುಕನೊಬ್ಬ ಯಾರೂ ಉಹಿಸಲಾಗದಂತಹ ಕೃತ್ಯ ಎಸಗಿದ್ದ. ತಾಯಿ ವಯಸ್ಸಿನ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹಲ್ಲೆ ಮಾಡಿದ್ದಾನೆ. ಅತ್ಯಾಚಾರದ (Rape) ನಂತರ ಮನನೊಂದು ಮಹಿಳೆ ಆತ್ಮಹತ್ಯೆಗೆ (Rape) ಶರಣಾದ ಮನಕಲಕುವ ಘಟನೆ ನಿನ್ನೆ ಶುಕ್ರವಾರ ನಡೆದಿದೆ. ದುರ್ದೈವ ಅಂದ್ರೆ ಆಕೆ ಕಣ್ಣು ಕಾಣದ ಮಹಿಳೆ. ಇದರಿಂದ ರೊಚ್ಚಿಗೆದ್ದಿರುವ ಗ್ರಾಮಸ್ಥರು ಬೇಕೇ ಬೇಕು ನ್ಯಾಯ ಬೇಕು ಅಂತಾ ಪೊಲೀಸರ ಮುಂದೆ ಜಮಾವಣೆಯಾಗಿದ್ದರು. ಕಾಮುಕನ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರ ಜೊತೆ ವಾಗ್ವಾದ ಮಾಡಿದರು. ಸ್ಥಳಕ್ಕೆ ತಡವಾಗಿ ಬಂದ ಹಗರಿಬೊಮ್ಮನಹಳ್ಳಿ (hagaribommanahalli) ತಹಶೀಲ್ದಾರ್​​ರನ್ನು ತರಾಟೆಗೆ ತಗೆದುಕೊಂಡರು. ಮಹಿಳೆಯ ಮೇಲೆ ನಡೆದ ಹೇಯ ಕೃತ್ಯ ಕಂಡು ಮಹಿಳೆಯರು ಕಣ್ಣೀರು ಹಾಕಿದರು. ತಾಯಿ ವಯಸ್ಸಿನ ವೃದ್ದೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವುದಕ್ಕೆ ಆಕ್ರೋಶಗೊಂಡ ನಾಗರಿಕ ಸಮಾಜದ ದೃಶ್ಯಗಳಿವು..

ಮೇಲಿನ ಪೋಟೋದಲ್ಲಿ ಪೋಸ್ ಕೊಟ್ಟಿರುವ ಇವನಿಗೆ ಅದ್ಯಾವ ಶಿಕ್ಷೆ ಕೊಟ್ರು ಕಮ್ಮಿನೇ.. ಇವನ ಹೆಸರು ಲೋಕೇಶ ನಾಯ್ಕ್. ಈ ಲೋಕೇಶ ಲೋಕದಲ್ಲಿ ಯಾರೂ ಮೆಚ್ಚದಂತಹ ಕೆಲಸ ಮಾಡಿದ್ದಾನೆ ನೋಡಿ. ಹಗರಿಬೊಮ್ಮನಹಳ್ಳಿ ತಾಲೂಕಿನ ವ್ಯಾಸಾಪುರ ತಾಂಡದ ಈ ಲೋಕೇಶ ನಾಯ್ಕ್ ಮದುವೆಯಾಗಿದ್ದು, ಅವನಿಗೆ ಮಕ್ಕಳಿದ್ದಾರೆ. ಅಂತಹುದರಲ್ಲಿ ತನ್ನ ತಾಯಿ ವಯಸ್ಸಿನ ವೃದ್ದೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ಥ ಮಹಿಳೆಯ ಮನೆಯವರು ಊರಲ್ಲಿನ ಮದುವೆ ಸಮಾರಂಭದಲ್ಲಿ ಸಂಭ್ರಮಿಸುತ್ತಿದ್ದರೆ ಈ ಪಾಪಿ ಮನೆಯಲ್ಲಿ ಒಂಟಿಯಾಗಿದ್ದ ವೃದ್ದೆಯ ಮೇಲೆ ಅತ್ಯಾಚಾರವೆಸಗಿ, ತನ್ನಕರಾಳತೆ ತೋರಿದ್ದಾನೆ. ಕಣ್ಣು ಕಾಣದ ವೃದ್ದೆಗೆ ಸಹಾಯ ಮಾಡುವ ನೆಪದಲ್ಲಿ ಯಾರೂ ಇಲ್ಲದ ಮನೆಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಿ ಅತ್ಯಾಚಾರವೆಸಗಿದ್ದಾನೆ ಈ ದುರುಳ.

58 ವರ್ಷದ ಕಣ್ಣು ಕಾಣದ ಈ ಮಹಿಳೆಯ ಮೇಲೆ ಮೇ 30 ರಂದು ಅತ್ಯಾಚಾರವೆಸಗಿ ಆರೋಪಿ ಲೋಕೇಶ ನಾಯ್ಕ್ ಪರಾರಿಯಾಗಿದ್ದ. ಲೋಕೇಶನ ಕುಕೃತ್ಯದಿಂದ ತೀವ್ರವಾಗಿ ಗಾಯಗೊಂಡಿದ್ದ ಸಂತ್ರಸ್ತ ವೃದ್ದೆಯನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಶುಕ್ರವಾರ ಊರಿಗೆ ಮರಳಿದ ಮಹಿಳೆಯು ವಯಸ್ಸಾದ ತನಗೇ ಹಿಂಗಾಯ್ತಲ್ಲ ಎಂದು ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವೃದ್ದೆಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಜಮಾಯಿಸಿದ್ದು, ಪೊಲೀಸರು ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ತಾಯಿ ವಯಸ್ಸಿನ ವೃದ್ದೆಯ ಮೇಲೆ ಹೇಯ ಕೃತ್ಯ ಎಸಗಿದ ಕಾಮುಕನಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಪೊಲೀಸರ ಜೊತೆ ವಾಗ್ವಾದ ನಡೆಸಿದರು. ವೃದ್ದೆಯ ಮೇಲೆ ಅತ್ಯಾಚಾರವಾದರೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಾರದ ಪರಿಣಾಮ ಗ್ರಾಮಸ್ಥರು ಪಟ್ಟು ಹಿಡಿದ ಬಳಿಕ ಹಗರಿಬೊಮ್ಮನಹಳ್ಳಿ ತಹಶೀಲ್ದಾರ್​​ ಸ್ಥಳಕ್ಕೆ ಆಗಮಿಸಿದ್ದರು. ಸಂಬಂಧಿಕರು ಅವರನ್ನೂ ತರಾಟೆಗೆ ತಗೆದುಕೊಂಡರು.

ಕೊನೆಗೆ ತಹಶೀಲ್ದಾರ್​​ ಮತ್ತು ಪೊಲೀಸರು ಆರೋಪಿ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಗ್ರಾಮಸ್ಥರನ್ನ ಸಮಾಧಾನಪಡಿಸಿದರು. ಕಣ್ಣು ಕಾಣದ ವೃದ್ದೆಯ ಮೇಲೆ ಅತ್ಯಾಚಾರವೆಸಗಿರುವ ಕಾಮುಕ ಲೋಕೇಶ ನಾಯ್ಕ್ ನನ್ನ ಪೊಲೀಸರು ಈಗಾಗಲೇ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಗ್ರಾಮಸ್ಥರು ಮಾತ್ರ, ಹೇಯ ಕೃತ್ಯ ಎಸಗಿರುವ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗ ಮಾತ್ರ ಇಂತಹ ಹೇಯ ಕೃತ್ಯಗಳಿಗೆ ಕಡಿವಾಣ ಬೀಳಬಹುದಾಗಿದೆ.

ವರದಿ: ವೀರೇಶ್​ ದಾನಿ, ಟಿವಿ9, ವಿಜಯನಗರ

Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ