ಕಣ್ಣು ಕಾಣದ 58 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ, ಆಸ್ಪತ್ರೆಯಿಂದ ವಾಪಸಾದ ಮಹಿಳೆ ಆತ್ಮಹತ್ಯೆಗೆ ಶರಣು, ಕಾಮುಕನ ಅರೆಸ್ಟ್​​ ಮಾಡಿರುವ ಹಗರಿಬೊಮ್ಮನಹಳ್ಳಿ ಪೊಲೀಸರು

ಮಹಿಳೆಯ ಮೇಲೆ ಮೇ 30 ರಂದು ಆರೋಪಿ ಲೋಕೇಶ ನಾಯ್ಕ್ ಅತ್ಯಾಚಾರವೆಸಗಿ ಪರಾರಿಯಾಗಿದ್ದ. ಈ ಹೇಯ ಕುಕೃತ್ಯದ ಬಳಿಕ ಸಂತ್ರಸ್ತ ಮಹಿಳೆಯನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಶುಕ್ರವಾರ ಊರಿಗೆ ಮರಳಿದ ಮಹಿಳೆ ವಯಸ್ಸಾದ ತನಗೇ ಹಿಂಗಾಯ್ತಲ್ಲ ಎಂದು ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಣ್ಣು ಕಾಣದ 58 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ, ಆಸ್ಪತ್ರೆಯಿಂದ ವಾಪಸಾದ ಮಹಿಳೆ ಆತ್ಮಹತ್ಯೆಗೆ ಶರಣು, ಕಾಮುಕನ ಅರೆಸ್ಟ್​​ ಮಾಡಿರುವ ಹಗರಿಬೊಮ್ಮನಹಳ್ಳಿ ಪೊಲೀಸರು
ಅತ್ಯಾಚಾರ, ಆಸ್ಪತ್ರೆಯಿಂದ ವಾಪಸಾದ ಮಹಿಳೆ ಆತ್ಮಹತ್ಯೆಗೆ ಶರಣು (ಒಳ ಚಿತ್ರ ಲೋಕೇಶ ನಾಯ್ಕ್)
Follow us
|

Updated on: Jun 03, 2023 | 7:07 AM

ಇದು ಇಡೀ ನಾಗರಿಕ ಸಮಾಜವೇ ನಾಚಿಕೆಯಿಂದ ತಲೆತಗ್ಗಿಸುವಂತಹ ಸುದ್ದಿ. ಆ ಮಹಿಳೆಗೆ (woman) ಕಣ್ಣು ಕಾಣ್ತಿರಲಿಲ್ಲ. ಮಗಳು ಮತ್ತು ಮನೆಯವರೆಲ್ಲಾ ಊರನಲ್ಲಿನ ಮದುವೆ ಸಮಾರಂಭದಲ್ಲಿದ್ರು. ಇದೇ ವೇಳೆ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಕಾಮುಕನೊಬ್ಬ ಯಾರೂ ಉಹಿಸಲಾಗದಂತಹ ಕೃತ್ಯ ಎಸಗಿದ್ದ. ತಾಯಿ ವಯಸ್ಸಿನ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹಲ್ಲೆ ಮಾಡಿದ್ದಾನೆ. ಅತ್ಯಾಚಾರದ (Rape) ನಂತರ ಮನನೊಂದು ಮಹಿಳೆ ಆತ್ಮಹತ್ಯೆಗೆ (Rape) ಶರಣಾದ ಮನಕಲಕುವ ಘಟನೆ ನಿನ್ನೆ ಶುಕ್ರವಾರ ನಡೆದಿದೆ. ದುರ್ದೈವ ಅಂದ್ರೆ ಆಕೆ ಕಣ್ಣು ಕಾಣದ ಮಹಿಳೆ. ಇದರಿಂದ ರೊಚ್ಚಿಗೆದ್ದಿರುವ ಗ್ರಾಮಸ್ಥರು ಬೇಕೇ ಬೇಕು ನ್ಯಾಯ ಬೇಕು ಅಂತಾ ಪೊಲೀಸರ ಮುಂದೆ ಜಮಾವಣೆಯಾಗಿದ್ದರು. ಕಾಮುಕನ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರ ಜೊತೆ ವಾಗ್ವಾದ ಮಾಡಿದರು. ಸ್ಥಳಕ್ಕೆ ತಡವಾಗಿ ಬಂದ ಹಗರಿಬೊಮ್ಮನಹಳ್ಳಿ (hagaribommanahalli) ತಹಶೀಲ್ದಾರ್​​ರನ್ನು ತರಾಟೆಗೆ ತಗೆದುಕೊಂಡರು. ಮಹಿಳೆಯ ಮೇಲೆ ನಡೆದ ಹೇಯ ಕೃತ್ಯ ಕಂಡು ಮಹಿಳೆಯರು ಕಣ್ಣೀರು ಹಾಕಿದರು. ತಾಯಿ ವಯಸ್ಸಿನ ವೃದ್ದೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವುದಕ್ಕೆ ಆಕ್ರೋಶಗೊಂಡ ನಾಗರಿಕ ಸಮಾಜದ ದೃಶ್ಯಗಳಿವು..

ಮೇಲಿನ ಪೋಟೋದಲ್ಲಿ ಪೋಸ್ ಕೊಟ್ಟಿರುವ ಇವನಿಗೆ ಅದ್ಯಾವ ಶಿಕ್ಷೆ ಕೊಟ್ರು ಕಮ್ಮಿನೇ.. ಇವನ ಹೆಸರು ಲೋಕೇಶ ನಾಯ್ಕ್. ಈ ಲೋಕೇಶ ಲೋಕದಲ್ಲಿ ಯಾರೂ ಮೆಚ್ಚದಂತಹ ಕೆಲಸ ಮಾಡಿದ್ದಾನೆ ನೋಡಿ. ಹಗರಿಬೊಮ್ಮನಹಳ್ಳಿ ತಾಲೂಕಿನ ವ್ಯಾಸಾಪುರ ತಾಂಡದ ಈ ಲೋಕೇಶ ನಾಯ್ಕ್ ಮದುವೆಯಾಗಿದ್ದು, ಅವನಿಗೆ ಮಕ್ಕಳಿದ್ದಾರೆ. ಅಂತಹುದರಲ್ಲಿ ತನ್ನ ತಾಯಿ ವಯಸ್ಸಿನ ವೃದ್ದೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ಥ ಮಹಿಳೆಯ ಮನೆಯವರು ಊರಲ್ಲಿನ ಮದುವೆ ಸಮಾರಂಭದಲ್ಲಿ ಸಂಭ್ರಮಿಸುತ್ತಿದ್ದರೆ ಈ ಪಾಪಿ ಮನೆಯಲ್ಲಿ ಒಂಟಿಯಾಗಿದ್ದ ವೃದ್ದೆಯ ಮೇಲೆ ಅತ್ಯಾಚಾರವೆಸಗಿ, ತನ್ನಕರಾಳತೆ ತೋರಿದ್ದಾನೆ. ಕಣ್ಣು ಕಾಣದ ವೃದ್ದೆಗೆ ಸಹಾಯ ಮಾಡುವ ನೆಪದಲ್ಲಿ ಯಾರೂ ಇಲ್ಲದ ಮನೆಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಿ ಅತ್ಯಾಚಾರವೆಸಗಿದ್ದಾನೆ ಈ ದುರುಳ.

58 ವರ್ಷದ ಕಣ್ಣು ಕಾಣದ ಈ ಮಹಿಳೆಯ ಮೇಲೆ ಮೇ 30 ರಂದು ಅತ್ಯಾಚಾರವೆಸಗಿ ಆರೋಪಿ ಲೋಕೇಶ ನಾಯ್ಕ್ ಪರಾರಿಯಾಗಿದ್ದ. ಲೋಕೇಶನ ಕುಕೃತ್ಯದಿಂದ ತೀವ್ರವಾಗಿ ಗಾಯಗೊಂಡಿದ್ದ ಸಂತ್ರಸ್ತ ವೃದ್ದೆಯನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಶುಕ್ರವಾರ ಊರಿಗೆ ಮರಳಿದ ಮಹಿಳೆಯು ವಯಸ್ಸಾದ ತನಗೇ ಹಿಂಗಾಯ್ತಲ್ಲ ಎಂದು ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವೃದ್ದೆಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಜಮಾಯಿಸಿದ್ದು, ಪೊಲೀಸರು ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ತಾಯಿ ವಯಸ್ಸಿನ ವೃದ್ದೆಯ ಮೇಲೆ ಹೇಯ ಕೃತ್ಯ ಎಸಗಿದ ಕಾಮುಕನಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಪೊಲೀಸರ ಜೊತೆ ವಾಗ್ವಾದ ನಡೆಸಿದರು. ವೃದ್ದೆಯ ಮೇಲೆ ಅತ್ಯಾಚಾರವಾದರೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಾರದ ಪರಿಣಾಮ ಗ್ರಾಮಸ್ಥರು ಪಟ್ಟು ಹಿಡಿದ ಬಳಿಕ ಹಗರಿಬೊಮ್ಮನಹಳ್ಳಿ ತಹಶೀಲ್ದಾರ್​​ ಸ್ಥಳಕ್ಕೆ ಆಗಮಿಸಿದ್ದರು. ಸಂಬಂಧಿಕರು ಅವರನ್ನೂ ತರಾಟೆಗೆ ತಗೆದುಕೊಂಡರು.

ಕೊನೆಗೆ ತಹಶೀಲ್ದಾರ್​​ ಮತ್ತು ಪೊಲೀಸರು ಆರೋಪಿ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಗ್ರಾಮಸ್ಥರನ್ನ ಸಮಾಧಾನಪಡಿಸಿದರು. ಕಣ್ಣು ಕಾಣದ ವೃದ್ದೆಯ ಮೇಲೆ ಅತ್ಯಾಚಾರವೆಸಗಿರುವ ಕಾಮುಕ ಲೋಕೇಶ ನಾಯ್ಕ್ ನನ್ನ ಪೊಲೀಸರು ಈಗಾಗಲೇ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಗ್ರಾಮಸ್ಥರು ಮಾತ್ರ, ಹೇಯ ಕೃತ್ಯ ಎಸಗಿರುವ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗ ಮಾತ್ರ ಇಂತಹ ಹೇಯ ಕೃತ್ಯಗಳಿಗೆ ಕಡಿವಾಣ ಬೀಳಬಹುದಾಗಿದೆ.

ವರದಿ: ವೀರೇಶ್​ ದಾನಿ, ಟಿವಿ9, ವಿಜಯನಗರ

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ